Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಲಿನ ದರ ಕಡಿತ ಹಿಂಪಡೆಯದಿದ್ದರೆ ಉಗ್ರ...

ಹಾಲಿನ ದರ ಕಡಿತ ಹಿಂಪಡೆಯದಿದ್ದರೆ ಉಗ್ರ ಪ್ರತಿಭಟನೆ: ಕೆ.ಎಸ್.ಪುಟ್ಟಣ್ಣಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ4 Jan 2018 11:27 PM IST
share

ಮಂಡ್ಯ, ಜ.4: ಮನ್‍ಮುಲ್ ಹಾಲಿನ ದರ ಕಡಿತಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ, ರೈತಸಂಘದ ವರಿಷ್ಠ ಕೆ.ಎಸ್.ಪುಟ್ಟಣ್ಣಯ್ಯ, ವಾರದೊಳಗೆ ನಿರ್ಧಾರ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನ್‍ಮುಲ್ ಆಡಳಿತ ಮಂಡಳಿ ಕೆಲವು ದಿನಗಳ ಹಿಂದೆ 2 ರೂ. ಕಡಿತಗೊಳಿಸಿರುವುದು ಸೇರಿದಂತೆ ಈ ವರ್ಷ 5 ರೂ. ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದರು.

2017ರ ಆರಂಭದಲ್ಲಿ ಲೀಟರ್ ಹಾಲಿಗೆ 26.50 ರೂ. ನೀಡುತ್ತಿದ್ದು, ಪ್ರಸ್ತುತ 21.50 ರೂ.ಗೆ ಇಳಿಸಲಾಗಿದೆ. ಜೋಳದ ಉತ್ಪಾದನೆ ಹೆಚ್ಚಳದಿಂದಾಗಿ ಪಶು ಆಹಾರದ ದರವನ್ನು ಕೇವಲ 90 ರೂ. ಇಳಿಕೆಯಾಗಿದೆ. ಇದನ್ನೇ ನೆಪಮಾಡಿಕೊಂಡು ಹಾಲಿನ ದರ ಕಡಿತಗೊಳಿಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.

2013ರಲ್ಲಿ ಎಕರೆ ಹುಲ್ಲಿನ ಬೆಲೆ 4,000 ರೂ.ಗಳಿದ್ದು, ಈಗ 16 ಸಾವಿರ ರೂ.ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಹಸು ಸಾಕಾಣೆ ಬಹಳ ಕಷ್ಟವಾಗಿದೆ. ಆದ್ದರಿಂದ ದರ ಕಡಿತ ಹಿಂಪಡೆಯಲು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸುತ್ತೇವೆ. ಸ್ಪಂದಿಸದಿದ್ದರೆ ಪ್ರತಿಭಟನೆ ಅನಿವಾರ್ಯ ಎಂದು ಅವರು ತಿಳಿಸಿದರು.
ರಾಗಿ, ಉದ್ದು, ಹೆಸರು, ತೊಗರಿ ಉತ್ಪಾದನೆ ಹೆಚ್ಚಳದಿಂದ ಬೆಲೆ ತೀವ್ರ ಕುಸಿತವಾಗಿದ್ದು, ಸರಕಾರ ಬೆಂಬಲ ಬೆಲೆ ನಿಗದಿಪಡಿಸಬೇಕು. ರಾಗಿಗೆ 2,300 ರೂ. ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸಕ್ಕರೆ ಜೀವನಾವಶ್ಯಕವಸ್ತು ಪಟ್ಟಿಗೆ ಸೇರಿಸಿರುವ ಕೇಂದ್ರ ಸರಕಾರ, ಹಲವಾರು ಉತ್ಪನ್ನಗಳನ್ನು ತಯಾರಿಸುವ ಜೋಳವನ್ನು ಸೇರಿಸದೆ ಅಜ್ಞಾನ ಪ್ರದರ್ಶಿಸಿದೆ. ಸರಕಾರಗಳು, ಹಲವು ಜನಪ್ರತಿನಿಧಿಗಳು ರೈತರ ಸಮಸ್ಯೆ ಬಗ್ಗೆ ಕಾಳಜಿ ಹೊಂದಿಲ್ಲ ಎಂದು ಅವರು ಕಿಡಿಕಾರಿದರು.

ಕೆಆರ್‍ಎಸ್‍ನಲ್ಲಿ ಸಾಕಷ್ಟು ನೀರಿದೆ. ಕನಿಷ್ಠ 4 ಕಟ್ಟು ಬೇಸಗೆ ಬೆಳೆಗೆ ನೀರು ಕೊಡಬಹುದು. ಆದ್ದರಿಂದ ಸರಕಾರ ಬೇಸಗೆ ಬೆಳೆಗೆ ನೀರುಹರಿಸಲು ಕ್ರಮವಹಿಸಬೇಕು ಎಂದು ಅವರು ತಾಕೀತು ಮಾಡಿದರು.

ಜಾತಿ, ಧರ್ಮ, ಹಣದಿಂದ ಮುಂದಿನ ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಸಮರದಲ್ಲಿ ತೊಡಗಿವೆ. ಮುಗ್ಧರ ಕೊಲೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಹಲವು ಪ್ರಗತಿಪರ ಸಂಘಟನೆಗಳು ಒಂದೊಂದು ಪಕ್ಷದ ಬೆನ್ನಿಗೆ ಬಿದ್ದಿವೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂದಾಗುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ರೈತಸಂಘವು ಮುಂಬರುವ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದಿಂದಲೇ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು, ಜ.13 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಮಿತಿ ಸಭೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕೇಂಬುದನ್ನು ನಿರ್ಧರಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಂಭೂನಹಳ್ಳಿ ಸುರೇಶ್, ಲಿಂಗಪ್ಪಾಜಿ, ಯರಗನಹಳ್ಳಿ ರಾಮಕೃಷ್ಣಯ್ಯ, ದೇವರಾಜು, ಪಿ.ಕೆ.ನಾಗಣ್ಣ, ಸೀತಾರಾಮು ಹಾಗು ಲತಾಶಂಕರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X