Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 15 ವರ್ಷಗಳ ಬಳಿಕ ಹೊಸ ದಾಖಲೆ ಬರೆದ...

15 ವರ್ಷಗಳ ಬಳಿಕ ಹೊಸ ದಾಖಲೆ ಬರೆದ ರಾಜ್ಯಸಭೆ

ವಾರ್ತಾಭಾರತಿವಾರ್ತಾಭಾರತಿ2 Jan 2018 9:20 PM IST
share
15 ವರ್ಷಗಳ ಬಳಿಕ ಹೊಸ ದಾಖಲೆ ಬರೆದ ರಾಜ್ಯಸಭೆ

ಹೊಸದಿಲ್ಲಿ,ಜ.2: ಚಳಿಗಾಲದ ಅಧಿವೇಶನದ ಕೋಲಾಹಲಪೂರಿತ ಆರಂಭಕ್ಕೆ ವ್ಯತಿರಿಕ್ತವಾಗಿ ರಾಜ್ಯಸಭೆಯು ಮಂಗಳವಾರ ಪ್ರಶ್ನೆವೇಳೆಯಲ್ಲಿ ಪಟ್ಟಿ ಮಾಡಲಾಗಿದ್ದ ಎಲ್ಲ 15 ಚುಕ್ಕಿ ಗುರುತಿನ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ 15 ವರ್ಷಗಳ ಬಳಿಕ ಹೊಸ ದಾಖಲೆಯೊಂದನ್ನು ಬರೆಯಿತು. ಇದೇ ಸಂದರ್ಭ ಶೂನ್ಯವೇಳೆಯಲ್ಲಿ 18 ಸದಸ್ಯರು ಸಾರ್ವಜನಿಕ ಮಹತ್ವದ ವಿಷಯಗಳ ಕುರಿತು ಮಾತನಾಡಿದರು.

ಈ ಹಿಂದೆ 2002ರಲ್ಲಿ ರಾಜ್ಯಸಭೆಯ 197ನೇ ಅಧಿವೇಶನದಲ್ಲಿ ಎಲ್ಲ ಚುಕ್ಕಿ ಗುರುತಿನ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳಲಾಗಿತ್ತು ಎಂದು ರಾಜ್ಯಸಭಾ ಸಚಿವಾಲಯದ ಅಧಿಕಾರಿಗಳು ತಿಳಿಸಿದರು.

ಪಟ್ಟಿಯಲ್ಲಿದ್ದ ಪ್ರಶ್ನೆಗಳನ್ನು ಕೇಳಿದ್ದ 20 ಸದಸ್ಯರ ಪೈಕಿ 10 ಜನರು ಗೈರುಹಾಜರಾಗಿ ದ್ದರಾದರೂ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಹಲವಾರು ಸದಸ್ಯರಿಗೆ ಪೂರಕ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಿದ್ದು ಈ ದಾಖಲೆ ಸೃಷ್ಟಿಗೆ ನೆರವಾಯಿತು.

 ಶೂನ್ಯವೇಳೆಯಲ್ಲಿ ಸದಸ್ಯರು ಸಾರ್ವಜನಿಕ ಮಹತ್ವದ ವಿಷಯಗಳನ್ನು ಎತ್ತುತ್ತಾರೆ ಮತ್ತು ಪ್ರಶ್ನೆವೇಳೆಯಲ್ಲಿ ಸರಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಾರೆ. ಪ್ರಶ್ನೆಗಳನ್ನು ಕೇಳಿದ್ದ ಹಲವಾರು ಸದಸ್ಯರು ಗೈರುಹಾಜರಾಗಿದ್ದನ್ನು ಗಮನಿಸಿದ ನಾಯ್ಡು, ‘ಏನೋ ವಿಶೇಷವಾದುದು ಸಂಭವಿಸಲಿದೆ ’ಎಂದು ಹೇಳಿದರು. ಸದಸ್ಯರ ಗೈರುಹಾಜರಿಯನ್ನು ಪ್ರಸ್ತಾಪಿಸಿದ ಅವರು, ಸದಸ್ಯರಿಗೆ ಸ್ವಾತಂತ್ರ್ಯವಿದೆ ಮತ್ತು ತಾನವರನ್ನು ಪ್ರಶ್ನಿಸುವುದಿಲ್ಲ ಎಂದರು.

ಆದರೆ ಇದೇ ವೇಳೆ ನಮಗೆ ಜವಾಬ್ದಾರಿಯಿದೆ. ನೀವು ಪ್ರಶ್ನೆಯೊಂದನ್ನು ಸಲ್ಲಿಸಿದರೆ ಅಷ್ಟೊಂದು ಸಮಯ, ಶಕ್ತಿ ಮತ್ತು ಸಂಪನ್ಮೂಲಗಳು ವ್ಯಯವಾಗುತ್ತವೆ. ಸದನಕ್ಕೆ ಬಾರದಿರುವುದು ಒಳ್ಳೆಯ ಪದ್ಧತಿಯಲ್ಲ. ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ದಾಖಲೆ ಸೃಷ್ಟಿಯ ಬಳಿಕ ಸುಗಮ ಕಲಾಪ ನಿರ್ವಹಣೆಗಾಗಿ ಕೆಲವು ಸದಸ್ಯರು ಅಭಿನಂದಿಸಿದಾಗ ನಾಯ್ಡು, ನಿಮ್ಮೆಲ್ಲರ ಒಳ್ಳೆಯ ಸಹಕಾರವಿತ್ತು, ಹೀಗಾಗಿ ಈದಾಖಲೆ ಸೃಷ್ಟಿಯಾಗಿದೆ ಎಂದರು.

ಜಿಎಸ್‌ಟಿ ಫೈಲಿಂಗ್, ಭಾರತದ ನವೀಕರಿಸಬಹುದಾದ ಶಕ್ತಿ ಕಂಪನಿಗಳ ಕಳಪೆ ರೇಟಿಂಗ್, ಕ್ರಿಪ್ಟೊಕರೆನ್ಸಿಗಳ ನಿಯಂತ್ರಣ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಸದಸ್ಯರು ಸರಕಾರದಿಂದ ಉತ್ತರಗಳನ್ನು ಕೋರಿದರು.

ಶೂನ್ಯವೇಳೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯಗಳ ಮೇಲೆ ಮಾತನಾಡಲು 11 ಸದಸ್ಯರಿಗೆ ಅವಕಾಶ ನೀಡಿದ ನಾಯ್ಡು, ಇತರ ಏಳು ಸದಸ್ಯರಿಗೆ ತಮ್ಮ ವಿಶೇಷ ಉಲ್ಲೇಖಗಳನ್ನು ಓದಲು ಅನುಮತಿ ನೀಡಿದರು.

ಕಲಾಪ ವ್ಯತ್ಯಯ ಮತ್ತು ಸಮಯದ ಕೊರತೆಯಿಂದಾಗಿ ಸಾಮಾನ್ಯವಾಗಿ ವಿಶೇಷ ಉಲ್ಲೇಖಗಳನ್ನು ದಿನದಂತ್ಯದಲ್ಲಿ ಸದನದಲ್ಲಿ ಮಂಡಿಸಲಾಗುತ್ತದೆ. ಆದರೆ ನಾಯ್ಡು ಅವರು ಭೋಜನಪೂರ್ವ ಅವಧಿಯಲ್ಲಿಯೇ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು.

ಸದಸ್ಯರ ಹರ್ಷದ ನಡುವೆಯೇ ನಾಯ್ಡು ಅವರು, ರಾಜ್ಯಸಭೆಯು ಇಂದು ಇತಿಹಾಸ ವನ್ನು ಸೃಷ್ಟಿಸಿದೆ. ಮೊದಲ ಬಾರಿಗೆ ಎಲ್ಲ ಶೂನ್ಯವೇಳೆ ಸಲ್ಲಿಕೆಗಳನ್ನು, ಎಲ್ಲ ವಿಶೇಷ ಉಲ್ಲೇಖಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X