Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಅಭಿವೃದ್ಧಿ-ನೂತನ ತಂತ್ರಜ್ಞಾನ...

ಕೃಷಿ ಅಭಿವೃದ್ಧಿ-ನೂತನ ತಂತ್ರಜ್ಞಾನ ಅಳವಡಿಕೆಗೆ ಆದ್ಯತೆ: ಡಾ.ಜೆನ್ನಿ ಬೋರ್ಲಾಗ್ ಲೂಬೆ

ವಾರ್ತಾಭಾರತಿವಾರ್ತಾಭಾರತಿ5 Jan 2018 11:35 PM IST
share
ಕೃಷಿ ಅಭಿವೃದ್ಧಿ-ನೂತನ ತಂತ್ರಜ್ಞಾನ ಅಳವಡಿಕೆಗೆ ಆದ್ಯತೆ: ಡಾ.ಜೆನ್ನಿ ಬೋರ್ಲಾಗ್ ಲೂಬೆ

ಧಾರವಾಡ, ಜ.5: ವಾತಾವರಣದಲ್ಲಿ ಉಂಟಾಗುತ್ತಿರುವ ಜಾಗತಿಕ ಬದಲಾವಣೆಗಳಿಂದ ಆಹಾರ ಉತ್ಪಾದನೆ, ಕೃಷಿ ಬೆಳವಣಿಗೆಗೆ ಹಿನ್ನೆಡೆಯಾಗಿದ್ದು, ಈ ನಿಟ್ಟಿನಲ್ಲಿ ಅಧ್ಯಯನ ಮತ್ತು ಸಂಶೋಧನೆಗೆ ಡಾ.ನಾರ್ಮನ್ ಬೋರ್ಲಾಗ್ ಅಂತಾರಾಷ್ಟ್ರೀಯ ಕೃಷಿ ಅಭಿವೃದ್ಧಿ ಕೇಂದ್ರವು ಆದ್ಯತೆ ನೀಡಿ ಕೆಲಸ ಮಾಡಲಿದೆ ಎಂದು ಅಮೆರಿಕಾದ ಬೋರ್ಲಾಂಗ್ ಗ್ಲೋಬಲ್ ರಸ್ಟ್ ಇನಿಶಿಯೇಟಿವ್ ಸಂಸ್ಥೆಯ ಅಧ್ಯಕ್ಷೆ ಡಾ.ಜೆನ್ನಿ ಬೋರ್ಲಾಗ್ ಲೂಬೆ ಹೇಳಿದರು.

ಶುಕ್ರವಾರ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಡಾ.ನಾರ್ಮನ್ ಬೋರ್ಲಾಗ್ ಅಂತಾರಾಷ್ಟ್ರೀಯ ಕೃಷಿ ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ನಾರ್ಮನ್ ಬೋರ್ಲಾಗ್ ಏಷ್ಯಾ ಮತ್ತು ಆಫ್ರಿಕನ್ ದೇಶಗಳಲ್ಲಿನ ಆಹಾರ ಸಮಸ್ಯೆಗಳ ಪರಿಹಾರ ಕಾಣಲು ಮತ್ತು ಅಗತ್ಯ ಪ್ರಮಾಣದ ಆಹಾರವನ್ನು ಸ್ವಯಂ ಆಗಿ ಉತ್ಪಾದಿಸಿಕೊಳ್ಳುವಂತೆ ಮಾಡಲು ಅನೇಕ ಸಂಶೋಧನೆಗಳನ್ನು ಮಾಡಿದ್ದರು ಎಂದು ಅವರು ಹೇಳಿದರು.

ಭಾರತವು ಸ್ವಾತಂತ್ರ್ಯ ನಂತರ ಅನುಭವಿಸಿದ ಆಹಾರ ಸಮಸ್ಯೆ, ಆಹಾರ ಉತ್ಪಾದನೆ ಸಮಸ್ಯೆಗಳನ್ನು ಸಮರ್ಥವಾಗಿ ಭಾರತೀಯ ನಾಯಕರ ಮತ್ತು ವಿಜ್ಞಾನಿಗಳ ಸಹಕಾರದಿಂದ ಪರಿಹರಿಸಿದರು. ಜಾಗತಿಕ ಮಟ್ಟದಲ್ಲಿ ಹಸಿರುಕ್ರಾಂತಿಗೆ ಡಾ.ನಾರ್ಮನ್ ಬೋರ್ಲಾಗ್ ಬಹು ಮಟ್ಟಿನ ಕೊಡುಗೆ ನೀಡಿದ್ದಾರೆ ಎಂದು ಜೆನ್ನಿ ಬೋರ್ಲಾಗ್ ತಿಳಿಸಿದರು.

2050ರ ಹೊತ್ತಿಗೆ ಕೃಷಿ, ಆಹಾರ ಉತ್ಪಾದನೆಗಳಿಗೆ ಏದುರಾಗಬಹುದಾದ ತೊಂದರೆಗಳನ್ನು ಸಮರ್ಥವಾಗಿ ನಿಭಾಯಿಸಲು ಇಂದಿನ ಯುವ ವಿದ್ಯಾರ್ಥಿಗಳನ್ನು, ಸಂಶೋಧಕರನ್ನು ಮತ್ತು ಯುವ ರೈತರನ್ನು ಸಜ್ಜುಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಡಾ.ನಾರ್ಮನ್ ಬೋರ್ಲಾಗ್ ಕೃಷಿ ಅಭಿವೃದ್ಧಿ ಕೇಂದ್ರ ಅಧ್ಯಾಪಕರಿಗೆ, ಸಂಶೋಧಕರಿಗೆ, ವಿದ್ಯಾರ್ಥಿಗಳೊಂದಿಗೆ ಯುವ ರೈತರಿಗೆ ಅಧ್ಯಯನ ಪ್ರವಾಸ, ಪರಸ್ಪರ ವಿನಿಮಯ ಕಾರ್ಯಕ್ರಮ ರೂಪಿಸಿದೆ. ಹೊಸ ಸಂಶೋಧನೆಗಳಿಗೆ ಪ್ರೋತ್ಸಾಹ ನೀಡಲಿದೆ ಎಂದು ಅವರು ಹೇಳಿದರು.

ಹಸಿರು ಕ್ರಾಂತಿಯ ಹರಿಕಾರ ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಡಾ.ನಾರ್ಮನ್ ಬೋರ್ಲಾಗ್ ಹೆಸರಿನಲ್ಲಿ ಅಭಿವೃದ್ಧಿ ಕೇಂದ್ರ ಆರಂಭಿಸಿರುವುದರೊಂದಿಗೆ ಅವರ ಪ್ರತಿಮೆಯನ್ನು ಅನಾವರಣ ಮಾಡಿದ್ದಕ್ಕಾಗಿ ಅವರ ಮಗಳಾಗಿ ನನಗೆ ಹೆಮ್ಮೆ ಎನಿಸಿದೆ ಜೆನ್ನಿ ಬೋರ್ಲಾಗ್ ಸಂತಸ ವ್ಯಕ್ತಪಡಿಸಿದರು.

ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಅಮೆರಿಕಾದ ಕಾರ್ನಲ್ ವಿಶ್ವವಿದ್ಯಾಲಯದ ಸಹ ನಿರ್ದೇಶಕ ಡಾ.ಕೆ.ವಿ.ರಾಮನ್, ಹೈದ್ರಾಬಾದ್ ಸದ್ಗುರು ವ್ಯವಸ್ಥಾಪನಾ ಸಮಾಲೋಚಕ ಸಂಸ್ಥೆಯ ಮುಖ್ಯಸ್ಥ ಡಾ.ಕೆ.ವಿಜಯ ರಾಘವನ್ ಮತ್ತು ಅಮೆರಿಕಾದ ಎ ಆ್ಯಂಡ್ ಎಂ ವಿಶ್ವವಿದ್ಯಾಲಯದ ತರಕಾರಿ ಮತ್ತು ಹಣ್ಣು ಅಭಿವೃದ್ಧಿ ಕೇಂದ್ರದ ಡಾ.ಭೀಮು ಪಾಟೀಲ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಕಾರ್ನಲ್ ವಿವಿಯ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ನಿರ್ದೇಶಕ ಡಾ.ರೊನ್ನಿಯಾ ಕಾಫಮನ್, ಕಾರ್ಯನಿರ್ವಾಹಕ ಡೀನ್ ಡಾ.ಮ್ಯಾಕ್ಸ್ ಜೆ.ಫೆಪರ್ ಮಾತನಾಡಿ, ಧಾರವಾಡ ಕೃಷಿ ವಿವಿ ಡಾ.ನಾರ್ಮನ್ ಬೋರ್ಲಾಗ್ ಕೇಂದ್ರದಿಂದ ಸಂಘಟಿಸುವ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕುಲಪತಿ ಡಾ.ಬಿ.ಪಿ.ಬಿರಾದರ, ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಈಶ್ವರಚಂದ್ರ ಹೊಸಮನಿ, ಡಾ.ರಾಜೇಂದ್ರ ಸಣ್ಣಕ್ಕಿ, ಬಿ.ಸುಮಿತಾದೇವಿ, ಕೃಷಿ ವಿವಿಯ ಪಿಪಿಎಮ್‌ಸಿ ಘಟಕದ ಮುಖ್ಯಸ್ಥ ಡಾ.ರಾಜೇಂದ್ರ ಪೊದ್ದಾರ, ಡಾ.ಎನ್.ಕೆ.ಬಿರಾದರ, ವಿಶ್ರಾಂತ ಕುಲಪತಿ ಡಾ.ಜಿ.ವಿ.ಗೌಡಾ, ಡಾ.ಆರ್.ಆರ್. ಹಂಚಿನಾಳ ಸೇರಿದಂತೆ ವಿವಿ ಡೀನ್‌ರು, ಅಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಯುವ ರೈತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X