ಶಾಸಕರ ವಿರುದ್ಧ ಆರೋಪ ಸರಿಯಲ್ಲ: ಜೆ.ಆರ್ ಪ್ರಹ್ಲಾದ್
![ಶಾಸಕರ ವಿರುದ್ಧ ಆರೋಪ ಸರಿಯಲ್ಲ: ಜೆ.ಆರ್ ಪ್ರಹ್ಲಾದ್ ಶಾಸಕರ ವಿರುದ್ಧ ಆರೋಪ ಸರಿಯಲ್ಲ: ಜೆ.ಆರ್ ಪ್ರಹ್ಲಾದ್](https://www.varthabharati.in/sites/default/files/images/articles/2018/01/4/Prahlad.jpg)
ಮೂಡಿಗೆರೆ, ಜ.4: ಶಾಸಕ ಬಿ.ಬಿ.ನಿಂಗಯ್ಯ ವಿರುದ್ಧ ಇತರೆ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಯುವಜನತಾದಳದ ಗೋಣಿಬೀಡು ಹೋಬಳಿ ಅಧ್ಯಕ್ಷ ಜೆ.ಆರ್.ಪ್ರಹ್ಲಾದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರು ಈ ಕುರಿತು ಗುರುವಾರ ಹೇಳಿಕೆ ನೀಡಿದ್ದು, ಶಾಸಕರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ.675 ಕೋಟಿ ಅನುದಾನ ಬಂದಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಇಷ್ಟೊಂದು ಅನುದಾನ ಸಿಕ್ಕಿರುವುದು ಇದೇ ಪ್ರಥಮ ಬಾರಿಯಾಗಿದೆ.ನೆನೆಗುದಿಗೆ ಬಿದ್ದಿದ್ದ ಕಳಸದ ಹೊನ್ನೆಕಾಡು ನೀರಿನ ಯೋಜನೆ ಪೂರ್ಣಗೊಳಿಸಿರುವುದು ಮಾತ್ರವಲ್ಲದೆ ಕಳಸವನ್ನು ತಾಲೂಕು ಕೇಂದ್ರವಾಗಿಸಲು ಜೆಡಿಎಸ್ ನಿರಂತರ ಹೋರಾಟದಲ್ಲಿ ತೊಡಗಿದೆ.
ಹಿಂದಿನ ಶಾಸಕರು ಎರಡು ಬಾರಿ ಆಯ್ಕೆಯಾಗಿದ್ದರೂ ಸಹ ಕ್ಷೇತ್ರದ ಅಭಿವೃದ್ಧಿಯನ್ನು ಮರೆತಿದ್ದರು. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಪರಿವರ್ತನಾ ಯಾತ್ರೆ ಹೆಸರಲ್ಲಿ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
Next Story