Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮುದ್ರದ ಮೂಲಕ ಹಜ್ ಯಾತ್ರಿಗಳ ರವಾನೆ:...

ಸಮುದ್ರದ ಮೂಲಕ ಹಜ್ ಯಾತ್ರಿಗಳ ರವಾನೆ: ಭಾರತದ ಯೋಜನೆಯನ್ನು ಪುರಸ್ಕರಿಸಿದ ಸೌದಿ

ವಾರ್ತಾಭಾರತಿವಾರ್ತಾಭಾರತಿ8 Jan 2018 9:03 PM IST
share
ಸಮುದ್ರದ ಮೂಲಕ ಹಜ್ ಯಾತ್ರಿಗಳ ರವಾನೆ: ಭಾರತದ ಯೋಜನೆಯನ್ನು ಪುರಸ್ಕರಿಸಿದ ಸೌದಿ

ಹೊಸದಿಲ್ಲಿ, ಜ.8: ಹಜ್ ಯಾತ್ರಿಕರನ್ನು ಸಮುದ್ರದ ಮೂಲಕ ಜಿದ್ದಾಗೆ ಸಾಗಿಸುವ ಭಾರತದ ಯೋಜನೆಯನ್ನು ಸೌದಿ ಅರೇಬಿಯವು ಪುರಸ್ಕರಿಸಿದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಸೋಮವಾರ ತಿಳಿಸಿದ್ದಾರೆ. ಮಕ್ಕಾದಲ್ಲಿ ಭಾರತ ಮತ್ತು ಸೌದಿ ಅರೇಬಿಯದ ಮಧ್ಯೆ ವಾರ್ಷಿಕ ಹಜ್ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ನಖ್ವಿ, ಈ ಹೇಳಿಕೆಯನ್ನು ನೀಡಿದ್ದಾರೆ. “ಸೌದಿ ಅರೇಬಿಯವು ಹಜ್ ಯಾತ್ರಿಕರನ್ನು ಸಮುದ್ರ ಹಾದಿಯ ಮೂಲಕ ಸಾಗಿಸುವ ಯೋಜನೆಗೆ ಅನುಮತಿ ನೀಡಿದ್ದು, ಎರಡೂ ದೇಶಗಳ ಅಧಿಕಾರಿಗಳು ಈ ಬಗ್ಗೆ ತಾಂತ್ರಿಕ ಮತ್ತು ಆಡಳಿತಾತ್ಮಕವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಹಾಗಾಗಿ ಮುಂದಿನ ವರ್ಷಗಳಲ್ಲಿ ಸಮುದ್ರ ಹಾದಿಯ ಮೂಲಕ ಹಜ್ ಯಾತ್ರಿಗಳ ಪ್ರಯಾಣ ಆರಂಭವಾಗಲಿದೆ” ಎಂದು ನಖ್ವಿ ತಿಳಿಸಿದ್ದಾರೆ.

ಹಡಗುಗಳ ಮೂಲಕ ಯಾತ್ರಿಗಳನ್ನು ಕಳುಹಿಸುವುದರಿಂದ ಪ್ರಯಾಣದ ವೆಚ್ಚದಲ್ಲಿ ಗಣನೀಯ ಇಳಿಕೆಯಾಗಲಿದೆ. ಹಾಗಾಗಿ ಈ ಕ್ರಮವು ಕ್ರಾಂತಿಕಾರಿ, ಬಡವರ ಪರ ಮತ್ತು ಯಾತ್ರಿಸ್ನೇಹಿಯಾಗಿದೆ ಎಂದವರು ಇದೇ ವೇಳೆ ವಿವರಿಸಿದರು. ಈ ಹಿಂದೆಯೂ ಮುಂಬೈ ಮತ್ತು ಜಿದ್ದಾದ ಮಧ್ಯೆ ಹಜ್ ಯಾತ್ರಿಗಳನ್ನು ಜಲಹಾದಿಯ ಮೂಲಕ ಸಾಗಿಸುವ ವ್ಯವಸ್ಥೆಯಿತ್ತು. ಆದರೆ ಅದನ್ನು 1995ರಲ್ಲಿ ಸ್ಥಗಿತಗೊಳಿಸಲಾಗಿತ್ತು.

ಇದೇ ಮೊದಲ ಬಾರಿ ಮಹಿಳೆಯರು ‘ಮೆಹರಮ್‌’ (ಪುರುಷ ಜೊತೆಗಾರ) ಇಲ್ಲದೆ ಹಜ್‌ಗೆ ತೆರಳುತ್ತಿದ್ದಾರೆ. ಸೌದಿ ಅರೇಬಿಯದಲ್ಲಿ ಅವರಿಗೆ ತಂಗಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಮತ್ತು ಅವರ ಸಹಾಯಕ್ಕಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

1,300ಕ್ಕೂ ಅಧಿಕ ಮಹಿಳೆಯರು ಮೆಹರಮ್ ಇಲ್ಲದೆ ಹಜ್‌ಗೆ ಪ್ರಯಾಣಿಸಲು ಅರ್ಜಿ ಹಾಕಿದ್ದಾರೆ. ಅವರೆಲ್ಲರನ್ನೂ ಲಾಟರಿ ವ್ಯವಸ್ಥೆಯಿಂದ ಹೊರಗಿಡಲಾಗುವುದು ಮತ್ತು ಹಜ್‌ಗೆ ತೆರಳಲು ಅನುಮತಿ ನೀಡಲಾಗುವುದು ಎಂದು ನಖ್ವಿ ತಿಳಿಸಿದ್ದಾರೆ.

ಭಾರತದ ಹೊಸ ಹಜ್ ನಿಯಮದಂತೆ 45 ವರ್ಷಕ್ಕಿಂತ ಮೇಲ್ಪಟ್ಟ, ಪುರುಷ ಜೊತೆಗಾರರಿಲ್ಲದ ಮಹಿಳೆಯರು ನಾಲ್ಕು ಅಥವಾ ಅಧಿಕ ಮಂದಿಯ ಗುಂಪಿನ ಜೊತೆ ಹಜ್‌ಗೆ ತೆರಳಲು ಅನುಮತಿ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X