Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಸರಕಾರಕ್ಕೆ 3 ದಿನದ ಗಡುವು...

ಗುಜರಾತ್: ಸರಕಾರಕ್ಕೆ 3 ದಿನದ ಗಡುವು ನೀಡಿದ ಡಿಸಿಎಂ ನಿತಿನ್ ಪಟೇಲ್

ಖಾತೆಯ ಬಗ್ಗೆ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ30 Dec 2017 9:53 PM IST
share
ಗುಜರಾತ್: ಸರಕಾರಕ್ಕೆ 3 ದಿನದ ಗಡುವು ನೀಡಿದ ಡಿಸಿಎಂ ನಿತಿನ್ ಪಟೇಲ್

ಅಹ್ಮದಾಬಾದ್, ಡಿ.30: 3 ದಿನದ ಹಿಂದೆಯಷ್ಟೇ ಗುಜರಾತ್‌ನಲ್ಲಿ ಅಧಿಕಾರ ವಹಿಸಿಕೊಂಡ ವಿಜಯ್ ರೂಪಾನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಇದೀಗ ಸಂಕಷ್ಟ ಎದುರಾಗಿದ್ದು ಸಚಿವ ಸಂಪುಟದಲ್ಲಿ ತನಗೆ ನೀಡಲಾಗಿರುವ ಖಾತೆಯ ಬಗ್ಗೆ ಅಸಮಾಧಾನ ಹೊಂದಿರುವ ಉಪಮುಖ್ಯಮಂತ್ರಿ ನಿತಿನ್ ಪಟೇಲ್ 3 ದಿನದ ಒಳಗೆ ತಮಗೆ ಮಹತ್ವದ ಖಾತೆ ನೀಡದಿದ್ದರೆ ಸಚಿವ ಸ್ಥಾನ ತ್ಯಜಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದೇ ಸಂದರ್ಭ, ನಿತಿನ್ ಪಟೇಲ್‌ಗೆ ಬೆಂಬಲ ಸೂಚಿಸಿರುವ ಪಟಿದಾರ್ ಸಂಘಟನೆಯಾದ ಸರ್ದಾರ್ ಪಟೇಲ್ ತಂಡವು, ರಾಜ್ಯ ಸರಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಸೋಮವಾರ ಮೋದಿ ತವರೂರು ಮೆಹ್ಸಾನದಲ್ಲಿ ಬಂದ್ ಆಚರಿಸಲು ಕರೆ ನೀಡಿದೆ.

 ಈ ಹಿಂದಿನ ಸರಕಾರದಲ್ಲಿ ಪಟೇಲ್ ಪ್ರಮುಖವಾದ ವಿತ್ತ ಖಾತೆಯ ಜೊತೆಗೆ ಗ್ರಾಮೀಣಾಭಿವೃದ್ಧಿ ಖಾತೆಯನ್ನೂ ನಿರ್ವಹಿಸುತ್ತಿದ್ದರು. ಆದರೆ ಈ ಬಾರಿಯ ಸಚಿವ ಸಂಪುಟದಲ್ಲಿ ಅವರಿಗೆ ಅಷ್ಟೇನೂ ಮಹತ್ವವಿಲ್ಲದ ರಸ್ತೆ ಮತ್ತು ಕಟ್ಟಡ ಖಾತೆಯ ಜೊತೆಗೆ ಆರೋಗ್ಯ ಖಾತೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಯ ನಿರ್ವಹಣೆಯನ್ನು ವಹಿಸಲಾಗಿದೆ. ಆದರೆ ಪಟೇಲ್‌ಗೆ ವಿತ್ತ ಖಾತೆಯನ್ನು ಮತ್ತೊಬ್ಬರಿಗೆ ವಹಿಸಿರುವ ಕುರಿತು ಅಸಮಾಧಾನವಿದ್ದು ಪಕ್ಷದ ಮುಖಂಡರಿಗೆ ತಮ್ಮ ಅಸಮಾಧಾನವನ್ನು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಪಟೇಲ್ ಅಧಿಕಾರ ವಹಿಸಿಕೊಂಡಿಲ್ಲ ಎಂದು ವರದಿಗಳು ತಿಳಿಸಿವೆ. ಅಲ್ಲದೆ ಶುಕ್ರವಾರ ತಮಗೆ ಶುಭಾಶಯ ಸಲ್ಲಿಸಲು ಬಂದವರನ್ನು ಮನೆಯಲ್ಲಿಯೇ ಭೇಟಿ ಮಾಡಿದ್ದ ಪಟೇಲ್, ಪಕ್ಷದ ಹಿರಿಯ ನಾಯಕಿ ಆನಂದಿಬೆನ್ ಪಟೇಲ್‌ರೊಂದಿಗೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ತನ್ನ ಭಾವನೆಗಳನ್ನು ಪಕ್ಷದ ಹೈಕಮಾಂಡ್‌ಗೆ ಮುಟ್ಟಿಸುವಂತೆ ಆನಂದಿಬೆನ್‌ಗೆ ತಿಳಿಸಿದ ಪಟೇಲ್, ಮೂರು ದಿನದೊಳಗೆ ತನಗಾಗಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಸಚಿವ ಹುದ್ದೆ ತ್ಯಜಿಸುವುದಾಗಿ ಎಚ್ಚರಿಸಿದ್ದಾರೆ. ತಾಳ್ಮೆ, ಸಹನೆ ಕಾಯ್ದುಕೊಳ್ಳುವಂತೆ ಆನಂದಿಬೆನ್ ಸಲಹೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ಗುರುವಾರ ಖಾತೆಗಳನ್ನು ಹಂಚಿದ ಬಳಿಕ ನಡೆದ ಸುದ್ದಿಗೋಷ್ಟಿಯಲ್ಲಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಗೈರುಹಾಜರಾಗಿದ್ದರು.

 ಆದರೆ ಪಟೇಲ್‌ಗೆ ಅಸಮಾಧಾನವಿದೆ ಎಂಬ ವರದಿಯನ್ನು ಮುಖ್ಯಮಂತ್ರಿ ವಿಜಯ್ ರೂಪಾನಿ ತಳ್ಳಿಹಾಕಿದ್ದಾರೆ. ವಿತ್ತ ಖಾತೆಯನ್ನು ನಿರ್ವಹಿಸುವ ಸಚಿವರು ಸಂಪುಟದಲ್ಲಿ ಎರಡನೇ ಸ್ಥಾನದಲ್ಲಿರುತ್ತಾರೆ ಎಂಬುದು ಸರಿಯಲ್ಲ. ನಿತಿನ್ ಪಟೇಲ್ ನಮ್ಮ ಹಿರಿಯರಾಗಿದ್ದು ಎರಡನೇ ಸ್ಥಾನದಲ್ಲಿ ಅವರೇ ಮುಂದುವರಿಯುತ್ತಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪಟಿದಾರ್ ಮುಖಂಡರ ಬೆಂಬಲ

ಶನಿವಾರ ನಿತಿನ್ ಪಟೇಲ್‌ರನ್ನು ಭೇಟಿಮಾಡಿದ ಉತ್ತರ ಗುಜರಾತ್‌ನ ಪಟಿದಾರ್ ಮುಖಂಡರು ಉಪಮುಖ್ಯಮಂತ್ರಿಗೆ ಬೆಂಬಲ ಸೂಚಿಸಿದ್ದಾರೆ . ಸರಕಾರದಲ್ಲಿರುವ ಹಿರಿಯ ಪಟಿದಾರ್ ಮುಖಂಡ ನಿತಿನ್ ಪಟೇಲ್‌ಗೆ ಅನ್ಯಾಯವಾಗಿರುವುದು ಸ್ಪಷ್ಟವಾಗಿದೆ. ನಾವು ಅವರ ಜೊತೆಗಿದ್ದು ಬೆಂಬಲಿಸುತ್ತೇವೆ ಎಂದು ಮೆಹ್ಸಾನದ ಕೀರ್ತಿ ಪಟೇಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಪಟಿದಾರ್ ಸಮುದಾಯವು ನಿತಿನ್ ಪಟೇಲ್ ಜೊತೆಗಿದೆ. ಈ ಹಿಂದಿನ ಸರಕಾರದಲ್ಲಿ ಪಟೇಲ್ ನಿರ್ವಹಿಸುತ್ತಿದ್ದ ಖಾತೆಗಳನ್ನು ಅವರಿಂದ ಕಿತ್ತುಕೊಂಡು ಅನ್ಯಾಯ ಎಸಗಲಾಗಿದೆ. ಇದು ಖಂಡನೀಯ ಎಂದು ಸರ್ದಾರ್ ಪಟೇಲ್ ತಂಡದ ಮುಖಂಡ ಪೂರ್ವಿನ್ ಪಟೇಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X