Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಷಾರಾಮಿ ರೈಲುಗಳಲ್ಲಿ ಉಚಿತ ಪಾಸ್:...

ಐಷಾರಾಮಿ ರೈಲುಗಳಲ್ಲಿ ಉಚಿತ ಪಾಸ್: ರೈಲ್ವೆಗೆ ಸಂಸದೀಯ ಸಮಿತಿಯ ತರಾಟೆ

ವಾರ್ತಾಭಾರತಿವಾರ್ತಾಭಾರತಿ7 Jan 2018 7:47 PM IST
share
ಐಷಾರಾಮಿ ರೈಲುಗಳಲ್ಲಿ ಉಚಿತ ಪಾಸ್: ರೈಲ್ವೆಗೆ ಸಂಸದೀಯ ಸಮಿತಿಯ ತರಾಟೆ

 ಹೊಸದಿಲ್ಲಿ,ಜ.7: ಐಷಾರಾಮಿ ರೈಲುಗಳು ತಮ್ಮ ಸಾಮರ್ಥ್ಯದ ಕೇವಲ ಶೇ.30ರಷ್ಟು ಪ್ರಯಾಣಿಕರೊಂದಿಗೆ ಸಂಚರಿಸುತ್ತಿದ್ದರೂ ಅವುಗಳಲ್ಲಿ ಪ್ರಯಾಣಕ್ಕಾಗಿ ಉಚಿತ ಪಾಸ್‌ಗಳನ್ನು ನೀಡುತ್ತಿರುವುದಕ್ಕಾಗಿ ರೈಲ್ವೆ ಇಲಾಖೆಯನ್ನು ಸಂಸದೀಯ ಸಮಿತಿಯೊಂದು ತೀವ್ರ ತರಾಟೆಗೆತ್ತಿಕೊಂಡಿದೆ.

 ಐದು ಐಷಾರಾಮಿ ರೈಲುಗಳಾದ ಮಹಾರಾಜಾ ಎಕ್ಸ್‌ಪ್ರೆಸ್, ಗೋಲ್ಡನ್ ಚಾರಿಯಟ್, ರಾಯಲ್ ರಾಜಸ್ಥಾನ ಆನ್ ವೀಲ್ಸ್, ಡೆಕ್ಕನ್ ಒಡೆಸ್ಸಿ ಮತ್ತು ಪ್ಯಾಲೇಸ್ ಆನ್ ವೀಲ್ಸ್‌ಗಳಲ್ಲಿ ರೈಲ್ವೆ ಮಂಡಳಿ ಮತ್ತು ಐಆರ್‌ಸಿಟಿಸಿಯ ಶಿಫಾರಸುಗಳ ಮೇಲೆ ಉಚಿತವಾಗಿ ಪ್ರಯಾಣಿಸಿರುವ ನೂರಾರು ಪ್ರಯಾಣಿಕರ ಹೆಸರುಗಳನ್ನು ಸಮಿತಿಯು ತನ್ನ ಇತ್ತೀಚಿನ ವರದಿಯಲ್ಲಿ ಪಟ್ಟಿ ಮಾಡಿದೆ. ಈ ಪಟ್ಟಿಯಲ್ಲಿ ಓರ್ವ ಮಾಜಿ ಆಪ್ತ ಕಾರ್ಯದರ್ಶಿ, ರೈಲ್ವೆ ಸಚಿವರ ಮಾಜಿ ವಿಶೇಷ ಕರ್ತವ್ಯಾಧಿಕಾರಿ ಮತ್ತು ಇತರ ರೈಲ್ವೆ ವಲಯಗಳ ವಿವಿಧ ವಿಭಾಗೀಯ ಪ್ರಬಂಧಕರು ಸೇರಿದ್ದಾರೆ.

ರೈಲ್ವೆ ಮತ್ತು ಐಆರ್‌ಸಿಟಿಸಿ ರಾಜ್ಯ ಪ್ರವಾಸೋದ್ಯಮ ನಿಗಮಗಳ ಸಹಭಾಗಿತ್ವದಲ್ಲಿ ಈ ಐಷಾರಾಮಿ ರೈಲುಗಳನ್ನು ಓಡಿಸುತ್ತಿವೆ. ಈ ರೈಲುಗಳಲ್ಲಿ ಪ್ರಯಾಣಕ್ಕಾಗಿ 500 ಡಾ.ಗಳಿಂದ 650 ಡಾ.ವರೆಗೆ(ಪ್ರಸಕ್ತ ವಿನಿಮಯ ದರದಂತೆ 31,637.50 ರೂ.ನಿಂದ 41,128.75 ರೂ.ವರೆಗೆ) ದರಗಳನ್ನು ವಿಧಿಸಲಾಗುತ್ತಿದೆ.

ರೈಲ್ವೆ ಮಂಡಳಿ ಅಥವಾ ಐಆರ್‌ಸಿಟಿಸಿ ಅಥವಾ ರಾಜ್ಯ ಪ್ರವಾಸೋದ್ಯಮ ನಿಗಮಗಳ ಶಿಫಾರಸಿನ ಮೇರೆಗೆ ಈ ಐಷಾರಾಮಿ ರೈಲುಗಳಲ್ಲಿ ಪ್ರಯಾಣಕ್ಕೆ ಉಚಿತ ಪಾಸ್‌ಗಳ ನೀಡಿಕೆ ಮುಂದುವರಿಸಿರುವುದು ದಿಗಿಲು ಮೂಡಿಸಿದೆ ಎಂದು ಸಮಿತಿಯ ಅಧ್ಯಕ್ಷರಾಗಿರುವ ಸಂಸದ ಸುದೀಪ ಬಂದೋಪಾಧ್ಯಾಯ ಅವರು ಹೇಳಿದರು.

ಈ ಐಷಾರಾಮಿ ರೈಲುಗಳ ಆದಾಯ ಅವುಗಳ ಕಾರ್ಯನಿರ್ವಹಣೆಗೇ ಸಾಲುತ್ತಿಲ್ಲ. ಹೀಗಿರುವಾಗಿ ಉಚಿತ ಪಾಸುಗಳ ನೀಡಿಕೆಯ ಅಗತ್ಯ ಸಮಿತಿಗೆ ಅರ್ಥವಾಗುತ್ತಿಲ್ಲ ಎಂದು ವರದಿಯು ಕಿಡಿಕಾರಿದೆ.

ಸಾರ್ವಜನಿಕ ಸಂಸ್ಥೆಯಾಗಿ ಮುಂಗಡ ಪತ್ರದಿಂದ ಆರ್ಥಿಕ ನೆರವು ಪಡೆಯುತ್ತಿರುವ ರೈಲ್ವೆಗೆ ಈ ಐಷಾರಾಮಿ ರೈಲುಗಳಲ್ಲಿ ಪ್ರಯಾಣಕ್ಕಾಗಿ ಕೆಲವು ಜನರಿಗೆ ಉಚಿತ ಪಾಸ್‌ಗಳನ್ನು ನೀಡಿ ತೆರಿಗೆದಾರರ ಹಣವನ್ನು ದುರುಪಯೋಗಿಸಿಕೊಳ್ಳುವ ಹಕ್ಕು ಇಲ್ಲ ಎಂದು ಸಮಿತಿಯು ಝಾಡಿಸಿದೆ.

ಉಚಿತ ಪಾಸ್‌ಗಳನ್ನು ನೀಡಲು ಕಾರಣಗಳನ್ನು ತಿಳಿಯಲು ಬಯಸಿರುವ ಸಮಿತಿಯು, ಈ ಪದ್ಧತಿಯನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿದೆ. ಈ ನಿಟ್ಟಿನಲ್ಲಿ ತೆಗೆದುಕೊಳ್ಳಲಾ ಗಿರುವ ಕ್ರಮಗಳನ್ನು ತನಗೆ ತಿಳಿಸುವಂತೆ ಅದು ನಿರ್ದೇಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X