Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‍ಗೆ ತಾಕತ್ತಿದ್ದರೆ ಮುಸ್ಲಿಂ...

ಕಾಂಗ್ರೆಸ್‍ಗೆ ತಾಕತ್ತಿದ್ದರೆ ಮುಸ್ಲಿಂ ಮುಖಂಡರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲಿ: ಝಕಾರಿಯಾ ಸವಾಲು

ವಾರ್ತಾಭಾರತಿವಾರ್ತಾಭಾರತಿ3 Jan 2018 5:27 PM IST
share
ಕಾಂಗ್ರೆಸ್‍ಗೆ ತಾಕತ್ತಿದ್ದರೆ ಮುಸ್ಲಿಂ ಮುಖಂಡರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲಿ: ಝಕಾರಿಯಾ ಸವಾಲು

ಮೂಡಿಗೆರೆ, ಜ.3: ರಾಜ್ಯದಲ್ಲಿ ಕಾಂಗ್ರೆಸ್‍ನ ದುರಾಡಳಿತವನ್ನು ಅಲ್ಪಸಂಖ್ಯಾತರು ವಿರೋಧಿಸಿ, ಮುಂದಿನ ಚುನಾವಣೆ ವೇಳೆ ಶೇ.80ರಷ್ಟು ಅಲ್ಪಸಂಖ್ಯಾತರು ಜೆಡಿಎಸ್ ಪರ ನಿಲ್ಲಲಿದ್ದಾರೆ ಎಂದು ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಝಕಾರಿಯಾ ಜಾಕೀರ್ ತಿಳಿಸಿದರು. 

ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 70 ವರ್ಷದಿಂದ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನಮಾನ ನೀಡದೇ ಕೇವಲ ಚುನಾವಣೆಗೋಸ್ಕರ ಮುಸ್ಲಿಮರ ಪರ ಭಾಷಣ ಮಾಡಿ ವಂಚಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಮುಸ್ಲಿಮರು ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ. ಈ ಕ್ಷೇತ್ರದಲ್ಲಿ ಬಿ.ಬಿ.ನಿಂಗಯ್ಯ ಶಾಸಕರಾದ ನಂತರ ಪ್ರಾರ್ಥನಾ ಮಂದಿರಗಳಿಗೆ 2 ಕೋಟಿ ಅನುದಾನ ನೀಡಿದ್ದಾರೆ. ಆದರೆ ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಮುಸ್ಲಿಮರಿಗೆ ಯಾವ ಕೊಡಗೆ ನೀಡಿದ್ದಾರೆಂಬುದನ್ನು ಬಹಿರಂಗಪಡಿಲಿ ಎಂದು ಸವಾಲು ಹಾಕಿದರು.

ಕ್ರೇತ್ರದಲ್ಲಿ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದು ಕಾಂಗ್ರೆಸ್‍ನವರಿಗೆ ಭಯ ಹುಟ್ಟಿಸಿದೆ. ಹಾಗಾಗಿ ಜೆಡಿಎಸ್ ಕಾರ್ಯಕರ್ತರನ್ನು ಕರೆಸಿಕೊಂಡು ಕಾಂಗ್ರೆಸ್‍ಗೆ ಸೇರ್ಪಡೆಗೊಳಿಸುತ್ತಿದ್ದಾರೆಂದು ಪತ್ರಿಕೆಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಕೆಲ ಕಾಂಗ್ರೆಸ್‍ನ ಅನಕ್ಷರಸ್ಥ ಚೇಲಾಗಳು ಜೆಡಿಎಸ್ ಮುಖಂಡರ ಮೇಲೆ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಪತ್ರಿಕಾ ಹೇಳಿಕೆ ನೀಡುವ ಮೂಲಕ ಬೆದರಿಕೆ ಹಾಕುತ್ತಿದ್ದು, ತಾಕತ್ತಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಿ ತೋರಿಸಲಿ ಎಂದು ಸವಾಲು ಹಾಕಿದರು.

ಜೆಡಿಎಸ್ ಯುವ ಘಟಕದ ಸಂಚಾಲಕ ಮಹಮ್ಮದ್ ಶಬ್ಬೀರ್ ಮಾತನಾಡಿ, ನಾನು ಇತ್ತೀಚೆಗೆ ಜಮೀನು ವಿಚಾರವಾಗಿ ಎಂಎಲ್‍ಸಿ ಮೋಟಮ್ಮರ ಮನೆಗೆ ತೆರಳಿದ್ದೆ. ನಾನು ಜಮೀನು ವಿಚಾರವಾಗಿ ಮಾತನಾಡುವ ಸಂದರ್ಭದಲ್ಲಿ ಅಲ್ಲಿದ್ದ ಕೆಲ ಕಾಂಗ್ರೆಸ್ ಮುಖಂಡರು ‘ನೀನು ಜೆಡಿಎಸ್‍ನಲ್ಲಿ ಇರಬೇಡ. ಕಾಂಗ್ರೆಸ್‍ಗೆ ಬಾ ಎಂದು ನನಗೆ ಹೂವಿನ ಹಾರ ಹಾಕಿ ಫೋಟೊ ತೆಗೆಸಿ ಸಾಮಾಜಿಕ ಜಾಲಾ ತಾಣದಲ್ಲಿ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆಂದು ಸುಳ್ಳು ಸುದ್ದಿ ಹರಿಸಿದ್ದಾರೆ. ನಾನು 5 ವರ್ಷಗಳಿಂದ ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದೇನೆ. ಹಿಂದೆ ಕಾಂಗ್ರೆಸ್‍ನಲ್ಲಿದಿದ್ದು ನಿಜ. ಆದರೆ ನಾನು ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿಲ್ಲ. ಜೆಡಿಎಸ್‍ನಲ್ಲಿಯೆ ಪಕ್ಷಕ್ಕಾಗಿ ದುಡಿಯುತ್ತಾ ಪ್ರಾಮಾಣಿಕ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಕ್ಷೇತ್ರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್ ಅಹಮ್ಮದ್ ಬೇಗ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಜೀದ್ ಹುಸೇನ್, ಮುಖಂಡರಾದ ನಾಸೀರ್, ನದೀಮ್ ಬಾಪುನಗರ, ಮಹಮದ್ ಅಣಜೂರು, ರಿಜ್ವಾನ್, ಆಸೀಫ್ ಹೆಚ್.ಬಾಪುನಗರ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X