Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರದಿ ತಯಾರಿಸಲು ಕೆಐಒಸಿಎಲ್‌ಗೆ ಸೂಚನೆ:...

ವರದಿ ತಯಾರಿಸಲು ಕೆಐಒಸಿಎಲ್‌ಗೆ ಸೂಚನೆ: ಸಚಿವ ಚೌಧರಿ ಬಿರೇಂದರ್ ಸಿಂಗ್

ಮೈಸೂರಿನಲ್ಲಿ ಚಿನ್ನದ ನಿಕ್ಷೇಪಗಳು ಪತ್ತೆ !

ವಾರ್ತಾಭಾರತಿವಾರ್ತಾಭಾರತಿ6 Jan 2018 7:47 PM IST
share

ಮಂಗಳೂರು, ಜ.6: ಮೈಸೂರಿನಲ್ಲಿ ಚಿನ್ನ ಮತ್ತು ತಮಿಳುನಾಡಿನ ತಿರುವೂರು ಪ್ರದೇಶದಲ್ಲಿ ಕಬ್ಬಿಣದ ನಿಕ್ಷೇಪಗಳು ಕಂಡುಬಂದಿದ್ದು, ಈ ನಿಟ್ಟಿನಲ್ಲಿ ಶೋಧ ಕಾರ್ಯ ನಡೆಸಲು ಕೆಐಒಸಿಎಲ್‌ಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಚೌಧರಿ ಬಿರೇಂದರ್ ಸಿಂಗ್ ತಿಳಿಸಿದ್ದಾರೆ.

ಅವರು ಇಂದು ಕೆಐಒಸಿಎಲ್ ಕಾರ್ಖಾನೆಯ ಖಾಲಿ ಜಾಗದಲ್ಲಿ 1 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ ಶಂಕುಸ್ಥಾಪನೆ, ಡಿಜಿಟಲ್ ಕಿಯೋಸ್ಕ್ ಉದ್ಘಾಟನೆಗೆ ಆಗಮಿಸಿದ್ದು ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಅಲ್ಲಿ ಲಭ್ಯವಿರುವ ಅದಿರಿನ ಗುಣಮಟ್ಟ ಮತ್ತು ಪ್ರಮಾಣವೆಷ್ಟು ಎನ್ನುವ ವರದಿ ತಯಾರಿಸಿ ಸಲ್ಲಿಸುವಂತೆ ಕೆಐಒಸಿಎಲ್‌ಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಹೊಸದಾಗಿ ಕಬ್ಬಿಣ ಅದಿರು ಲಭ್ಯವಾದರೆ ಮಂಗಳೂರಿನ ಕೆಐಒಸಿಎಲ್‌ನ ಕಾರ್ಯಕ್ಷಮತೆಯನ್ನು ಇನ್ನಷ್ಟು ವಿಸ್ತರಿಸಲು ಸಹಕಾರಿಯಾಗಲಿದೆ ಎಂದರು.

ಬಳ್ಳಾರಿಯಲ್ಲಿ ಈಗಾಗಲೇ ಗಣಿಗಾರಿಕೆ ನಡೆಯುತ್ತಿದ್ದು, 2 ಮಿಲಿಯನ್ ಟನ್ ಸಾಮರ್ಥ್ಯದ ಕಬ್ಬಿಣದ ಉಂಡೆ ತಯಾರಿ ಘಟಕವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ವಿಶಾಖಪಟ್ಟಣದಲ್ಲಿ ಕಬ್ಬಿಣದ ಉಂಡೆ ತಯಾರಿ ಘಟಕ ಸ್ಥಾಪನೆ ಮಾಡುವ ಕುರಿತು ಅಲ್ಲಿನ ಆರ್‌ಐಎನ್‌ಎಲ್ ಸಂಸ್ಥೆಯೊಂದಿಗೆ ಕೆಐಒಸಿಎಲ್ ಒಪ್ಪಂದ ಮಾಲಾಗಿದೆ. ಶೀಘ್ರದಲ್ಲೇ ಅಲ್ಲಿ 1.2 ಮಿಲಿಯನ್ ಟನ್ ಸಾಮರ್ಥ್ಯದ ಘಟಕ ಸ್ಥಾಪನೆಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.

ಕೆಐಒಸಿಎಲ್‌ನಲ್ಲಿರುವ ಊದು ಕುಲುಮೆಯನ್ನು ಶೀಘ್ರವೇ ಮೇಲ್ದರ್ಜೆಗೆ ಏರಿಸಲಾಗುವುದು. ಈ ಕಾರ್ಯ ಮುಗಿದ ಕೂಡಲೆ ಇಲ್ಲಿ 2 ಲಕ್ಷ ಟನ್ ಸಾಮರ್ಥ್ಯದ ಡಿಐ (ಡಕ್ಟೈಲ್ ಐಯರ್ನ್) ಪೈಪ್‌ಗಳನ್ನು ತಯಾರಿಸುವ ಘಟಕ ಸ್ಥಾಪಿಸಲಾಗುವುದು. ಇದು ಕಾರ್ಯರೂಪಕ್ಕೆ ಬಂದರೆ ದೇಶದಲ್ಲೇ ಮೂರನೇ ಘಟಕ ಇದಾಲಿದೆ. ತುಕ್ಕು ರಹಿತ ಹಾೂ ಸೋರಿಕೆ ರಹಿತವಾಗಿರುವ ಈ ಪೈಪ್ ಗಳನ್ನು ನೀರು ವಿತರಣೆ ಕಾರ್ಯಗಳಿಗೆ ಬಳಕೆ ಮಾಡ ಬಹುದಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕೆಐಒಸಿಎಲ್‌ನ ಊದು ಕುಲುಮೆ ಹತ್ತಿರ ಇರುವ 7 ಎಕರೆ ಜಾಗದಲ್ಲಿ ಒಂದು ಮೆಗಾವ್ಯಾಟ್ ಸಾಮರ್ಥ್ಯದ 8 ಕೋಟಿ ರು. ವೆಚ್ಚದ ಸೌರಶಕ್ತಿ ಘಟಕ ನಿರ್ಮಾಣ ಎರಡು ತಿಂಗಳೊಳಗೆ ಪೂರ್ಣವಾಗಲಿದೆ. ಕೆಐಒಸಿಎಲ್ ಚಟುವಟಿಕೆಗೆ ಈ ವಿದ್ಯುಚ್ಛಕ್ತಿಯನ್ನು ಬಳಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಡಾ. ಅರುಣಾ ಶರ್ಮ, ಸಚಿವಾಲಯದ ಅಧಿಕಾರಿಗಳಾದ ಟಿ. ಶ್ರೀನಿವಾಸ್, ಉರುವಿಲ್ಲಾ ಕತ್ತಿ, ಕೆಐಒಸಿಎಲ್ ಸಿಎಂಡಿ ಎಂ.ವಿ ಸುಬ್ಬರಾವ್ ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

ಕೆಐಒಸಿಎಲ್ ಮಿನಿ ರತ್ನದಿಂದ ರತ್ನವಾಗಿ ಮೇಲ್ದರ್ಜೆಗೆ

ಕಳೆದ ಸಾಲಿನಲ್ಲಿ ಕೆಐಒಸಿಎಲ್ 28 ಕೋಟಿ ರೂ. ಲಾಭ ಗಳಿಸಿದೆ. ಕೇಂದ್ರ ಸರ್ಕಾರದ ಮಿನಿ ರತ್ನವಾಗಿರುವ ಕೆಐಒಸಿಎಲ್‌ನ್ನು ಇನ್ನು ಒಂದೆರಡು ವರ್ಷದೊಳಗೆ ಕನಿಷ್ಠ 2500 ಕೋಟಿ ರೂ. ವಹಿವಾಟು ನಡೆಸುವ ‘ರತ್ನ’ವನ್ನಾಗಿ ಪರಿವರ್ತಿಸಲಾಗುವುದು ಎಂದು ಬಿರೇಂದರ್ ಸಿಂಗ್ ಹೇಳಿದರು.

ಅದಿರನ್ನು ಬ್ರೆಜಿಲ್ ಹಾಗೂ ಚತ್ತೀಸ್‌ಗಢದಿಂದ ತಂದು ಅದಿರು ಉಂಡೆಗಳನ್ನು ಮಾಡಿ ಚೀನಾ, ಜಪಾನ್, ದಕ್ಷಿಣ ಕೊರಿಯಾ, ವಿಯೆಟ್ನಾಂ, ಇರಾನ್‌ಗೆ 10.33 ಲಕ್ಷ ಟನ್ ರಫ್ತು ಮಾಡಲಾಗಿದೆ. 7.3 ಲ್ಷ ಟನ್ ಕಬ್ಬಿಣವನ್ನು ಆಂತರಿಕ ಬಳಕೆ ಮಾಡಲಾಗಿದೆ. ಮುಂದಿನ ದಿನಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಉಂಟೆ ತಯಾರಿ ಘಟವನ್ನು ಮೇಲ್ದರ್ಜೆಗೆ ಏರಿಸಲಾುವುದು. ಊದು ಕುಲುಮೆಯನ್ನು ಪುನರ್‌ ನಿರ್ಮಾಣ ಮಾಡಲಾಗುವುದು. ಸಧ್ಯಕ್ಕೆ ಕಾರ್ಯ ಸ್ಥಗಿತವಾಗಿರುವ ಮೃದು ಕಬ್ಬಿಣ ಉತ್ಪಾದನಾ ಘಟಕಕ್ಕೆ ಮತ್ತೆ ಚಾಲನೆ ನೀಡಲಾಗುವುದು ಎಂದು ಅವರು ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X