ಕುಂದಾಪುರ, ಡಿ.30: ಹಣವ ವಿಚಾರದಲ್ಲಿ ಬೇಸರಗೊಂಡು ಡಿ. 27ರಂದು ಮನೆಯಲ್ಲಿ ಮದ್ಯದೊಂದಿಗೆ ವಿಷ ಬೆರಸಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹಿಲ್ಕೋಡುವಿನ ಮಹಾಬಲ ಪೂಜಾರಿ(60) ಎಂಬವರು ಡಿ.30ರಂದು ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.