Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದ್ರಾವಿಡ ಸಂಸ್ಕೃತಿಗೆ ಹೊಗೆ ಹಾಕದಿರಲಿ

ದ್ರಾವಿಡ ಸಂಸ್ಕೃತಿಗೆ ಹೊಗೆ ಹಾಕದಿರಲಿ

ವಾರ್ತಾಭಾರತಿವಾರ್ತಾಭಾರತಿ5 Jan 2018 11:58 PM IST
share

ಮಾನ್ಯರೇ,

 ರಜನಿಕಾಂತರ ರಾಜಕೀಯ ಪ್ರವೇಶವನ್ನು ಸ್ವಾಗತಿಸಲಾರದ ಸ್ಥಿತಿಯಲ್ಲಿ ಪ್ರಜ್ಞಾವಂತರು ಒದ್ದಾಡಬೇಕಾಗಿದೆ. ಮೊದಲನೆಯದಾಗಿ ಇಷ್ಟು ವರ್ಷ ಸುಮ್ಮನಿದ್ದು ತೀರಾ ಇಳಿವಯಸ್ಸಿನಲ್ಲಿ ಬಂದಿದ್ದಾರೆ ರಜನಿ. ಅಭ್ಯಾಸವಾಗಿರುವ ಚಿತ್ರರಂಗದಲ್ಲೇ ಬಹುಕಾಲ ಸಕ್ರಿಯರಾಗಿರುವುದು ಅವರಿಗೆ ಇನ್ನು ಸಾಧ್ಯವಾಗಲಾರದು. ಅಂತಹದ್ದರಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟಿ, ಬಲಗೊಳಿಸಲು ಅವರೊಬ್ಬರಿಂದ ಖಂಡಿತ ಸಾಧ್ಯವಿಲ್ಲ. ಇದನ್ನು ತಿಳಿದೇ ನಾಯಿನರಿಗಳು ಪಾಲಿಗಾಗಿ ಹೊಂಚುಹಾಕುತ್ತಿವೆ.

ಆರಂಭದಲ್ಲೇ ರಜನಿಕಾಂತ್ ಆಷಾಢಭೂತಿತನ ಪ್ರದರ್ಶಿಸಿದ್ದಾರೆ. ಸಿನೆಮಾವೊಂದಕ್ಕೆ ಕೋಟ್ಯಂತರ ರೂ. ಸಂಭಾವನೆ ಪಡೆದು ಕೋಟ್ಯಧೀಶರಾಗಿರುವ ಅವರು ‘ಮಾಫಲೇಶು ಕದಾಚನ’ ಎಂದು ಯಾರಿಗೆ ಹೇಳಿದ್ದಾರೆ? ಶೂದ್ರ ಸಮುದಾಯದ ಸಾಧಕರಾದ ತಾವೂ ಸಹ ಮನುವಾದಿಗಳ ದೃಷ್ಟಿಯಲ್ಲಿ ‘ಪಾಪಯೋನಿಜ’ರೆಂಬುದು ಅವರಿಗೆ ಗೊತ್ತೇ ಇದ್ದಂತಿಲ್ಲ. ಇಡೀ ಭಾಷಣದಲ್ಲಿ ಡ್ರಾವಿಡ ಸಂಸ್ಕೃತಿ, ಪೆರಿಯಾರ್, ತಮಿಳು ಸಾಹಿತಿಗಳ ಮೇಲೆ ಮನುವಾದಿಪಡೆ ವಿಧಿಸಿದ ನಿಷೇಧ ಇತ್ಯಾದಿಗಳ ಬಗ್ಗೆ ಅವರು ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸಲೇ ಇಲ್ಲ. ಬದಲಿಗೆ ಕೇಸರಿ ಪಕ್ಷದ ‘ಬಿ’ ಟೀಮ್ ಆಗುವ ಲಕ್ಷಣಗಳನ್ನು ತೋರಿದರು.

ಬಾಳಾಠಾಕ್ರೆಯನ್ನು ಹೊಗಳಿದ, ಮೋದಿಯವರನ್ನು ಮೆಚ್ಚುವ ರಜನಿಕಾಂತ್‌ರಿಂದ ಮುತ್ಸದ್ದಿ ನಡೆಯನ್ನು, ಗಟ್ಟಿತನವನ್ನು ನಿರೀಕ್ಷಿಸಲಾಗದು. ‘ಪ್ರಜಾರಾಜ್ಯಂ’ ಕಟ್ಟಿ, ಮಣ್ಣು ಮಾಡಿ ಕಾಂಗ್ರೆಸ್ ಸೇರಿದ್ದಾರೆ ಚಿರಂಜೀವಿ. ರಜನಿಕಾಂತ್ ಪಕ್ಷಕ್ಕೂ ಅದೇ ಗತಿ ಒದಗಿ ಅವರು ಕೇಸರಿ ಪಕ್ಷಕ್ಕೆ ಸೇರಿದರೆ ತಮಿಳುನಾಡನ್ನು ಆರ್ಯರಿಗೆ ಆಹುತಿಕೊಟ್ಟಂತೆಯೇ...

ಎಪ್ಪತ್ತು- ಎಂಬತ್ತರ ದಶಕದಲ್ಲಿ ರಜನೀಕಾಂತ್ ಸ್ಟೈಲಾಗಿ ಸಿಗರೇಟು ಸೇದಿ ಸಾವಿರಾರು ಎಳೆಯರ ಶ್ವಾಸಕೋಶಗಳಿಗೆ ಹೊಗೆಹಾಕಿದರು. ಇದೀಗ ದಕ್ಷಿಣ ಭಾರತದ ದ್ರಾವಿಡ ಸಂಸ್ಕೃತಿಗೆ ಹೊಗೆ ಹಾಕಿ ಇತಿಹಾಸದಲ್ಲಿ ತಲೈವಾ ತಲೆತೆಗೆದವನಾಗಿ ದಾಖಲಾಗದಿರಲಿ.

-ಕಸ್ತೂರಿ, ತುಮಕೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X