Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ವಧರ್ಮೀಯರಿಗೆ ಒಂದೇ ಪ್ರಾರ್ಥನಾ ಕೊಠಡಿ

ಸರ್ವಧರ್ಮೀಯರಿಗೆ ಒಂದೇ ಪ್ರಾರ್ಥನಾ ಕೊಠಡಿ

ಚಂಡೀಗಢದ ಸರಕಾರಿ ಆಸ್ಪತ್ರೆಯಲ್ಲಿ ವಿನೂತನ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ6 Jan 2018 11:13 AM IST
share
ಸರ್ವಧರ್ಮೀಯರಿಗೆ ಒಂದೇ ಪ್ರಾರ್ಥನಾ ಕೊಠಡಿ

ಚಂಡೀಗಡ, ಜ.6: ‘ದೇವರು ಒಬ್ಬನೇ‘ ಎಂಬ ತತ್ವದಡಿ ನಗರದ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ(ಜಿಎಂಸಿಎಚ್) ಹಿಂದೂಗಳು, ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್‌ಗಳು ಹಾಗೂ ಬೇರೆ ಬೇರೆ ಧರ್ಮದ ಮೇಲೆ ನಂಬಿಕೆ ಇರುವವರು ಪ್ರಾರ್ಥನೆ ಸಲ್ಲಿಸಲು ಆಸ್ಪತ್ರೆಯಲ್ಲಿ ಕೊಠಡಿಯೊಂದನ್ನು ತೆರೆಯಲಾಗಿದೆ.

 ಜಿಎಂಸಿಎಚ್ ನಗರದಲ್ಲಿ ಇಂತಹ ವ್ಯವಸ್ಥೆಯನ್ನು ಕಲ್ಪಿಸಿರುವ ಮೊತ್ತ ಮೊದಲ ಸರಕಾರಿ ಆಸ್ಪತ್ರೆಯಾಗಿದ್ದು, ಈ ವಿನೂತನ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದು, ಬೆಳಗ್ಗೆ ಹಾಗೂ ಸಂಜೆ ವೇಳೆ ಈ ಕೊಠಡಿ ತುಂಬಿತುಳುಕುತ್ತಿರುತ್ತದೆ. 10ಕ್ಕೂ ಹೆಚ್ಚು ಆಪರೇಶನ್ ಥಿಯೇಟರ್‌ಗಳಿರುವ ಆಸ್ಪತ್ರೆ ಕಟ್ಟಡದ ‘ಸಿ’ ಬ್ಲಾಕ್‌ನಲ್ಲಿ ಪ್ರಾರ್ಥನಾ ಕೊಠಡಿಯಿದೆ. ಈ ವ್ಯವಸ್ಥೆಯನ್ನು ಕುಟುಂಬ ಸದಸ್ಯರುಗಳು ಹಾಗೂ ರೋಗಿಗಳೊಂದಿಗೆ ಇರುವ ವ್ಯಕ್ತಿಗಳು ಮಾತ್ರ ಬಳಸಬಹುದಾಗಿದೆ.

‘‘ನಾನು ಇಂದು ಬೆಳಗ್ಗೆ ಪ್ರಾರ್ಥನೆ ಸಲ್ಲಿಸುವಾಗ ನನ್ನ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರಿದ್ದರು. ಅವರು ಕೂಡ ಪ್ರಾರ್ಥನೆ ಸಲ್ಲಿಸುತ್ತಿದ್ದರು... ಎಲ್ಲ ಧರ್ಮದವರು ಇಲ್ಲಿ ಒಂದೇ ಸ್ಥಳದಲ್ಲಿ ಸೇರುತ್ತಿದ್ದಾರೆ. ಈ ಸ್ಥಳದಲ್ಲಿ ತುಂಬಾ ಶಾಂತಿ ಸಿಗುತ್ತಿದೆ. ಆಸ್ಪತ್ರೆಯ ಆಡಳಿತ ಮಂಡಳಿ ಇಂತಹ ವ್ಯವಸ್ಥೆ ಕಲ್ಪಿಸಿ ಅದ್ಭುತ ಕೆಲಸ ಮಾಡಿದೆ’’ ಎಂದು ಬಲ್ಜಿಂದರ್ ಸಿಂಗ್ ಹೇಳಿದ್ದಾರೆ.

‘‘ಪ್ರತಿಯೊಬ್ಬರು ಕಷ್ಟದ ಸಮಯದಲ್ಲಿದ್ದಾಗ ದೇವರ ಮೊರೆ ಹೋಗಲು ಇಲ್ಲಿ ಬಂದು ಪ್ರಾರ್ಥಿಸುತ್ತಾರೆ. ಇಂತಹ ಸಮಯದಲ್ಲಿ ಯಾರ ಮನಸ್ಸಿನಲ್ಲಿ ಧರ್ಮಬೇಧವಿರುವುದಿಲ್ಲ. ಇಂತಹ ಕ್ಷಣಗಳು ನಾವೆಲ್ಲರೂ ಒಟ್ಟಿಗೆ ಇರಬೇಕೆಂಬ ಭಾವನೆ ಮೂಡಿಸುತ್ತವೆ’’ ಎಂದು ಉತ್ತರಪ್ರದೇಶದ ಸಹರಾನ್ಪುರದ ಮುಹಮ್ಮದ್ ಅಫ್ರಝುಲ್ ಹೇಳುತ್ತಾರೆ.

ಪ್ರಾರ್ಥನಾ ಕೊಠಡಿ ವಿಶಾಲವಾಗಿದ್ದು, ಪ್ರವೇಶದ್ವಾರಕ್ಕೆ ಮುಖವಾಗಿ ಒಂದು ಟೇಬಲ್ ಇಡಲಾಗಿದೆ. ಟೇಬಲ್ ಹತ್ತಿರದ ಬೋರ್ಡ್‌ನಲ್ಲಿ ಎಲ್ಲ ಧರ್ಮದವರ ಸಂಕೇತಗಳನ್ನು ಮುದ್ರಿಸಲಾಗಿದೆ. ಬೆಳಗ್ಗೆ ಹಾಗೂ ಸಂಜೆ ಕೊಠಡಿ ಜನರಿಂದ ತುಂಬಿರುತ್ತದೆ. ‘‘ಆಸ್ಪತ್ರೆಯ ಹೊರಗಡೆ ಕೆಲುವರು ತಮ್ಮ ಸಂಬಂಧಿಕರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿರುವುದನ್ನು ಗಮನಿಸಿದ್ದೆ. ಈ ಹಿಂದೆ ಎಲ್ಲರಿಗೂ ಪ್ರಾರ್ಥನೆ ಸಲ್ಲಿಸಲು ಅವಕಾಶವಿರಲಿಲ್ಲ. ಈ ಪ್ರಾರ್ಥನಾ ಕೊಠಡಿ ಆರಂಭಿಸಿದ ಬಳಿಕ ಎಲ್ಲ ಧರ್ಮೀಯರು ಒಂದೇ ಸೂರಿನಲ್ಲಿ ಸೇರುವಂತಾಗಿದೆ’’ ಎಂದು ಪ್ರಾರ್ಥನಾ ಕೊಠಡಿ ನಿರ್ಮಾಣಕ್ಕೆ ಕಾರಣರಾಗಿರುವ ಡಾ.ರವಿ ಗುಪ್ತಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X