Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ..

ಓ ಮೆಣಸೇ..

ವಾರ್ತಾಭಾರತಿವಾರ್ತಾಭಾರತಿ1 Jan 2018 12:01 AM IST
share
ಓ ಮೆಣಸೇ..

ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ವಿವಾದವಾಗುವ ಯಾವುದೇ ಅಂಶ ಇಲ್ಲ.  - ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ

ಈ ವಿವಾದಿತ ಹೇಳಿಕೆಗಾಗಿ ನೀವು ಪ್ರತ್ಯೇಕವಾಗಿ ಕ್ಷಮೆಯಾಚಿಸಬೇಕಾಗುತ್ತದೆ.

-------------------

ತಮಿಳುನಾಡಿನಲ್ಲಿ ದೇಗುಲಗಳ ರಕ್ಷಣೆಗೆ ಹಿಂದೂಗಳು ಒಂದಾಗಬೇಕು. - ಎಚ್. ರಾಜ್, ಬಿಜೆಪಿ ನಾಯಕ

ದಲಿತರ ರಕ್ಷಣೆಗೆ ಹಿಂದೂಗಳು ಒಂದಾಗುವುದು ಯಾವಾಗ?
---------------------
ಹೊಸತನಗಳ ಹುಡುಕಾಟದಿಂದ ಸಾಧನೆ ಮಾಡಲು ಸಾಧ್ಯ.- ಉಮಾಶ್ರೀ, ಸಚಿವೆ
ಅನುಭವದ ಮಾತು.

---------------------

ಸಂವಿಧಾನ ಬದಲಾವಣೆ ಚರ್ಚೆ ಕೇಂದ್ರದ ಮುಂದಿಲ್ಲ. - ಶೋಭಾ ಕರಂದ್ಲಾಜೆ, ಸಂಸದೆ

ಆರೆಸ್ಸೆಸ್‌ಗಷ್ಟೇ ಸದ್ಯಕ್ಕೆ ಸೀಮಿತ.

---------------------

ಅಪ್ಪ-ಅಮ್ಮನ ಗುರುತು ಇಲ್ಲದವರು ಜಾತ್ಯತೀತರು. - ಅನಂತಕುಮಾರ್ ಹೆಗಡೆ, ಕೇಂದ್ರ ಸಚಿವ

ಅಟಲ್ ಬಿಹಾರಿ ವಾಜಪೇಯಿ ಮಲಗಿದಲ್ಲೇ ಮಗ್ಗಲು ಬದಲಿಸಿದರಂತೆ.

---------------------
 
ನಾನು ಈ ಮಣ್ಣಿನ ಮಗ. - ಸಿದ್ದರಾಮಯ್ಯ, ಮುಖ್ಯಮಂತ್ರಿ

ಅದು ನನ್ನ ಮಣ್ಣು ಎಂದು ದೇವೇಗೌಡರು ತಕರಾರು ತೆಗೆದರಂತೆ.

---------------------

ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸುವ ಮೂಲಕ ಮಾದರಿಯಾಗಬೇಕು. - ಅಭಯಚಂದ್ರ ಜೈನ್, ಶಾಸಕ

ಅವರು ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿಸುವ ಮೂಲಕ ಮಾದರಿಯಾಗುತ್ತಿದ್ದಾರೆ.

---------------------

ಯಡಿಯೂರಪ್ಪ ಸಿಎಂ ಆದ ಮೇಲೆ ಮಹಾದಾಯಿಗೆ ಪರಿಹಾರ. - ಪ್ರಕಾಶ್ ಜಾವಡೇಕರ್, ಬಿಜೆಪಿ ಚುನಾವಣಾ ಉಸ್ತುವಾರಿ

ಅಂತೂ ಮಹಾದಾಯಿ ಸಮಸ್ಯೆ ಪರಿಹಾರವಾಗುವುದೇ ಇಲ್ಲ ಬಿಡಿ.

---------------------

ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿರುವ ಸಿಎಂ ಸಿದ್ದರಾಮಯ್ಯ ಸಮಾಜವಾದಿಯೇ? - ಎಚ್. ವಿಶ್ವನಾಥ್, ಮಾಜಿ ಸಂಸದ

ಬೇರೆಯವರ ಮನೆಯ ಬೆಳ್ಳಿ ತಟ್ಟೆಯಲ್ಲಿ ಮೀನಿನ ಊಟ ಮಾಡಿರುವುದು ಎಂದು ಕೈ ಮೂಸಿಕೊಂಡರಂತೆ ಸಿದ್ದರಾಮಯ್ಯ.

---------------------
ಸಿದ್ದರಾಮಯ್ಯ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ. - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಮೊದಲು ಅನಂತಕುಮಾರ್ ಹೆಗಡೆಯವರಂತಹ ನಾಯಕರು ಬಾಯಿಯಿಂದ ಮಾಡುವ ವಿಸರ್ಜನೆ ನಿಲ್ಲಲಿ.

---------------------
ದಲಿತ ಸಿಎಂ ವಿಚಾರ ಮುಗಿದ ಅಧ್ಯಾಯ.  - ವೀರಪ್ಪ ಮೊಯ್ಲಿ, ಸಂಸದ

ಹೀಗೆ ಹೇಳಿಯೇ ಕಾಂಗ್ರೆಸ್‌ನ್ನು ದೇಶದಲ್ಲಿ ಮುಗಿಸಿದಿರಿ.

---------------------

ತಮಿಳುನಾಡಿನಲ್ಲಿ ಬಿಜೆಪಿ ಆತ್ಮ ವಿಮರ್ಶೆಗೆ ಇದು ಸಕಾಲ.- ಸುಬ್ರಮಣಿಯನ್ ಸ್ವಾಮಿ, ಸಂಸದ

ಆತ್ಮಹತ್ಯೆ ಮಾಡಿಕೊಂಡ ಬಳಿಕ ವಿಮರ್ಶೆ ಮಾಡಿ ಪ್ರಯೋಜನವೇನು?
---------------------
ನಾನು ಪ್ರಧಾನಿ ಆಗಿದ್ದು ದೈವದ ಆಟ. - ದೇವೇಗೌಡ, ಮಾಜಿ ಪ್ರಧಾನಿ

ದೈವದ ಹುಡುಗಾಟ ಎಂದರೆ ಚೆನ್ನಾಗಿರುತ್ತದೆ.
---------------------

ಜಾತ್ಯತೀತಗೆ ನಾವು ಬದ್ಧ. - ಅನಂತ ಕುಮಾರ್, ಕೇಂದ್ರ ಸಚಿವ

ಜಾತ್ಯತೀತರಿಗೆ ತಂದೆ ತಾಯಿ ಇಲ್ಲ ಎಂದದ್ದು ನೀವೇ ಅಲ್ಲವೆ?
---------------------

ಸಾಮಾಜಿಕ ಮಾಧ್ಯಮಗಳು ಅಪಾಯಕಾರಿಯಾಗುತ್ತಿವೆ. - ಬರಾಕ್ ಒಬಾಮ, ಅಮೆರಿಕ ಮಾಜಿ ಅಧ್ಯಕ್ಷ

ಅಮೆರಿಕ ಅಧ್ಯಕ್ಷ ಟ್ರಂಪ್ ಅದನ್ನು ಬಳಸುವುದಕ್ಕೆ ಶುರು ಹಚ್ಚಿದ ಮೇಲೆ.

---------------------
ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರ ದೇಶಭಕ್ತಿ ಪ್ರಶ್ನಿಸಿಲ್ಲ. - ಅರುಣ್ ಜೇಟ್ಲಿ, ಕೇಂದ್ರ ಸಚಿವ

ಬಹುಶಃ ಮೋದಿ ಭಕ್ತಿಯನ್ನು ಪ್ರಶ್ನಿಸಿರಬೇಕು.

---------------------
ರಾಮ ಮಂದಿರ ಕಟ್ಟಲು ಹೊರಡುವ ಬಿಜೆಪಿಯವರು ಮೊದಲು ನನ್ನ ಆಶೀರ್ವಾದ ಪಡೆಯಬೇಕು. - ಆರ್.ವಿ. ದೇಶಪಾಂಡೆ, ಸಚಿವ

ಬಾಬರೀ ಮಸೀದಿ ಧ್ವಂಸಕ್ಕೆ ಮುನ್ನ ನಿಮ್ಮ ಆಶೀರ್ವಾದ ಪಡೆದಿರುವ ಸಾಧ್ಯತೆ ಕಾಣುತ್ತದೆ.

---------------------

ಜಾತ್ಯತೀತ ಚಿಂತನೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ ಸಮಾಜ ವಿಭಜಿಸಲು ಹೊರಟಿದೆ. - ಪ್ರಮೋದ್ ಮಧ್ವರಾಜ್, ಸಚಿವ

ಜಾತ್ಯತೀತ ಚಿಂತನೆಯಲ್ಲಿ ನಂಬಿಕೆಯಿಲ್ಲದ ಕೆಲವರು ಕಾಂಗ್ರೆಸನ್ನು ವಿಭಜಿಸುವ ಕುರಿತಂತೆ ಅನುಮಾನಗಳಿವೆ.

---------------------

ಬಿಜೆಪಿ ಸಂಪೂರ್ಣ ಸುಳ್ಳಿನ ಮೇಲೆ ನಿಂತಿದೆ. - ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ

ಕಾಂಗ್ರೆಸ್ ಸುಳ್ಳಿನ ಮೇಲೆ ಕುಳಿತಿದೆಯೇ?

---------------------

ಕೆಪಿಸಿಸಿ ನೀಡುವ ಸೂಚನೆ ಪಾಲಿಸುವುದರಲ್ಲಿ ಉಳ್ಳಾಲ ಬ್ಲಾಕ್ ಪ್ರಥಮ ಸ್ಥಾನದಲ್ಲಿದೆ. - ಯು.ಟಿ. ಖಾದರ್, ಸಚಿವ

ಅದಕ್ಕೇ ಇರಬೇಕು, ತಮ್ಮ ಬ್ಲಾಕ್‌ನಲ್ಲಿ ಕ್ರಿಮಿನಲ್‌ಗಳ ಹೆಸರುಗಳು ಕಾಣಿಸಿಕೊಂಡಿರುವುದು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X