Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ ನಗರಸಭೆ ಆಯುಕ್ತರ ಶಿವಮೊಗ್ಗದ...

ಸಾಗರ ನಗರಸಭೆ ಆಯುಕ್ತರ ಶಿವಮೊಗ್ಗದ ಮನೆಯಲ್ಲಿ ಕಳ್ಳರ ಕೈಚಳಕ : ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ಕಳವು

ವಾರ್ತಾಭಾರತಿವಾರ್ತಾಭಾರತಿ8 Jan 2018 6:49 PM IST
share
ಸಾಗರ ನಗರಸಭೆ ಆಯುಕ್ತರ ಶಿವಮೊಗ್ಗದ ಮನೆಯಲ್ಲಿ ಕಳ್ಳರ ಕೈಚಳಕ : ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ಕಳವು

ಶಿವಮೊಗ್ಗ, ಜ. 8: ನಗರಸಭೆ ಆಯುಕ್ತರ ಮನೆಯಲ್ಲಿ ಕಳ್ಳರ ತಂಡವೊಂದು ತನ್ನ ಕೈಚಳಕ ತೋರಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ಅಪಹರಿಸಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಜಿಲ್ಲೆಯ ಸಾಗರ ನಗರಸಭೆಯಲ್ಲಿ ಆಯುಕ್ತರಾಗಿರುವ ರಾಜುರವರಿಗೆ ಸೇರಿದ ವಿನೋಬನಗರದ ಆಟೋ ಕಾಂಪ್ಲೆಕ್ಸ್ ಬಳಿಯಿರುವ ಸಿದ್ದೇಶ್ವರ ನಿಲಯದಲ್ಲಿ ಈ ಕೃತ್ಯ ನಡೆದಿದೆ. ಈ ಕುರಿತಂತೆ ಜ. 7 ರಂದು ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಘಟನಾ ಸ್ಥಳಕ್ಕೆ ಡಿವೈಎಸ್‍ಪಿ ಸುದರ್ಶನ್, ಇನ್ಸ್‍ಪೆಕ್ಟರ್ ಹರೀಶ್ ಪಾಟೀಲ್, ಸಬ್ ಇನ್ಸ್‍ಪೆಕ್ಟರ್ ರಾಘವೇಂದ್ರ ಕಾಂಡಿಕೆಯವರು ಭೇಟಿಯಿತ್ತು ಪರಿಶೀಲಿಸಿದ್ದಾರೆ. ಬೆರಳಚ್ಚು ತಜ್ಞರ ತಂಡ ಮಾಹಿತಿ ಕಲೆ ಹಾಕಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. 

ಘಟನೆ ಹಿನ್ನೆಲೆ: ಕರ್ತವ್ಯದ ನಿಮಿತ್ತ ಜ. 1 ರಂದು ರಾಜುರವರು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಸಾಗರಕ್ಕೆ ತೆರಳಿದ್ದರು. ಜ. 5 ರಂದು ಅವರ ಮನೆಯಲ್ಲಿ ಬಾಡಿಗೆಗಿರುವ ಸುಂದರೇಶ್ ಎಂಬುವರು ರಾಜುರವರಿಗೆ ಕರೆ ಮಾಡಿ, ಮನೆಯಲ್ಲಿ ಕಳ್ಳತನ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ರಾಜುರವರು ಶಿವಮೊಗ್ಗದ ಮನೆಗೆ ಆಗಮಿಸಿದ್ದಾರೆ. 

ಪರಿಶೀಲಿಸಿದಾಗ ಮನೆಯ ಮುಂಬದಿಯ ಕಬ್ಬಿಣ ಹಾಗೂ ಮರದ ಬಾಗಿಲುಗಳನ್ನು ಆಯುಧವೊಂದರಿಂದ ಮುರಿದು ಕಳ್ಳರು ಒಳ ಪ್ರವೇಶಿಸಿದ್ದು ಬೆಳಕಿಗೆ ಬಂದಿದೆ. ಹಾಲ್‍ನಲ್ಲಿದ್ದ 20 ಸಾವಿರ ರೂ. ಮೌಲ್ಯದ ಎಲ್‍ಇಡಿ ಟಿ.ವಿ. - ಆ್ಯಂಪ್ಲಿಪ್ಲೇಯರ್, 12 ಸಾವಿರದ ಬಂಗಾರದ ಓಲೆ, 2800 ರೂ. ಮೌಲ್ಯದ ಬೆಳ್ಳಿಯ ಕುಂಕುಮದ ಬಟ್ಟಲು, 3000 ರೂ. ಮೌಲ್ಯದ ದೇವರ ಮುಖ, 2600 ರೂ. ಮೌಲ್ಯದ ಒಂದು ಜೊತೆ ಬೆಳ್ಳಿ ದೀಪ, ಅಲ್ಮೇರಾದಲ್ಲಿದ್ದ 13,000 ರೂ. ಮೌಲ್ಯದ ಎರಡು ಬಂಗಾರದ ಉಂಗುರ, 5600 ರೂ. ಮೌಲ್ಯದ ಬಂಗಾರದ ಡಾಲರ್, 5000 ರೂ. ಮೌಲ್ಯದ ಮುತ್ತಿನ ಕಿವಿ ಜಾಲರಿ, 8000 ರೂ. ಮೌಲ್ಯದ ಬೆಳ್ಳಿಯ ಕಾಲು ಚೈನು, 

ಮೂರು ಜೊತೆ ಬೆಳ್ಳಿಯ ಕಾಲುಂಗರದ ಜೊತೆಗೆ 1.20 ಲಕ್ಷ ನಗದನ್ನು ಕಳ್ಳರು ಅಪಹರಿಸಿರುವುದು ಕಂಡುಬಂದಿದೆ. ಕಳವು ಮಾಡಲಾಗಿರುವ ನಗನಾಣ್ಯದ ಒಟ್ಟಾರೆ ಮೌಲ್ಯ 1,93,800 ರೂ.ಗಳೆಂದು ಅಂದಾಜಿಸಲಾಗಿದೆ. ಕರ್ತವ್ಯದ ಒತ್ತಡದ ಕಾರಣದಿಂದ ರಾಜುರವರು ತಡವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X