ಹೊಸಪೇಟೆ: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬಂದ್
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆಗೆ ಖಂಡನೆ
![ಹೊಸಪೇಟೆ: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಹೊಸಪೇಟೆ: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬಂದ್](https://www.varthabharati.in/sites/default/files/images/articles/2018/01/5/sssssssss.jpg)
ಹೊಸಪೇಟೆ, ಜ. 5: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹೊಸಪೇಟೆ ಬಂದ್ ನಡೆಯಿತು.
ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಅಂಬೇಡ್ಕರ್ ಭಾವಚಿತ್ರದೊಂದಿಗೆ ನಗರದ ವಾಲ್ಮೀಕಿ ವೃತ್ತದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಬಳ್ಳಾರಿಯತ್ತ ಪ್ರಯಾಣಿಸುವ ಪ್ರಯಾಣಿಕರು ಬೈಪಾಸ್ ರಸ್ತೆಯಿಂದ ಸಂಚಾರ ನಡೆಸಿದರು. ದೂರದೂರುಗಳ ಸಾರಿಗೆ ಬಸ್ ಗಳು ಸಹ ಹೊರವಲಯದಿಂದಲೇ ಸಂಚಾರ ಮಾಡಿದರು. ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಣೆಯಿಂದ ಬಂದ್ ನಡೆಸಿದವು.
Next Story