Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನ ಕಲಿಗಳು ಗೋರಕ್ಷಣೆಗೆ ಸಜ್ಜಾಗಿ:...

ಕೊಡಗಿನ ಕಲಿಗಳು ಗೋರಕ್ಷಣೆಗೆ ಸಜ್ಜಾಗಿ: ರಾಘವೇಶ್ವರಶ್ರೀ ಕರೆ

ವಾರ್ತಾಭಾರತಿವಾರ್ತಾಭಾರತಿ4 Jan 2018 11:16 PM IST
share
ಕೊಡಗಿನ ಕಲಿಗಳು ಗೋರಕ್ಷಣೆಗೆ ಸಜ್ಜಾಗಿ: ರಾಘವೇಶ್ವರಶ್ರೀ ಕರೆ

ಮಡಿಕೇರಿ, ಜ.4 : ದೇಶಕ್ಕೆ ಅಸಂಖ್ಯಾತ ವೀರಯೋಧರನ್ನು ನೀಡಿದ ಕೊಡಗಿನ ಕಲಿಗಳು ಗೋಮಾತೆಯ ರಕ್ಷಣೆಗೆ ಸಿದ್ಧರಾಗಿ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಕರೆ ನೀಡಿದರು.

ಪಟ್ಟಣದಲ್ಲಿ ನಡೆದ ಅಭಯ ಗೋಯಾತ್ರೆ ಸಂದೇಶ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ಗೋವು ದೇಶದ ಪ್ರಾಣಿಯಲ್ಲ; ಪ್ರಾಣ. ಗೋಹತ್ಯೆ ಪ್ರಾಣಿ ಹತ್ಯೆಯಲ್ಲ; ಪ್ರಾಣಹತ್ಯೆ. ಭಾರತಮಾತೆಯ ರಕ್ಷಣೆಗೆ ಕೊಡಗಿನ ಕಲಿಗಳು ಮುಂದಾದಂತೆ ಗೋಮಾತೆಯ ರಕ್ಷಣೆಗೂ ಮುಂದಾಗಬೇಕು ಎಂದು ಸಲಹೆ ಮಾಡಿದರು.

ದೇಶದಲ್ಲಿ ಗೋವಿನ ರಕ್ತದ ಹೊಳೆ ಹರಿದರೂ, ಗೋವಿನ ಕರೆಗೆ ಓಗುಡುವವರು ದೇಶದಲ್ಲಿ ಕೋಟಿ ಕೋಟಿ ಮಂದಿ ಇದ್ದಾರೆ. ಇದುವೇ ಗೋಪರ ಹೋರಾಟಕ್ಕೆ ಪ್ರೇರಣೆ ಎಂದು ಹೇಳಿದರು. ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿದ್ದು, ಜೀವಕ್ಕೆ ಬೆದರಿಕೆ ಇದ್ದರೂ ಇದನ್ನು ಸವಾಲಾಗಿ ಸ್ವೀಕರಿಸಿ, ಇಂಥ ಅಭಿಯಾನವನ್ನು ಆಯೋಜಿಸಿರುವುದು ಶ್ಲಾಘನೀಯ. ಇಂಥಹ ಕೆಚ್ಚಿನ ಯುವಕರು ಗೋ ಚಳುವಳಿಯ ಆಸ್ತಿ ಎಂದು ಬಣ್ಣಿಸಿದರು.

89 ಎಕರೆ ಗೋಮಾಳಕ್ಕಾಗಿ ವಿರಾಜಪೇಟೆಯಲ್ಲಿ ಅವಿರತ ಹೋರಾಟ ನಡೆಸಿಕೊಂಡು ಬಂದಿರುವ ಗೋಪ್ರೇಮಿಗಳ ಶ್ರಮವನ್ನು ಶ್ಲಾಘಿಸಿದರು. 
ಉತ್ತರಕಾಶಿ ಕಪಿಲಾಶ್ರಮದ ಶ್ರೀ ರಾಮಚಂದ್ರ ಗುರೂಜಿ ಆಶೀರ್ವಚನ ನೀಡಿ, ಗೋಹತ್ಯೆ ನಿಷೇಧದ ಒತ್ತಾಯ ಇಂದು ನಿನ್ನೆಯದಲ್ಲ. ಶ್ರೀರಾಮಚಂದ್ರಾಪುರಮಠದಿಂದ ಈ ಆಂದೋಲನವನ್ನು ಎರಡು ದಶಕಗಳಿಂದ ಹಮ್ಮಿಕೊಂಡು ಬಂದಿದೆ ಎಂದರು. ಗೋಮಾತೆಯ ರಕ್ಷಣೆಗೆ ಇಡೀ ದೇಶದ ಜನ ಕಂಕಣಬದ್ಧರಾಗಬೇಕು ಎಂದು ಸೂಚಿಸಿದರು.

ಭಾಗಮಂಡಲ ತಲಕಾವೇರಿ ಮಠದ ಆನಂದ ಶ್ರೀಗಳು ಮಾತನಾಡಿ, ಗೋಹತ್ಯೆ ನಿಷೇಧವನ್ನು ಗಾಂಧೀಜಿ ಪ್ರತಿಪಾದಿಸಿದ್ದರು. ಆದರೆ ಅವರ ಉತ್ತರಾಧಿಕಾರಿಗಳು ಎಂದೂ ಇದನ್ನು ಗಂಭೀರವಾಗಿ ಪರಿಗಣಿಸದೇ ದೇಶದ್ರೋಹ ಎಸಗಿದ್ದಾರೆ ಎಂದು ಕಿಡಿಕಾರಿದ್ದರು. ಅಕ್ಬರ್, ಔರಂಗಜೇಬನ ಕಾಲದಲ್ಲಿ ಕೂಡಾ ಗೋಹತ್ಯೆ ನಿಷೇಧ ಇತ್ತು. ಬ್ರಿಟಿಷರ ಕಾಲದಿಂದ ಇದು ವ್ಯಾಪಕವಾಗಿದೆ ಎಂದು ವಿಷಾದಿಸಿದರು.

ಸಾಧುಪ್ರಾಣಿಯಾದ ಗೋವನ್ನು ಹತ್ಯೆ ಮಾಡುವುದಕ್ಕಿಂತ ನೀಚ ಕೃತ್ಯ ಏನೂ ಇಲ್ಲ. ಗೋಮಾಂಸ ತಿನ್ನುವವರು ಗೋವಿನ ಹಾಲು ಕುಡಿದರೆ ಮನಸ್ಸು ಹೇಗೆ ಪರಿವರ್ತನೆಯಾಗುತ್ತದೆ ಎಂದು ನೋಡಿಕೊಳ್ಳಲಿ. ಇಂದಲ್ಲ ನಾಳೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬರುವುದು ಖಂಡಿತಾ. ಗೋಪ್ರೇಮಿಗಳನ್ನು ಎದುರಿಸಿ. ಅದು ಬಿಟ್ಟು ಪ್ರೀತಿಯಿಂದ ಸಾಕಿದ ಗೊವನ್ನು ಕದ್ದುಕೊಂಡು ಹೋಗುವುದು ಹೇಡಿತನ ಎಂದು ಹೇಳಿದರು.
ಪೊನ್ನಂಪೇಟೆ ರಾಮಕೃಷ್ಣ- ಶಾರದಾಶ್ರಮದ ಶ್ರೀ ಬೋಧಸ್ವರೂಪಾನಂದ ಮಹಾರಾಜ್ ಆಶೀರ್ವಚನ ನೀಡಿ, ಅಧಿಕಾರ ವರ್ಗಕ್ಕೆ ಗೋಹತ್ಯೆ ನಿಷೇಧ ಕಾಯ್ದೆ ತರುವಂತೆ ಒತ್ತಡ ತರುವ ನಿಟ್ಟಿನಲ್ಲಿ ಎಲ್ಲರೂ ಗೋಸಂರಕ್ಷಣೆ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಜಿಲ್ಲೆಯ ಕುಶಾಲನಗರದಲ್ಲಿ ಅಭಯ ಗೋಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಕುಶಾಲನಗರ, ಸುಂಟಿಕೊಪ್ಪ, ಮಡಿಕೇರಿ, ವಿರಾಜಪೇಟೆಯಲ್ಲಿ ಭವ್ಯ ಶೋಭಾಯಾತ್ರೆ ನಡೆಯಿತು. ಬಜರಂಗ ದಳದ ಮುಖಂಡ ಹಾಗೂ ಕೊಡಗು ಗೋ ಪರಿವಾರ ಟ್ರಸ್ಟ್ ಸದಸ್ಯ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು. ಶ್ರೀಮಠದ ಜಿಲ್ಲಾ ಸಂಪರ್ಕಾಧಿಕಾರಿ ನಾಗರಾಜ ಪೆದಮಲೆ, ಲೆಕ್ಕಪರಿಶೋಧಕ ಈಶ್ವರ ಭಟ್, ಹವ್ಯಕ ವಲಯ ಕಾರ್ಯದರ್ಶಿ ಡಾ.ರಾಜಾರಾಂ, ಗೋ ಪರಿವಾರ ಕೊಡಗು ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷ ಕೆ.ಕೆ.ಶ್ಯಾಮ, ಕಾರ್ಯದರ್ಶಿ ಅನಿತಾ ಪೂವಯ್ಯ, ಭಾರತೀಯ ಗೋಪರಿವಾರ- ಕರ್ನಾಟಕದ ಮಧು ಗೋಮತಿ, ಶಿಶಿರ್ ಹೆಗಡೆ, ವಿನಾಯಕ ತಲವಟ್ಟ, ಉದಯಶಂಕರ ಭಟ್ ಮತ್ತಿತರರು ಹಾಜರಿದ್ದರು. ಜಿಲ್ಲೆಯಲ್ಲಿ ಸಂಗ್ರಹವಾದ 50 ಸಾವಿರಕ್ಕೂ ಅಧಿಕ ಹಸ್ತಾಕ್ಷರ ಪ್ರತಿಗಳನ್ನು ಸಮರ್ಪಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X