ಉಡುಪಿ ಜಿಲ್ಲೆಗೆ 5 ಕೋಟಿ ರೂ. ವೆಚ್ಚದ ಡಿಜಿಟಲ್ ಗ್ರಂಥಾಲಯ: ಪ್ರಮೋದ್

ಉಡುಪಿ, ಜ.4: ಇಡೀ ರಾಜ್ಯಕ್ಕೆ ಮಾದರಿ ಎನಿಸುವಂತಹ ಡಿಜಿಟಲ್ ಗ್ರಂಥಾಲಯವನ್ನು ಸುಮಾರು 5 ಕೋಟಿ.ರೂ ಅನುದಾನದಡಿ ಅಜ್ಜರಕಾಡಿನಲ್ಲಿ ನಿರ್ಮಿಸಲಾಗುತ್ತಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ರಾಜಾರಾಮ್ ಮೋಹನ್ರಾಯ್ ಲೈಬ್ರರಿ ಫೌಂಡೇಶನ್ ಕೊಲ್ಕತ್ತಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಂಥಾಲಯ ಮೇಲ್ವಿಚಾರಕರಿಗೆ ಮೂರು ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಜಗತ್ತು ತಾಂತ್ರಿಕತೆಯಲ್ಲಿ ವೇಗವಾಗಿ ಬದಲಾಗುತ್ತಿದ್ದು, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಮಾಹಿತಿ ಅತ್ಯವಶ್ಯ. ಅನುಭವದ ಜೊತೆಗೆ ತಂತ್ರಜ್ಞಾನದ ಅರಿವು ಇದ್ದಾಗ ಮಾತ್ರ ಕೌಶಲ್ಯ ದ್ವಿಗುಣಗೊಳ್ಳುವುದಲ್ಲದೆ, ಉದ್ಯೋಗ ದೊರೆಯುತ್ತದೆ. ಹೊಸ ರೀತಿಯ ತಂತ್ರಜ್ಞಾನ ಬಳಕೆ ಕುರಿತು ಗ್ರಂಥಾಲಯ ಮೇಲ್ವಿಚಾರಕರಿಗೆ ಸರಕಾರವು ಪ್ರತೀ ಜಿಲ್ಲೆಯಲ್ಲೂ ತರಬೇತಿ ನೀಡುವ ಕೆಲಸ ಮಾಡು ತ್ತಿದೆ ಎಂದು ಸಚಿವರು ನುಡಿದರು.
ಜಗತ್ತು ತಾಂತ್ರಿಕತೆಯಲ್ಲಿ ವೇಗವಾಗಿ ಬದಲಾಗುತ್ತಿದ್ದು, ಆುನಿಕಜಗತ್ತಿನಲ್ಲಿತಂತ್ರಜ್ಞಾನದಮಾಹಿತಿಅತ್ಯವಶ್ಯ.ಅನುವದ ಜೊತೆಗೆ ತಂತ್ರಜ್ಞಾನದ ಅರಿವು ಇದ್ದಾಗ ಮಾತ್ರ ಕೌಶಲ್ಯ ದ್ವಿಗುಣಗೊಳ್ಳುವುದಲ್ಲದೆ, ಉದ್ಯೋಗ ದೊರೆಯುತ್ತದೆ. ಹೊಸ ರೀತಿಯ ತಂತ್ರಜ್ಞಾನ ಬಳಕೆ ಕುರಿತು ಗ್ರಂಥಾಲಯ ಮೇಲ್ವಿಚಾರಕರಿಗೆ ಸರಕಾರವು ಪ್ರತೀ ಜಿಲ್ಲೆಯಲ್ಲೂ ತರಬೇತಿ ನೀಡುವ ಕೆಲಸ ಮಾಡುತ್ತಿದೆ ಎಂದು ಸಚಿವರು ನುಡಿದರು. ಜಿಲ್ಲಾ ಗ್ರಂಥಾಲಯವನ್ನು ಸುಮಾರು 5 ಕೋಟಿ.ರೂ ಅನುದಾನದಡಿ ಸಂಪೂರ್ಣ ಡಿಜಿಟಲೈಸ್ ಮಾಡಲಾಗುತ್ತಿದ್ದು, ಆದಷ್ಟು ಶೀಘ್ರದಲ್ಲಿ ಐಎಎಸ್, ಕೆಎಎಸ್, ಐಪಿಎಸ್ ಮುಂತಾದ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ತರಬೇತಿ ಕೇಂದ್ರಗಳನ್ನು ತೆರೆಯುವ ಉದ್ದೇಶವನ್ನೂ ಹೊಂದಿದೆ ಎಂದು ಅವರು ಹೇಳಿದರು.
ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಎಸ್.ಹೊಸಮನಿ ಮಾತನಾಡಿ, ಪುಸ್ತಕ ಸಂಸ್ಕೃತಿ ಬೆಳೆಸುವುದು ಗ್ರಂಥಾಲಯದ ಮೂಲ ಉದ್ದೇಶವಾಗಿದ್ದು, ಆಧುನಿಕ ಡಿಜಿಟಲ್ ಮಾದರಿ ಯಲ್ಲಿ ತರಬೇತಿ ನೀಡಲಾಗುತ್ತಿದೆ. ಓದುಗರನ್ನು ಗ್ರಂಥಾಲಯದತ್ತ ಸೆಳೆಯುವ ರೀತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ಶಿಬಿರ ನಡೆಸಲಾಗುತ್ತಿದೆ ಎಂದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ 5766 ಗ್ರಂಥಾಲಯಗಳು, ಜಿಲ್ಲಾ ಕೇಂದ್ರದಲ್ಲಿ 30, ನಗರ ಗ್ರಂಥಾಲಯ 26, 70 ಅಲೆಮಾರಿ ಜನಾಂಗದವರ ಗ್ರಂಥಾಲಯ, 31 ಸಮುದಾಯ ಕೇಂದ್ರ ಗ್ರಂಥಾಲಯಗಳು ರಾಜ್ಯದಾದ್ಯಂತ ಸೇವೆ ಸಲ್ಲಿಸುತ್ತಿವೆ. ವಿಶೇಷಚೇತನರಿಗೂ ಅನುಕೂಲವಾಗುವಂತೆ ರಾಜ್ಯದಲ್ಲಿ 30 ಬ್ರೈಲ್ ಕಾರ್ನರ್ ಗ್ರಂಥಾಲಯದ ವ್ಯವಸ್ಥೆ ಮಾಡಲಾಗುತ್ತಿದೆ. 4 ಸಾವಿರ ಆಡಿಯೋ ಪುಸ್ತಕಗಳನ್ನು ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಒದಗಿಸಲಾಗುತ್ತಿದೆ. ಪ್ರತ್ಯೇಕವಾದ ಅಧ್ಯಯನ ವಿಭಾಗ ತೆರೆಯುವ ಜೊತೆಗೆ ಹೆಚ್ಚಿನ ಗ್ರಂಥಾಲಯ ಒದಗಿಸುವ ಬಗ್ಗೆಯೂ ಪ್ರಯತ್ನಿಸಲಾಗುತ್ತಿದೆ ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಉಪಸ್ಥಿತರಿದ್ದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿ, ಶಕುಂತಲ ಕುಂದರ್ ವಂದಿಸಿದರು. ಜ್ಯೋತಿ ಾವಂತ್ ಕಾರ್ಯಕ್ರಮ ನಿರೂಪಿಸಿದರು.







