Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 500 ರೂ.ಗೆ ಆಧಾರ್ ಮಾಹಿತಿ ಬಗ್ಗೆ ವರದಿ:...

500 ರೂ.ಗೆ ಆಧಾರ್ ಮಾಹಿತಿ ಬಗ್ಗೆ ವರದಿ: ಯುಐಡಿಎಐನಿಂದ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ7 Jan 2018 7:38 PM IST
share
500 ರೂ.ಗೆ ಆಧಾರ್ ಮಾಹಿತಿ ಬಗ್ಗೆ ವರದಿ: ಯುಐಡಿಎಐನಿಂದ ಪ್ರಕರಣ ದಾಖಲು

ಹೊಸದಿಲ್ಲಿ,ಜ.7: ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ದ ದತ್ತಾಂಶ ಕೋಶದಿಂದ ಆಧಾರ್ ಮಾಹಿತಿಗಳನ್ನು ಅಕ್ರಮವಾಗಿ ಪಡೆದುಕೊಳ್ಳಬಹುದು ಎನ್ನುವುದನ್ನು ಬಯಲಿಗೆಳೆದಿದ್ದ ಟ್ರಿಬ್ಯೂನ್ ವರದಿಗಾರನ ವಿರುದ್ಧ ಪೊಲೀಸ್ ಪ್ರಕರಣವೊಂದು ದಾಖಲಾಗಿದೆ. ಯುಐಡಿಎಐ ದಾಖಲಿಸಿರುವ ದೂರಿನಲ್ಲಿ ವರದಿಗಾರನಿಂದ ಹಣವನ್ನು ಪಡೆದುಕೊಂಡು ದತ್ತಾಂಶ ಕೋಶಕ್ಕೆ ಕನ್ನ ಹಾಕಲು ನೆರವಾಗಿದ್ದ ವ್ಯಕ್ತಿಗಳನ್ನೂ ಹೆಸರಿಸಲಾಗಿದೆ.

500 ರೂ.ಗಳಲ್ಲಿ ಆಧಾರ್ ದತ್ತಾಂಶ ಕೋಶಕ್ಕೆ ಕನ್ನ ಹಾಕಲು ಅಗತ್ಯ ಲಾಗಿನ್ ಸಂಕೇತಗಳ ಕೊಡುಗೆ ತನಗೆ ಬಂದಿದ್ದು, ತನ್ನ ವರದಿಗಾರ ಹಣವನ್ನು ತೆತ್ತು ದತ್ತಾಂಶ ಕೋಶಕ್ಕೆ ಲಾಗಿನ್ ಆಗಲು ಅಗತ್ಯ ವಿವರಗಳನ್ನು ಪಡೆದುಕೊಂಡಿದ್ದ. ಈ ಲಾಗಿನ್ ಡಿಟೇಲ್‌ಗಳನ್ನು ಬಳಸಿ ವ್ಯಕ್ತಿಯೋರ್ವನ ಆಧಾರ್ ಮಾಹಿತಿಗಳನ್ನು ನೋಡಲು ಆತನಿಗೆ ಸಾಧ್ಯವಾಗಿತ್ತು ಎಂದು ಟ್ರಿಬ್ಯೂನ್ ತನ್ನ ವರದಿಯಲ್ಲಿ ತಿಳಿಸಿತ್ತು.

ಪೊಲೀಸ್ ಪ್ರಕರಣ ದಾಖಲಾಗಿರುವುದನ್ನು ಟ್ರಿಬ್ಯೂನ್ ರವಿವಾರ ದೃಢಪಡಿಸಿದೆ.

ದತ್ತಾಂಶ ಕೋಶಕ್ಕೆ ಅನಧಿಕೃತ ಪ್ರವೇಶ ಕ್ರಿಮಿನಲ್ ಅಪರಾಧವಾಗಿರುವುದರಿಂದ ಯುಐಡಿಎಐ ಪ್ರಕರಣವನ್ನು ದಾಖಲಿಸಿದೆ ಎಂದು ಮೂಲವು ತಿಳಿಸಿದೆ.

ಯಾವುದೇ ವ್ಯಕ್ತಿಯ ಬೆರಳಚ್ಚುಗಳು ಮತ್ತು ಅಕ್ಷಿಪಟಲದ ಸ್ಕಾನ್ ವೀಕ್ಷಿಸಲು ಸಾಧ್ಯವಾಗಿತ್ತೇ ಮತ್ತು ಎಷ್ಟು ಜನರ ವಿವರಗಳನ್ನು ನೋಡಲಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸುವಂತೆಯೂ ಯುಐಡಿಎಐ ಶನಿವಾರ ಟ್ರಿಬ್ಯೂನ್‌ಗೆ ಬರೆದಿರುವ ಪತ್ರದಲ್ಲಿ ವರದಿಗಾರನಿಗೆ ಸೂಚಿಸಿದೆ.

ಆಧಾರ್ ದತ್ತಾಂಶ ಕೋಶದ ಉಲ್ಲಂಘನೆಯಾಗಿದೆ ಎನ್ನುವುದನ್ನು ಯುಐಡಿಎಐ ಈಗಾಗಲೇ ನಿರಾಕರಿಸಿದೆಯಾದರೂ, ದೂರುಗಳನ್ನು ಬಗೆಹರಿಸಲು ಪ್ರಜೆಗಳ ಆಧಾರ ಮಾಹಿತಿಗಳನ್ನು ತಲುಪಲು ನಿಯೋಜಿತ ಆಧಿಕಾರಿಗಳಿಗೆ ಒದಗಿಸಿರುವ ಸೌಲಭ್ಯಗಳ ದುರುಪಯೋಗವಾಗಿದೆ ಎನ್ನುವುದನ್ನು ಒಪ್ಪಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X