ದ.ಕ. ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಸಾರಿಗೆ ಸಚಿವರ ಭೇಟಿ
ಮಂಗಳೂರು, ಜ. 6: ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕರ್ನಾಟಕ ಸರಕಾರದ ಸಾರಿಗೆ ಸಚಿವ ಶ್ರೀ ಎಚ್. ಎಂ. ರೇವಣ್ಣ ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡು ಕೋಮುವಾದಿ ಶಕ್ತಿಗಳು ಚುನಾವಣೆ ಸಂದರ್ಭದಲ್ಲಿ ಸಾಮರಸ್ಯ ಹಾಳು ಮಾಡಲು ಪ್ರಯತ್ನ ನಡೆಸುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕು ಎಂದು ಸಚಿವರು ಜನತೆಯಲ್ಲಿ ಮನ ಮಾಡಿದರಲ್ಲದೆ, ಸರಕಾರ ಯಾವುದೇ ಮತೀಯವಾದವನ್ನು ಸಹಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಉಪಾಧ್ಯಕ್ಷ ಅಬೂಬಕರ್ ಕುದ್ರೋಳಿ, ಭಾಸ್ಕರ್ ಮೊಲಿ, ಕಾರ್ಯದರ್ಶಿ ಚೇತನ್ ಬೆಂಗ್ರೆ, ನಝೀರ್ ಬಜಾಲ್, ನೀರಜ್ ಪಾಲ್, ಪ್ರೇಮ್ ಬಳ್ಳಾಲ್ಭಾಗ್, ಮುಹಮ್ಮದ್ ಬಪ್ಪಳಿಗ ಉಪಸ್ಥಿತರಿದ್ದರು.
ಸದಾಶಿವ ಉಳ್ಳಾಲ್ ಸ್ವಾಗತಿಸಿದರು. ಟಿ.ಕೆ ಸುಧೀರ್ ವಂದಿಸಿದರು.
Next Story





