Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮಾಯಕರ ಕೊಲೆ, ಹಲ್ಲೆ ಖಂಡನೀಯ: ಸಂಯಮದಿಂದ...

ಅಮಾಯಕರ ಕೊಲೆ, ಹಲ್ಲೆ ಖಂಡನೀಯ: ಸಂಯಮದಿಂದ ವರ್ತಿಸಿ-ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಹಿದಿನ್ ಕರೆ

ವಾರ್ತಾಭಾರತಿವಾರ್ತಾಭಾರತಿ5 Jan 2018 9:42 PM IST
share
ಅಮಾಯಕರ ಕೊಲೆ, ಹಲ್ಲೆ ಖಂಡನೀಯ: ಸಂಯಮದಿಂದ ವರ್ತಿಸಿ-ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಹಿದಿನ್ ಕರೆ

ಮಂಗಳೂರು, ಜ.5: ಕರಾವಳಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೋಮುದ್ವೇಷದ ಘಟನೆಗಳು ಇಲ್ಲಿನ ಸಂಸ್ಕೃತಿಗೆ ಮಾರಕವಾಗಿದೆ. ಕರಾವಳಿಯಲ್ಲಿ ಈ ಪರಿಸ್ಥಿತಿ ಇಷ್ಟೊಂದು ಅಪಾಯಕಾರಿ ಮಟ್ಟಕ್ಕೆ ತಲುಪಿರುವುದನ್ನು ನನಗೆ ಊಹಿಸಲು ಸಾಧ್ಯವಾಗುತ್ತಿಲ್ಲ. ಇಲ್ಲಿ ಸಾಕಷ್ಟು ಬುದ್ಧಿಜೀವಿಗಳು, ವಿದ್ಯಾವಂತರು, ವಿಚಾರವಂತ ಇದ್ದರೂ ಇಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಆಘಾತಕಾರಿಯಾಗಿದೆ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ  ಬಿ.ಎ. ಮೊಹಿದಿನ್ ತಿಳಿಸಿದರು.

ಅವರು ಕಾಟಿಪಳ್ಳದ ದೀಪಕ್ ರಾವ್ ಕೊಲೆ ಪ್ರಕರಣ ಮತ್ತು ಬಶೀರ್‌ ಅವರ ಮೇಲೆ ನಡೆದ ಮಾರಣಾಂತಿಕ, ಬರ್ಬರ ಹಲ್ಲೆ ಪ್ರಕರಣವನ್ನು ಖಂಡಿಸಿದ್ದಾರೆ.

ಇಂತಹ ಕೋಮುದ್ವೇಷದ ಘಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಮೌನವಹಿಸದೆ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಯಾವುದೇ ವ್ಯಕ್ತಿಯ ಕೊಲೆ ನಡೆದಾಗ ಒಂದು ಧರ್ಮದವರು ಇನ್ನೊಂದು ಧರ್ಮದವರ ವಿರುದ್ಧ ದ್ವೇಷ ಸಾಧನೆ ಇಳಿಯದೆ ಸಂಯಮದಿಂದ ವರ್ತಿಸಿ ಆರೋಪಿಗಳನ್ನು ಹಿಡಿಯಲು ಸಹಕರಿಸಬೇಕು. ಈ ರೀತಿಯ ದುಷ್ಕೃತ್ಯಗಳನ್ನು ನಡೆಸುವುದರ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಕೂಲಂಕಷವಾಗಿ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.

ಇಂದಿನ ಕೆಲವು ರಾಜಕಾರಣಿಗಳ ಹೇಳಿಕೆಗಳನ್ನು ಗಮನಿಸಿದಾಗ ತಾಳ್ಮೆಯಿಂದ ಘಟನೆಯ ಬಗ್ಗೆ ವಿವೇಚನೆ ಮಾಡದೆ ಸಮಾಜದಲ್ಲಿ ಶಾಂತಿ ಕಾಪಾಡಲು ಯತ್ನಿಸುವ ಬಗ್ಗೆ ಯೋಚನೆ ಮಾಡದೆ ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸುವ ಕೆಟ್ಟ ಪ್ರವೃತ್ತಿಯ ರಾಜಕೀಯ ಬೆಳೆಯುತ್ತಿದೆ ಎಂದು ಭಾಸವಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಒಂದು ಧರ್ಮದ ಜನರು, ಇನ್ನೊಂದು ಜನಾಂಗವನ್ನು ವಿರೋಧಿಸುವ ಪ್ರವೃತ್ತಿ ಬೆಳೆದಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಹೊಟ್ಟೆಪಾಡಿಗಾಗಿ ಯಾರಿಗೂ ತೊಂದರೆ ಮಾಡದೆ ತನ್ನ ವೃತ್ತಿಯನ್ನು ತನ್ನಷ್ಟಕ್ಕೆ ಮಾಡಿಕೊಂಡಿರುವ ಅಮಾಯಕ ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡುವ ಮತ್ತು ಅವರ ಮೇಲೆ ಹಲ್ಲೆ ನಡೆಸುವ ಅಮಾನುಷ ಪ್ರವೃತ್ತಿ ಖಂಡನೀಯ. ಈ ರೀತಿ ಹಿಂಸೆಯ ಮೂಲಕ ಧರ್ಮಕ್ಕೆ ಅಪಮಾನವಾಗುವ ಕೆಲಸವನ್ನು ಮಾಡಿ ಧರ್ಮವನ್ನು ಅಪವಿತ್ರಗೊಳಿಸುವ ಕೆಲಸಕ್ಕೆ ಯಾರೂ ಇಳಿಯಬಾರದು. ಹಿಂಸಾಕೃತ್ಯದಲ್ಲಿ ತೊಡಗುವ ಕೋಮುವಾದಿಗಳಿಗೆ ಯಾವ ಧರ್ಮದವರೂ ಬೆಂಬಲ ನೀಡಬಾರದು. ಜಿಲ್ಲೆಯಲ್ಲಿ ಶಾಂತಿಕಾಪಾಡಲು ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ಬಿ.ಎ.ಮೊಹಿದಿನ್ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X