Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಕಾರ್ಡ್ ಕಡ್ಡಾಯದಿಂದ ನಕಲಿ...

ಆಧಾರ್ ಕಾರ್ಡ್ ಕಡ್ಡಾಯದಿಂದ ನಕಲಿ ಶಿಕ್ಷಕರು ಪತ್ತೆ

ಬಲೆಗೆ ಬಿದ್ದ 'ನಕಲಿ'ಗಳ ಸಂಖ್ಯೆಯೆಷ್ಟು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ6 Jan 2018 8:31 PM IST
share
ಆಧಾರ್ ಕಾರ್ಡ್ ಕಡ್ಡಾಯದಿಂದ ನಕಲಿ ಶಿಕ್ಷಕರು ಪತ್ತೆ

ಹೊಸದಿಲ್ಲಿ, ಜ.6: ಆಧಾರ್ ನಂಬರ್ ನೀಡುವುದನ್ನು ಕಡ್ಡಾಯಗೊಳಿಸಿರುವ ಕಾರಣ ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 80,000 ನಕಲಿ ಶಿಕ್ಷಕರನ್ನು ಪತ್ತೆಹಚ್ಚಲಾಗಿದೆ ಎಂದು ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. ‘ಅಖಿಲ ಭಾರತ ಉನ್ನತ ಶಿಕ್ಷಣ ಕ್ಷೇತ್ರದ ಸಮೀಕ್ಷೆ’ಯ ವರದಿಯಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.

ಕಾಲೇಜು ಮತ್ತು ವಿವಿಗಳಲ್ಲಿ ನಕಲಿ ಶಿಕ್ಷಣ ಪ್ರಮಾಣಪತ್ರ ಸಲ್ಲಿಸಿ ಶಿಕ್ಷಕ ಹುದ್ದೆ ಪಡೆದಿರುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ತಿಳಿಸಿರುವುದಾಗಿ ಸಚಿವರು ಹೇಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರಿಗೆ ಆಧಾರ್ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದ್ದು ಇದುವರೆಗೆ ಶೇ.85ರಷ್ಟು ಶಿಕ್ಷಕರು ಆಧಾರ್ ಸಂಖ್ಯೆ ನೀಡಿದ್ದಾರೆ. ಶೇ.100ರಷ್ಟು ಶಿಕ್ಷಕರು ಆಧಾರ್ ಸಂಖ್ಯೆ ನೀಡಿದಾಗ ಈ ಪ್ರಮಾಣ (ನಕಲಿ ಶಿಕ್ಷಕರ ಪ್ರಮಾಣ) ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೆಲವರು ಅನ್ಯವಿಧಾನಗಳನ್ನು ಬಳಸಿಕೊಂಡು ಪೂರ್ಣಕಾಲಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಆದರೆ ಕೇಂದ್ರೀಯ ವಿವಿಗಳಲ್ಲಿ ಇಂತಹ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ. ಕೆಲವು ರಾಜ್ಯಗಳ ವಿವಿಗಳಲ್ಲಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ನಕಲಿ ಶಿಕ್ಷಕರಿರುವುದು ಆಧಾರ್ ಕಡ್ಡಾಯಗೊಳಿಸಿದ ಕಾರಣ ಬೆಳಕಿಗೆ ಬಂದಿದೆ. ಇಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಜಾವಡೇಕರ್ ಹೇಳಿದ್ದಾರೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಂಡುಬಂದಿರುವ ಹೆಚ್ಚಳ, ಒಟ್ಟಾರೆ ನೋಂದಣಿ ಪ್ರಮಾಣ(ಜಿಇಆರ್)ದಲ್ಲಿ ಹೆಚ್ಚಳ, ಕಳೆದ ಐದು ವರ್ಷಗಳಲ್ಲಿ ವಿವಿ ಹಾಗೂ ಕಾಲೇಜುಗಳ ಸಂಖ್ಯೆಯಲ್ಲಿ ಆಗಿರುವ ಹೆಚ್ಚಳ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಕಲಿ ಶಿಕ್ಷಕರ ಪ್ರಮಾಣ ಹೆಚ್ಚಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜನಸಂಖ್ಯೆಯಲ್ಲಿ ಅರ್ಹ ವಯಸ್ಸಿನವರು ಉನ್ನತ ಶಿಕ್ಷಣ ಪಡೆಯುವ ಪ್ರಮಾಣವಾಗಿರುವ ಜಿಇಆರ್ , ಐದು ವರ್ಷದ ಹಿಂದೆ ಶೇ.21.5 ಆಗಿದ್ದರೆ ಈಗ ಶೇ.25.5 ಆಗಿರುತ್ತದೆ. 2012-13ರಲ್ಲಿ ಮುಸ್ಲಿಮ್ ಸಮುದಾಯದವರ ಜಿಇಆರ್ ಶೇ.4.15 ಆಗಿತ್ತು. 2016-17ರಲ್ಲಿ ಈ ಪ್ರಮಾಣ ಶೇ.4.90ರಷ್ಟಾಗಿದ್ದು ಹೆಚ್ಚೇನೂ ಬದಲಾವಣೆ ಆಗಿಲ್ಲ. ಇತರ ಹಿಂದುಳಿದ ವರ್ಗದವರ ಜಿಆರ್‌ವಿ ಪ್ರಮಾಣ ಇದೇ ಅವಧಿಯಲ್ಲಿ ಶೇ.0.33ರಷ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಎಲ್ಲಾ ಶಿಕ್ಷಣ ಸಂಸ್ಥೆಗಳ ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಒದಗಿಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸೂಚನೆ ರವಾನಿಸಿದೆ. ಆಧಾರ್ ಸಂಖ್ಯೆಯನ್ನು ನೀಡಿದರೆ ಯಾವುದೇ ಸಮಸ್ಯೆಯಾಗದು. ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇ-ಮೇಲ್ ಐಡಿ ನೀಡಿದ ರೀತಿಯಲ್ಲೇ ಆಧಾರ್ ಸಂಖ್ಯೆಯನ್ನೂ ನೀಡಬಹುದು. ಆಧಾರ್ ಕಾರ್ಡ್‌ನ ಮಾಹಿತಿಯನ್ನು ಗೌಪ್ಯವಾಗಿ ರಕ್ಷಿಸಿಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X