Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಿ:...

​ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಿ: ರಾಮೇಗೌಡ

ವಾರ್ತಾಭಾರತಿವಾರ್ತಾಭಾರತಿ7 Jan 2018 8:26 PM IST
share

ಬೆಂಗಳೂರು, ಜ.7: ಪ್ರತಿಯೊಬ್ಬ ಕನ್ನಡಿಗರೂ ದಿನ ಬೆಳಗಾದರೆ ಕಡ್ಡಾಯವಾಗಿ ಕನ್ನಡ ದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಕವಿ ಬೈರಮಂಗಲ ರಾಮೇಗೌಡ ಸಲಹೆ ನೀಡಿದ್ದಾರೆ.

ರವಿವಾರ ನಗರದ ಕಸಾಪದಲ್ಲಿ ಆಯೋಜಿಸಿದ್ದ ಕನ್ನಡಿಗರ ಸ್ನೇಹಕೂಟ ಸಂಸ್ಥೆಯ 12 ನೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ದೇಶದ ಬೇರೆ ಬೇರೆ ಪ್ರದೇಶಗಳಿಂದ ವಲಸೆ ಬಂದ ಜನರೇ ಹೆಚ್ಚಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಕನ್ನಡತನವನ್ನು ಬೆಳೆಸಬೇಕಾದರೆ ಪತ್ರಿಕೋದ್ಯಮ ಬಹಳಷ್ಟು ನೆರವು ನೀಡಿದೆ. ಹೀಗಾಗಿ, ಪ್ರತಿಯೊಬ್ಬರೂ ಕನ್ನಡ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಲೇಖಕ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಕನ್ನಡದ ಹೆಸರಿನಲ್ಲಿ ಸಂಘಗಳು ಆರಂಭವಾದರೆ, ಅದರೊಳಗೆ ನಾಯಿ, ನರಿಗಳು ಸೇರಿಕೊಂಡು, ಸಂಘ ಕಟ್ಟಿದವರನ್ನೇ ಬೀದಿಗೆಳೆದು ಅವಮಾನ ಮಾಡುವಂತಹ ಸಮಾಜದಲ್ಲಿ ನಾವು ಜೀವಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ವೃತ್ತಿ ಜೀವನದಲ್ಲಿ ನಡೆದ ಘಟನೆಗಳನ್ನು ಮುಂದಿನ ಪೀಳಿಗೆಗೆ ಅರ್ಥವಾಗುವ ರೀತಿಯಲ್ಲಿ ಹಾಗೂ ಸಾಮಾಜಿಕ ನ್ಯಾಯ, ಬದ್ಧತೆ, ಹಿರಿಯರಿಗೆ ಗೌರವ ನೀಡುವ ಕುರಿತ ರಾಂ.ಕೆ.ಹನುಮಂತಯ್ಯರ ಬರಹಗಳು ಅತ್ಯಂತ ಸ್ವಾರಸ್ಯಕರವಾಗಿದೆ. ಪ್ರತಿಯೊಂದು ಲೇಖನವೂ ಒಂದೊಂದು ನೀತಿಯನ್ನು ಹೇಳಿಕೊಟ್ಟಿದೆ. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಶ್ರಮ ವಹಿಸಬೇಕು ಎಂದ ಅವರು, ಇತ್ತೀಚಿನ ದಿನಗಳಲ್ಲಿನ ಜನರಿಗೆ ಏನು ಓದಬೇಕು, ಯಾವುದನ್ನು ಸ್ವೀಕರಿಸಬೇಕು ಎಂಬ ಕನಿಷ್ಟ ಪರಿಜ್ಞಾನವಿಲ್ಲ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ರಾಂ.ಕೆ.ಹನುಮಂತಯ್ಯ ಮಾತನಾಡಿ, ಬೆಂಗಳೂರು ದಂಡು ಪ್ರದೇಶದಲ್ಲಿ ಸಂಘ ಆರಂಭಿಸಿದ ಸಂದರ್ಭದಲ್ಲಿ ಸರಿಯಾಗಿ ಕನ್ನಡ ಪತ್ರಿಕೆಗಳು ಸಿಗುತ್ತಿರಲಿಲ್ಲ. ಅಲ್ಲದೆ, ಯಾರಿಗೂ ಕನ್ನಡದ ಬಗ್ಗೆ ಕನಿಷ್ಟ ಆಸಕ್ತಿಯಿರಲಿಲ್ಲ. ಹೀಗಾಗಿ, ಮಕ್ಕಳ ಮನಸ್ಸಿನಲ್ಲಿ ಕನ್ನಡ ತುಂಬುವ ಕೆಲಸ ಆರಂಭ ಮಾಡಿದೆ. ಅದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X