Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಶೀರ್ ಮೇಲೆ ದುಷ್ಕರ್ಮಿಗಳ ದಾಳಿ ಪ್ರಕರಣ:...

ಬಶೀರ್ ಮೇಲೆ ದುಷ್ಕರ್ಮಿಗಳ ದಾಳಿ ಪ್ರಕರಣ: ಪಬ್ಲಿಕ್ ಟಿವಿ ಹೇಳಿದ್ದೇನು?, ನಿಜವಾಗಿ ನಡೆದದ್ದೇನು?

ಸತ್ಯದ ತಲೆಗೆ ಹೊಡೆದ ಟಿವಿ ಚಾನಲ್ ವಿರುದ್ಧ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 Jan 2018 9:11 PM IST
share
ಬಶೀರ್ ಮೇಲೆ ದುಷ್ಕರ್ಮಿಗಳ ದಾಳಿ ಪ್ರಕರಣ: ಪಬ್ಲಿಕ್ ಟಿವಿ ಹೇಳಿದ್ದೇನು?, ನಿಜವಾಗಿ ನಡೆದದ್ದೇನು?

ಮಂಗಳೂರು, ಜ.7: ಕೊಟ್ಟಾರಚೌಕಿಯಲ್ಲಿ ದುಷ್ಕರ್ಮಿಗಳ ದಾಳಿಗೊಳಗಾದ ಬಶೀರ್ ಅವರು ಇಂದು ಮೃತಪಟ್ಟಿದ್ದು, ಅವರ ಅಂತ್ಯಸಂಸ್ಕಾರ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನಡೆದಿದೆ.

ಬಶೀರ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸುತ್ತಿದ್ದಂತೆ ನೂರಾರು ಜನರು ಎಜೆ ಆಸ್ಪತ್ರೆಯ ಬಳಿ ಜಮಾಯಿಸಿದ್ದಾರೆ. ಈ ಸಂದರ್ಭ ಬಶೀರ್ ನಿಧನದ ಬಗ್ಗೆ ವರದಿ ಮಾಡಲು ಪತ್ರಕರ್ತರೂ ಆಗಮಿಸಿದ್ದಾರೆ. ಆದರೆ ಸ್ಥಳಕ್ಕೆ ಹೋಗಿದ್ದ ಖಾಸಗಿ ಚಾನೆಲ್ ‘ಪಬ್ಲಿಕ್ ಟಿವಿ’ಯ ವರದಿಗಾರನಿಗೆ ಛೀಮಾರಿ ಹಾಕಿದ ಜನರು ‘ಪಬ್ಲಿಕ್ ಟಿವಿಗೆ ಧಿಕ್ಕಾರ’ ಎಂದು ಘೋಷಣೆಗಳನ್ನು ಕೂಗಿ ವರದಿಗಾರರನ್ನು ಹಿಂದಕ್ಕೆ ಕಳುಹಿಸಿದ್ದರು.

ಜನರ ಆಕ್ರೋಶಕ್ಕೆ ಕಾರಣ  ಬಶೀರ್ ನಿಧನದ ಬಗ್ಗೆ ಪಬ್ಲಿಕ್ ಟಿವಿ ನೀಡಿದ ವರದಿ . ದುಷ್ಕರ್ಮಿಗಳಿಂದ ಬರ್ಬರ  ದಾಳಿಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಬಶೀರ್ ಮೃತಪಟ್ಟ ಸುದ್ದಿಯನ್ನು ಪಬ್ಲಿಕ್ ಟಿವಿ ಸುಳ್ಳು ಹಾಗು ಮಸಾಲೆ ಸೇರಿಸಿ  ವರದಿ ಮಾಡಿತ್ತು. 

ಆ ವರದಿಯಲ್ಲಿ ಪಬ್ಲಿಕ್ ಟಿವಿ ನಿರೂಪಕ ಹೇಳಿದ್ದು: 

“ಡೆಡ್ಲಿ ಅಟ್ಯಾಕ್ ನಲ್ಲಿ ಗಂಟಲು ಮತ್ತು ಎದೆಯ ಭಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದರು. ಬಶೀರ್ ರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 4 ದಿನಗಳ ಜೀವನ್ಮರಣದ ಹೋರಾಟದ ಬಳಿಕ ಕೊನೆಗೂ ಬದುಕುಳಿಯಲಿಲ್ಲ ಬಶೀರ್. ಕಾಟಿಪಳ್ಳದಲ್ಲಿ ದೀಪಕ್ ರಾವ್ ಕೊಲೆಯಾದಂತಹ ಸಂದರ್ಭದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಈ ಸಂದರ್ಭದಲ್ಲಿ ಎರಡೂ ಕೋಮಿನವರು ಕೂಡ ತಲವಾರುಗಳಿಂದ ಪರಸ್ಪರ ದಾಳಿ ಮಾಡಿದ್ದರು. ದಾಳಿಯ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಶೀರ್ ಎದೆ ಮತ್ತು ಗಂಟಲಿಗೆ ತೀವ್ರ ಗಾಯಗಳಾಗಿತ್ತು. ಅದೇ ದಿನ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇಂದು ಮೃತಪಟ್ಟಿದ್ದಾರೆ. ದೀಪಕ್ ರಾವ್ ಕೊಲೆ ನಡೆದ ಸಂದರ್ಭ ಎರಡೂ ಕೋಮಿನ ಹುಡುಗರು ಪರಸ್ಪರ ಹೊಡೆದಾಡಿಕೊಂಡಿದ್ದರು. ಲಾಂಗ್ ತಲವಾರುಗಳಲ್ಲಿ ಅಟ್ಯಾಕ್ ಮಾಡಲಾಗಿತ್ತು. ಈ ಅಟ್ಯಾಕ್ ನಲ್ಲಿ ಗಾಯಗೊಂಡಿದ್ದ ಬಶೀರ್ ಇಂದು ಮೃತಪಟ್ಟಿದ್ದಾರೆ…………” ಹೀಗೆ ಸಾಗುತ್ತದೆ ಪಬ್ಲಿಕ್ ಟಿವಿ ಆ್ಯಂಕರ್ ನ ಸ್ಪೆಷಲ್ ನ್ಯೂಸ್.

ಕಾಟಿಪಳ್ಳದಲ್ಲಿ ಜನವರಿ ಮೂರರಂದು ಮಧ್ಯಾಹ್ನ ದೀಪಕ್ ರಾವ್ ಮೇಲೆ ದುಷ್ಕರ್ಮಿಗಳು ಭೀಕರ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು. ಅದೇ ದಿನ ರಾತ್ರಿ ರಾತ್ರಿ ಮಂಗಳೂರಿನ ಕೊಟ್ಟಾರಚೌಕಿಯಲ್ಲಿ ಬಶೀರ್ ಅವರ ಮೇಲೆ ದಾಳಿ ನಡೆದಿತ್ತು. ಆದರೆ ಕಾಟಿಪಳ್ಳದಲ್ಲಿ ದೀಪಕ್ ರಾವ್ ಮೇಲೆ ದಾಳಿ ನಡೆದಾಗಲೂ, ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲೂ ಎರಡು ಸಮುದಾಯಗಳ ಜನರ ನಡುವೆ ಯಾವುದೇ ಘರ್ಷಣೆ, ತಲವಾರು ಕಾಳಗ ಎಲ್ಲಿಯೂ ನಡೆದೇ ಇರಲಿಲ್ಲ. ತಮ್ಮ ಮೇಲೆ ದಾಳಿ ನಡೆಯುವಾಗ ದೀಪಕ್ ಹಾಗು ಬಷೀರ್ ಇಬ್ಬರ ಕೈಯಲ್ಲೂ ಯಾವುದೇ ಆಯುಧಗಳಿರಲಿಲ್ಲ. ಅವರು ಅಂದು ಯಾವುದೇ ಘರ್ಷಣೆಯಲ್ಲಿ ಭಾಗವಹಿಸಿರಲಿಲ್ಲ. ಬಶೀರ್ ತಮ್ಮ ಫಾಸ್ಟ್ ಫುಡ್ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುವಾಗ ಅವರ ಮೇಲೆ ಏಕಾಏಕಿ ದಾಳಿ ನಡೆದಿತ್ತು. ಈ ಬಗ್ಗೆ ಮಂಗಳೂರಿನ ಪೊಲೀಸ್ ಕಮಿಷನರ್ ಕೂಡ ಹೇಳಿಕೆ ನೀಡಿದ್ದಾರೆ. 

ಆದರೆ ಬಶೀರ್ ನಿಧನದ ಸುದ್ದಿಯನ್ನು ಬಿತ್ತರಿಸುವಾಗ ಪಬ್ಲಿಕ್ ಟಿವಿ ಇದಾವುದನ್ನೂ ನೋಡದೆ , ತನಗೆ ಬೇಕಾದಂತೆ ಸುದ್ದಿಯನ್ನು ತಿರುಚಿ, ಸುಳ್ಳನ್ನು ಸೇರಿಸಿ , ಮಸಾಲೆ ಬೆರೆಸಿ ' ಸುದ್ದಿ ' ಪ್ರಸಾರ ಮಾಡಿದೆ. ಇದು ಜನರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಬ್ಲಿಕ್ ಟಿವಿಯ ಈ ಸುಳ್ಳು ವರದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಎದುರಾಗಿದೆ. ಸೂಕ್ಷ್ಮ ಪರಿಸ್ಥಿತಿ ಇರುವಾಗ ಜವಾಬ್ದಾರಿಯುತ ವರದಿಗಾರಿಕೆ ಮಾಡುವುದು ಬಿಟ್ಟು ಸುಳ್ಳು ಸುದ್ದಿ ನೀಡಿ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುವುದು ಎಷ್ಟು ಸರಿ ? ಈ ಬಗ್ಗೆ ಯಾಕೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವುದಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ.    

ಬಶೀರ್ ನಿಧನದ ಬಗ್ಗೆ ಪಬ್ಲಿಕ್ ಟಿವಿ ನಿರೂಪಕನ ಮಸಾಲೆಭರಿತ ಸುದ್ದಿಯ ಆಡಿಯೋ ಈ ಕೆಳಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X