Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜಕೀಯ ತೇಜೋವಧೆಯ ಪ್ರಯತ್ನ ಫಲಿಸದು:...

ರಾಜಕೀಯ ತೇಜೋವಧೆಯ ಪ್ರಯತ್ನ ಫಲಿಸದು: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ5 Jan 2018 7:34 PM IST
share
ರಾಜಕೀಯ ತೇಜೋವಧೆಯ ಪ್ರಯತ್ನ ಫಲಿಸದು: ಸಚಿವ ಖಾದರ್

ಮಂಗಳೂರು, ಜ.5: ರಾಜಕೀಯವಾಗಿ ನನ್ನನ್ನು ತೇಜೋವಧೆಗೆ ಪ್ರಯತ್ನಗಳು ನಡೆಯುತ್ತಿದ್ದು, ಅದು ಫಲಿಸುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಟಾರ್ಗೆಟ್ ಗುಂಪಿನ ಸದಸ್ಯ ಇಲ್ಯಾಸ್ ಜತೆ ತಾನು ಊಟ ಮಾಡುತ್ತಿರುವ ಪೋಟೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವ ಕುರಿತು ಮತ್ತು ಸುರತ್ಕಲ್‌ನಲ್ಲಿ ನಡೆದ ದೀಪಕ್ ರಾವ್ ಹತ್ಯೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ತೇಜೋವಧೆ ಮಾಡುವ ಕೆಲಸ ಬಹಳ ಹಿಂದಿನಿಂದಲೇ ನಡೆಯುತ್ತಿದೆ. ನಾನು ಶಾಸಕನಾಗುವ ಮೊದಲು ನನ್ನ ತಂದೆ ಶಾಸಕರಾಗಿದ್ದಾಗಲೂ ನಡೆದಿದೆ. ಆದರೆ ನನ್ನ ಕ್ಷೇತ್ರದ ಜನತೆ ನನ್ನಲ್ಲಿ ವಿಶ್ವಾಸವಿರಿಸಿ ಅವರ ಮಗ, ಸಹೋದರನಂತೆ ಕಂಡಿದ್ದಾರೆ. ನನ್ನ ಹಾಗೂ ನನ್ನ ಕ್ಷೇತ್ರದ ಜನತೆಯ ನಡುವೆ ಯಾರಾದರೂ ವೈಮನಸ್ಸು ಮೂಡಿಸುವ ಪ್ರಯತ್ನ ಮಾಡಿದರೆ ಅದು ಸಫಲವಾಗುವುದಿಲ್ಲ. ಜಾತಿ, ಧರ್ಮ ಮರೆತು ಸರ್ವರೂ ನನ್ನ ಜತೆಗಿದ್ದಾರೆ ಎಂದರು.

ಟಾರ್ಗೆಟ್ ಗುಂಪಿನ ಸದಸ್ಯ ಇಲ್ಯಾಸ್ ಜತೆ ನನಗೆ ನಂಟು ಇದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾದುದು. ನಾನು ಆತನೊಂದಿಗೆ ಊಟ ಮಾಡುವ ಫೋಟೊ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ ಏನೂ ಮಾಡಲಾಗುವುದಿಲ್ಲ. ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಇಲ್ಯಾಸ್ ಸ್ಪರ್ಧಿಸಿದ್ದ. ಪಕ್ಕದಲ್ಲಿ ಬಂದು ಊಟಕ್ಕೆ ಕೂತರೆ ನಾನು ಏನು ಮಾಡುವುದು. ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಯಾರೂ ಬೇಕಾದರೂ ಅರ್ಜಿ ಹಾಕಬಹುದು, ಅದು ಆನ್‌ಲೈನ್ ಮೂಲಕ ನಡೆಯುತ್ತದೆ. ಯುವ ಕಾಂಗ್ರೆಸ್ ಚುನಾವಣೆಗೆ ಪ್ರತ್ಯೇಕ ಚುನಾವಣಾ ವ್ಯವಸ್ಥೆ ಇದೆ. ಇಲ್ಯಾಸ್‌ಗೆ ಸದಸ್ಯತ್ವ ನೀಡುವ ಕುರಿತು ಹಿಂದೆಯೇ ಆಕ್ಷೇಪ ಸಲ್ಲಿಸಲಾಗಿದೆ. ಆತ ಚುನಾವಣೆಗೆ ನಿಂತು ಸೋತು ನಿಯಮದಂತೆ ಉಪಾಧ್ಯಕ್ಷ ನಾಗಿದ್ದಾನೆ. ಆ ಬಳಿಕ ಹಲ್ಲೆ ಘಟನೆಯೊಂದರಲ್ಲಿ ಜೈಲಿಗೆ ಸೇರಿದ್ದಾನೆ. ಆತನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇಲ್ಯಾಸ್ ವಿರುದ್ಧ ಕೋಮು ಘಟನೆಯ ಪ್ರಕರಣಗಳು ದಾಖಲಾಗಿಲ್ಲ. ಉಳ್ಳಾಲದಲ್ಲಿ ಹಿಂದೆ ಟಾರ್ಗೆಟ್ ಗುಂಪು ಇತ್ತು. ಈ ಗುಂಪು ಕಾನೂನನ್ನು ಕೈಗೆತ್ತಿಕೊಂಡು ಕಾರ್ಯಾಚರಣೆ ಮಾಡುತ್ತಿದ್ದು, ಟಾರ್ಗೆಟ್ ಗುಂಪನ್ನು ಉಳ್ಳಾಲದಿಂದ ಓಡಿಸಿದ್ದೇವೆ. ಈಗ ಉಳ್ಳಾಲದಲ್ಲಿ ಟಾರ್ಗೆಟ್ ಗುಂಪು ಇಲ್ಲ ಎಂದು ಹೇಳಿದರು.

ದೀಪಕ್ ರಾವ್ ಕೊಲೆ ಖಂಡನೀಯ. ಕೊಲೆಯ ಹಿಂದೆ ಯಾರಿದ್ದರೂ ಎಷ್ಟೇ ದೊಡ್ಡ ಶಕ್ತಿ ಇದ್ದರೂ ದಂಡಿಸಬೇಕು. ಇದರಲ್ಲಿ ರಾಜಕೀಯ ಬೇಡ. ಸಾಮಾಜಿಕ ಸಾಮರಸ್ಯ ಕಾಪಾಡಲು ಎಲ್ಲಾ ರಾಜಕೀಯ ಪಕ್ಷಗಳು ಜತೆಯಾಗಿ ಕೆಲಸ ಮಾಡಬೇಕು. ರಾಜ್ಯ ಸರಕಾರ ಕೂಡಾ ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ತೆಗೆದುಕೊಳ್ಳಬೇಕು. ಇಲ್ಲಿಯ ತನಕ ಜಿಲ್ಲೆಯಲ್ಲಿ ನಡೆದಿರುವ ಪ್ರತಿಯೊಂದು ಕೊಲೆ ಪ್ರಕರಣದ ಸಮಗ್ರ ತನಿಖೆಯಾಗಿ ಯಾರು, ಯಾಕೆ ಕೊಲೆ ಮಾಡಿದ್ದಾರೆ, ಮಾಡಿಸಿದವರು ಯಾರು, ಹಣಕಾಸು ನೆರವು, ನ್ಯಾಯವಾದಿಗಳನ್ನು ಗೊತ್ತು ಮಾಡಿಸಿದವರು ಎಂಬಿತ್ಯಾದಿ ವಿವರಗಳು ಬಯಲಾಗಬೇಕು. ಆಗ ಎಲ್ಲರ ಬಂಡವಾಳ ಹೊರ ಬರುತ್ತದೆ. ಈಗಿನ ಪರಿಸ್ಥಿತಿಯಲ್ಲಿ ದೀಪಕ್ ರಾವ್ ಮನೆಗೆ ಹೋಗಲು ನನಗೆ ಮನಸ್ಸಿದ್ದರೂ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಸಾಮಾಜಿಕ ಜಾಲತಾಣಳಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಸುರತ್ಕಲ್‌ನಲ್ಲಿ ದೀಪಕ್ ಕೆಲಸ ಮಾಡುತ್ತಿದ್ದ ಮೊಬೈಲ್ ಅಂಗಡಿ ಮಾಲಕ ಮಜೀದ್ ಸೇರಿದಂತೆ ಆ ಪ್ರದೇಶದ ಮುಸ್ಲಿಂ ಬಂಧುಗಳಿಗೆ ದೀಪಕ್ ಮನೆಗೆ ಹೋಗಲು ಮನಸ್ಸಿತ್ತು, ಆದರೆ ರಾಜಕೀಯದಿಂದಾಗಿ ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X