Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ; ಹೆದ್ದಾರಿ ನಿಷೇಧಿತ ಪ್ರದೇಶದಲ್ಲಿ...

ಉಡುಪಿ; ಹೆದ್ದಾರಿ ನಿಷೇಧಿತ ಪ್ರದೇಶದಲ್ಲಿ ಬಾರ್ ತೆರೆಯಲು ಯತ್ನ : ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ2 Jan 2018 10:41 PM IST
share
ಉಡುಪಿ; ಹೆದ್ದಾರಿ ನಿಷೇಧಿತ ಪ್ರದೇಶದಲ್ಲಿ ಬಾರ್ ತೆರೆಯಲು ಯತ್ನ : ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ, ಜ.2: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕರಾವಳಿ ಜಂಕ್ಷನ್ ಸಮೀಪದ ಆದಿಉಡುಪಿಯಲ್ಲಿರುವ ದುರ್ಗಾಪ್ರಸಾದ್ ಕಾಂಪ್ಲೆಕ್ಸ್‌ನಲ್ಲಿ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಸುತ್ತಿದ್ದು ಅಬಕಾರಿ ಇಲಾಖೆ ಕೂಡ ಬಾರ್ ಮಾಲಕರ ಜೊತೆ ಶಾಮೀಲಾಗಿ ಕಾನೂನುಬಾಹಿರವಾಗಿ ಬಾರ್‌ಗೆ ಅನುಮತಿ ನೀಡಿದೆ ಎಂದು ದಕ್ಷಿಣ ಕನ್ನಡ ಪದ್ಮಶಾಲಿ ಮಹಾಸಭಾ ಆರೋಪಿಸಿದೆ.

 ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆ ಹಾಗು ಪ್ರೌಢ ಶಾಲೆಯ ಎದುರಿಗೇ ಇರುವ ಕಟ್ಟಡದಲ್ಲಿ ಈ ಬಾರ್‌ಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಮಹಾಸಭಾದ ಪದಾಧಿಕಾರಿಗಳು ಶಾಲೆಯ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಜೊತೆ ಸಮಲೋಚಿಸಿ ಇಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡದಂತೆ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಮನವಿ ಸಲ್ಲಿಸಿದೆ.

ಈ ದೂರಿನ ಬಗ್ಗೆ ಸೂಕ್ತ ಪರಿಶೀಲನೆ ನಡೆಸುವಂತೆ ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು. ಆದರೆ ಸ್ಥಳ ಪರಿಶೀಲನೆಗೆ ಬಂದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಾರ್ ಮಾಲಕರ ಜೊತೆ ಸೇರಿ ಸುಳ್ಳು ಮಾಹಿತಿಗಳನ್ನು ನೀಡಿ ಬಾರ್ ಸ್ಥಾಪನೆಯ ಕೆಲಸಗಳನ್ನು ಮುಂದುವರಿಯುವಂತೆ ನೋಡಿಕೊಂಡಿದ್ದಾರೆ ಎಂದು ಮಹಾಸಭಾ ಆರೋಪಿಸಿದೆ.

ಈ ಕಟ್ಟಡದ ಪಕ್ಕದಲ್ಲಿ ಪದ್ಮಶಾಲಿ ಸಮುದಾಯದ ಸುವರ್ಣ ಮಹೋತ್ಸವ ಭವನದಲ್ಲಿ ಶ್ರೀದೇವರಾಜ ಅರಸು ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯವಿದ್ದು ಅಲ್ಲಿರುವ ವಿದ್ಯಾರ್ಥಿನಿಯರಿಗೆ ಇದರಿಂದ ತೊಂದರೆಯಾಗಲಿದೆ ಎಂದು ಪದ್ಮಶಾಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಜಯರಾಮ ಶೆಟ್ಟಿಗಾರ್ ಮಣಿಪಾಲ ಹೇಳಿದ್ದಾರೆ.

 ಬಾರ್‌ಗೆ ಅನುಮತಿ ನೀಡುವುದನ್ನು ವಿರೋಧಿಸಿ ಪದ್ಮಶಾಲಿ ಮಹಾಸಭಾದ ನಿಯೋಗ ಇಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಅಧ್ಯಕ್ಷ ಪುರಂದರ ಡಿ ಶೆಟ್ಟಿಗಾರ್ ಕಿನ್ನಿಗೋಳಿ, ಮಹಾಸಭಾದ ಶಿವಾನಂದ ಶೆಟ್ಟಿಗಾರ್, ಪೀತಾಂಬರ ಶೆಟ್ಟಿಗಾರ್, ಭಾಸ್ಕರ ಶೆಟ್ಟಿಗಾರ್ ಕನ್ನರ್ಪಾಡಿ, ಅಶೋಕ್ ಶೆಟ್ಟಿಗಾರ್, ಅರುಣ್ ಶೆಟ್ಟಿಗಾರ್ ಮಣಿಪಾಲ, ಪರ್ಕಳ ಶ್ರೀ ವೀರಭದ್ರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಸುಕೇಶ್ ಶೆಟ್ಟಿಗಾರ್, ಸ್ಥಳೀಯರಾದ ಜಮೀರ್ ಅಹಮದ್, ಸುಧಾಕರ್ ಶೆಟ್ಟಿ, ಜಯಕರ್ ಶೆಟ್ಟಿ, ಜಗದೀಶ್, ಚಂದ್ರಕಾಂತ್, ಪ್ರೇಮ ಜಗದೀಶ್, ವಿನೋದ್ ಕುಮಾರ್, ಸರಸ್ವತಿ ಪ್ರವೀಣ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X