Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ: ಕಾಮಾಟಿಪುರ ಪ್ರದೇಶದ ನವೀಕರಣಕ್ಕೆ...

ಮುಂಬೈ: ಕಾಮಾಟಿಪುರ ಪ್ರದೇಶದ ನವೀಕರಣಕ್ಕೆ ಸರಕಾರದ ಒತ್ತು

ವಾರ್ತಾಭಾರತಿವಾರ್ತಾಭಾರತಿ6 Jan 2018 9:12 PM IST
share
ಮುಂಬೈ: ಕಾಮಾಟಿಪುರ ಪ್ರದೇಶದ ನವೀಕರಣಕ್ಕೆ ಸರಕಾರದ ಒತ್ತು

ಮುಂಬೈ,ಜ.6: ಮುಂಬೈನ ಕಾಮಾಟಿಪುರ ಪ್ರದೇಶದ ನವೀಕರಣಕ್ಕೆ ಮಹಾರಾಷ್ಟ್ರ ಸರಕಾರವು ಒತ್ತು ನೀಡುತ್ತಿದೆ. 39 ಎಕರೆ ವಿಸ್ತೀರ್ಣದ ಸ್ಥಳದಲ್ಲಿ ಹರಡಿಕೊಂಡಿರುವ ಈ ಕುಖ್ಯಾತ ಕೆಂಪುದೀಪದ ಪ್ರದೇಶದಲ್ಲಿನ ಹೆಚ್ಚಿನ ಕಟ್ಟಡಗಳು ನೂರು ವರ್ಷಗಳಿಗೂ ಹೆಚ್ಚು ಹಳೆಯದಾಗಿವೆ. ಸುಮಾರು 5,000 ಜನರು ವಾಸವಾಗಿರುವ 700 ಕಟ್ಟಡಗಳು ಮತ್ತು ಚಾಳ್‌ಗಳು ತೀರ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿಯೂ ಅವು ಕುಸಿದು ಬೀಳುವ ಅಪಾಯವನ್ನು ನಿವಾಸಿಗಳು ಎದುರಿಸುತ್ತಿದ್ದಾರೆ.

 ಕಟ್ಟಡಗಳು ಅತ್ಯಂತ ಹಳೆಯದಾಗಿದ್ದು, ಶಿಥಿಲಗೊಂಡಿವೆ. ಜನರು ಸಾಯಲು ಅವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ಅವುಗಳ ಪುನರ್‌ನಿರ್ಮಾಣಕ್ಕೆ ಬಿಲ್ಡರ್‌ಗಳನ್ನು ನೇಮಕಗೊಳಿಸುವ ಮೊದಲ ಹಕ್ಕನ್ನು ನಾವು ಅಲ್ಲಿಯ ನಿವಾಸಿಗಳಿಗೆ ಮತ್ತು ಕಟ್ಟಡ ಮಾಲಿಕರಿಗೆ ನೀಡುತ್ತಿದ್ದೇವೆ. ಇದಕ್ಕೆ ಅವರು ಮುಂದಾಗದಿದ್ದರೆ ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಎಂಎಚ್‌ಎಡಿಎ)ಕ್ಕೆ ಈ ಹೊಣೆಯನ್ನು ವಹಿಸುತ್ತೇವೆ ಎಂದು ರಾಜ್ಯದ ವಸತಿ ಸಚಿವ ರವೀಂದ್ರ ವಾಯಿಕರ್ ತಿಳಿಸಿದರು. ಕಾಮಾಟಿಪುರದ ಹೆಚ್ಚಿನ ನಿವಾಸಿಗಳು 50ರಿಂದ 180 ಚದರ ಅಡಿ ವಿಸ್ತೀರ್ಣದ ಮನೆಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ದಶಕಗಳಿಂದಲೂ ವೇಶ್ಯಾವಾಟಿಕೆ ಚಟುವಟಿಕೆ ಗಳಿಂದ ತುಂಬಿದ್ದ ಈ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೊಂಚ ಬದಲಾಗಿದೆ.

 ಆದರೆ ಸರಕಾರವು ಎಂಎಚ್‌ಎಡಿಎಯನ್ನು ಮಧ್ಯೆ ತರುವ ಬದಲು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಸ್ಥಳೀಯ ಕಾಂಗ್ರೆಸ್ ಶಾಸಕ ಅಮಿನ್ ಪಟೇಲ್ ಹೇಳಿದ್ದಾರೆ. ಇಷ್ಟೊಂದು ದೊಡ್ಡ ಪ್ರಮಾಣದ ಕಾಮಗಾರಿಯನ್ನು ನಿರ್ವಹಿಸಲು ಎಂಎಚ್‌ಎಡಿಎಗೆ ಸಾಧ್ಯವಿಲ್ಲ. ಇದರಿಂದ ಪುನರ್‌ನಿರ್ಮಾಣ ಕಾರ್ಯವು ವಿಳಂಬಗೊಂಡು ಜನರು ತಮ್ಮ ಹಳೆಯ ಕಟ್ಟಡಗಳಲ್ಲಿಯೇ ಉಳಿಯುವಂತಾಗುತ್ತದೆ ಎಂದಿದ್ದಾರೆ.

 ಪುನರ್‌ನಿರ್ಮಾಣ ಕಾಮಗಾರಿಯನ್ನು ನಡೆಸಲು ಬಿಲ್ಡರ್‌ಗಳನ್ನು ನೇಮಿಸಲು ನಾವು ಎಲ್ಲ ಪ್ರಯತ್ನಗಳನ್ನೂ ಮಾಡಿದ್ದೇವೆ. ಆದರೆ ರಿಯಾಲ್ಟಿ ಕ್ಷೇತ್ರದಲ್ಲಿಯ ಮಂದಗತಿ ಯಿಂದಾಗಿ ಕಾರ್ಯವನ್ನು ವಹಿಸಿಕೊಳ್ಳಲು ಅವರು ಹಿಂಜರಿಯುತ್ತಿದ್ದಾರೆ ಎಂದು ಕಾಮಾಟಿಪುರ ಕಟ್ಟಡ ಮಾಲಕರ ಸಂಘದ ಖಜಾಂಚಿ ಸಚಿನ್ ಕರ್ಪೆ ತಿಳಿಸಿದರು.

ಇಂತಹ ಅಪಾಯಕಾರಿ ಕಟ್ಟಡಗಳಲ್ಲಿ ಉಳಿದುಕೊಂಡು ಪುನರ್ ನಿರ್ಮಾಣಕ್ಕೆ ಕಾಯುತ್ತ ನಾವು ಬಸವಳಿದಿದ್ದೇವೆ. ಪುನರ್ ನಿರ್ಮಾಣವನ್ನು ಯಾರೇ ಮಾಡಲಿ,ಆ ಕಾರ್ಯವಾಗುವುದು ನಮಗೆ ಮುಖ್ಯವಾಗಿದೆ ಎಂದು ನಿವಾಸಿಗಳ ಸಂಘವೊಂದರ ಅಧ್ಯಕ್ಷ ಸುರೇಶ ಕಾಳೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X