Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಗಾಂಧಿವಾದಿ...

ಬೆಂಗಳೂರು: ಗಾಂಧಿವಾದಿ ಡಾ.ಹೊ.ಶ್ರೀನಿವಾಸಯ್ಯ ದತ್ತಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Jan 2018 8:56 PM IST
share

ಬೆಂಗಳೂರು, ಜ.1: ಹಿರಿಯ ಗಾಂಧಿವಾದಿ ಡಾ.ಹೊ.ಶ್ರೀನಿವಾಸಯ್ಯ ಹೆಸರಿನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಆರಂಭಿಸಿರುವ ದತ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಚಾಲನೆ ನೀಡಿದರು.

ಗುರುವಾರ ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಹೊ.ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದತ್ತಿಯನ್ನು ಸಚಿವರು ಉದ್ಘಾಟನೆ ಮಾಡಿದರು.

ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಇಂದಿನ ಪೀಳಿಗೆಯ ಯುವ ಸಮುದಾಯ ಸಿನಿಮಾ ನಟ, ನಟಿಯರನ್ನು ನೋಡಿ ಆಕರ್ಷಿತರಾಗುವ ಬದಲಿಗೆ, ನಮಗೆ ಹೊ.ಶ್ರೀನಿವಾಸಯ್ಯರಂತಹವರು ಮಾದರಿಯಾಗಬೇಕು. ಎಲ್ಲವನ್ನು ಅರ್ಥ ಮಾಡಿಕೊಳ್ಳುವ, ಬದುಕಿನ ಬಗ್ಗೆ ತಿಳಿವಳಿಕೆ ನೀಡಿದ ಹಾಗೂ ಮುಂದಿನ ನಮ್ಮ ಬದುಕು ಯಶಸ್ಸಿನ ಕಡೆಗೆ ಸಾಗಬೇಕಾದರೆ ಹೊ.ಶ್ರೀನಿವಾಸಯ್ಯ ಮಾರ್ಗದರ್ಶಕರಾಗಬೇಕು ಎಂದರು.

ನಾನು ಹಾಗೂ ಹೊ.ಶ್ರೀನಿವಾಸಯ್ಯ ಪರಸ್ಪರ ಭೇಟಿಯಾಗಿ ಮಾತನಾಡಿದ ಪ್ರತಿಯೊಂದು ಕ್ಷಣದಿಂದಲೂ ಒಂದೊಂದು ಪಾಠ ಕಲಿತಿದ್ದೇನೆ. ಗಾಂಧಿಯನ್ನು ನಾನು ಮುಟ್ಟಿರಲಿಲ್ಲ. ಆದರೆ, ಗಾಂಧಿಯೊಂದಿಗೆ ಒಡನಾಟವಿದ್ದವರನ್ನು ಹತ್ತಿರದಿಂದ ಮಾತನಾಡಿದ್ದೆ, ಅವರ ಜೊತೆಗೆ ಸಂಬಂಧ ಬೆಳೆಸಿದ್ದೇನೆ ಎಂಬ ಹೆಮ್ಮೆ ಹೊ.ಶ್ರೀಯವರನ್ನು ನೋಡಿದ ತಕ್ಷಣ ನೆನಪಾಗುತ್ತಿತ್ತು ಎಂದು ಸ್ಮರಿಸಿಕೊಂಡರು.

ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ವೌಲ್ಯಗಳು ಅಸ್ತಿತ್ವವನ್ನು ಕಳೆದುಕೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಗಾಂಧಿ ಹಾಗೂ ಅವರ ಹಾದಿಯಲ್ಲಿ ನಡೆದ ಹೊ.ಶ್ರೀ ಅವರ ವಿಚಾರಗಳನ್ನು ಸಮಾಜಕ್ಕೆ ತಿಳಿಸಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ತುಂಬಬೇಕು. ಜನಪರ ವೌಲ್ಯಗಳುಳ್ಳ ಮನೋಭಾವ ನಿರ್ಮಾಣ ಮಾಡಬೇಕು ಎಂದ ಅವರು, ಸ್ವಾತಂತ್ರ ಹೋರಾಟಗಾರ ಪಾಟೀಲ ಪುಟ್ಟಪ್ಪ ತಮ್ಮ ಇಳಿವಯಸ್ಸಿನಲ್ಲಿಯೂ ಗಾಂಧೀ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಅವರಿಂದ ಪ್ರತಿಯೊಬ್ಬರೂ ಪ್ರೇರಣೆ ಪಡೆಯಬೇಕು ಎಂದು ತಿಳಿಸಿದರು.

ಗಾಂಧಿ ಭವನ ನೀಡುವ ಪ್ರತಿಯೊಂದು ಸಲಹೆಯನ್ನು ಯಥಾವತ್ತಾಗಿ ನಮ್ಮ ಸರಕಾರ ಸ್ವೀಕಾರ ಮಾಡಲಿದ್ದು, ಅದಕ್ಕೆ ಎಷ್ಟು ಅನುದಾನ ಅಗತ್ಯವಿದ್ದರೂ ಅದನ್ನು ನೀಡಲಾಗುತ್ತದೆ. ಅಲ್ಲದೆ, ಮದ್ಯಪಾನ ಹೊರತುಪಡಿಸಿ ಉಳಿದೆಲ್ಲವನ್ನು ಸಂಪೂರ್ಣವಾಗಿ ಜಾರಿ ಮಾಡಲಾಗುತ್ತದೆ. ಮದ್ಯಪಾನ ನಿಷೇಧಿಸುವ ಸಂಬಂಧ ಕೆಲವು ತೊಡಕುಗಳಿದ್ದು, ಅದು ನಿವಾರಣೆಗೊಂಡ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ಹೊ.ಶ್ರೀನಿವಾಸಯ್ಯ ಅಪರೂಪದ ಸರಳ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಬದುಕಿದ್ದಷ್ಟು ದಿನ ತಮ್ಮ ಹತ್ತಿರಕ್ಕೆ ಬಂದವರ ಜೊತೆ ಆದೇಶ ಪೂರ್ವಕವಾಗಿ ಪ್ರೀತಿಯ ಮಾತುಗಳನ್ನಾಡುತ್ತಿದ್ದರು. ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಿದ್ದ ಅವರು, ಸಾಯುವವರೆಗೂ ಎಲ್ಲಿಯೂ ತಪ್ಪದೇ ಪಾಲಿಸಿ ಸಾಧಿಸಿ ತೋರಿಸಿದ್ದಾರೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಪಾಟೀಲ ಪುಟ್ಟಪ್ಪ, ಗಾಂಧಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ವೂಡೇ ಪಿ. ಕೃಷ್ಣ, ಗಾಂಧಿ ಸ್ಮಾರಕ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಮಾಜಿ ಶಾಸಕ ಬಿ.ಆರ್.ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶುಕುಮಾರ್, ಎನ್ನೆಸ್ಸೆಸ್ ರಾಜ್ಯ ಸಂಯೋಜಕ ಗಣನಾಥಶೆಟ್ಟಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X