Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ: ಮಲೆನಾಡು...

ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ: ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ8 Jan 2018 9:54 PM IST
share
ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ: ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಧರಣಿ

ಪುತ್ತೂರು, ಜ. 8: ಜಿಲ್ಲೆಯ ರೈತರು ಮತ್ತು ಜನಸಾಮಾನ್ಯರ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಪ್ರತಿ ತಿಂಗಳ ಪ್ರಥಮ ಸೋಮವಾರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, 2 ನೇ ಧರಣಿ ಸತ್ಯಾಗ್ರಹವು ಸೋಮವಾರ ಪುತ್ತೂರು ಮಿನಿವಿಧಾನ ಸೌಧದ ಮುಂಭಾಗಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಮಲೆನಾಡು ಭಾಗದ ಜನಸಾಮಾನ್ಯರ ಹಾಗೂ ರೈತರ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ನ್ಯಾಯ ಸಿಗುವವರೆಗೂ ತಿಂಗಳ ಮೊದಲ ಸೋಮವಾರದಂದು ಧರಣಿ ಸತ್ಯಾಗ್ರಹ ನಡೆಸುತ್ತಿದ್ದೇವೆ. ರಾಜ್ಯ ಹಾಗೂ ಕೇಂದ್ರ ಸರಕಾರ ಮಲೆನಾಡು ಭಾಗದ ಜನರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸಹಾಯಕ ಕಮಿಷನರ್ ಅವರು ಕೃಷಿಕರನ್ನು ಸಮಾಲೋಚನೆಗೆ ಕರೆಯಬೇಕು ಎಂದು ಆಗ್ರಹಿಸಿದರು.

ಧರಣಿ ನಿರತರ ಪ್ರಮುಖ ಬೇಡಿಕೆಗಳು

ಒತ್ತುವರಿ ನೆಪದಲ್ಲಿ ರೈತರ ಕೃಷಿ ಭೂಮಿ ತೆರವಿಗೆ ಸರಕಾರ ನೊಟೀಸ್ ಕೊಟ್ಟು ಮಾನಸಿಕ ಹಿಂಸೆ ಕೊಡುವುದನ್ನು ತತ್‌ಕ್ಷಣ ನಿಲ್ಲಿಸಬೇಕು, ಪರಿಸರ ಸಂರಕ್ಷಣೆ ನೆಪದಲ್ಲಿ ರೈತರ ಕೃಷಿ ಭೂಮಿಯನ್ನು ಅರಣ್ಯಕ್ಕೆ ಸೇರ್ಪಡೆ ಮಾಡುವ ಯೋಜನೆಯನ್ನು ರದ್ದು ಮಾಡಬೇಕು, ಹತ್ತಾರು ವರ್ಷಗಳಿಂದ ವಾಸ್ತವ್ಯ ಹೂಡಿರುವ ಮನೆಯ ಅಡಿ ಸ್ಥಳಕ್ಕೆ ನಿವೇಶನ ಹಕ್ಕು ಪತ್ರ ಕೊಡಬೇಕು. ನಿವೇಶನ ಇಲ್ಲದ ಕುಟುಂಬಕ್ಕೆ ನಿವೇಶನಕ್ಕೆ ಸರಕಾರಿ ಸ್ಥಳದಲ್ಲಿ ಜಾಗ ನೀಡಬೇಕು, ಪ್ಲಾಟಿಂಗ್ ಆಗದ ಜಾಗವನ್ನು ಕಂದಾಯ ಇಲಾಖೆಯೇ ಅತೀ ಶೀಘ್ರದಲ್ಲಿ ಉಚಿತವಾಗಿ ಪ್ಲಾಟಿಂಗ್ ಮಾಡಿಕೊಡಬೇಕು, ಸಾಲ ಮನ್ನಾದ ಪೂರ್ತಿ ಸವಲತ್ತು ಪ್ರತಿಯೊಬ್ಬ ರೈತರಿಗೂ ಸಿಗುವಂತ್ತಾಗಬೇಕು, ರಬ್ಬರು ನಿಗಮದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರಕಾರ ನೀಡಿರುವಂತಹ ವಸತಿಯನ್ನು ಅವರಿಗೆ ಬಿಟ್ಟುಕೊಡಬೇಕು. ಅಥವಾ ಬದಲಿ ವ್ಯವಸ್ಥೆ ಮಾಡಬೇಕು, ಉದ್ಯೋಗ ಖಾತ್ರಿ, ತೋಟಗಾರಿಕೆ, ಕೃಷಿ ಇಲಾಖೆ, ಸಂಬಂಧಪಟ್ಟ ರೈತನಿಗೆ ಸಿಗುವ ಸವಲತ್ತು ಆತ ಕೆಲಸ ಮಾಡಿದ ತತ್‌ಕ್ಷಣ ಸಿಗಬೇಕು, ಇಲಾಖೆಗಳಲ್ಲಿನ ಸಂಪೂರ್ಣ ಭ್ರಷ್ಟಾಚಾರ ನಿಲ್ಲುವವರೆಗೂ ಧರಣಿ, 94ಸಿಯ ಹಕ್ಕು ಪತ್ರ ನೀಡುವುದರಲ್ಲಿ ವಿಳಂಬ ಮುಕ್ತ ಮಂಜೂರು ಆದ ಹಕ್ಕು ಪತ್ರಗಳಿಗೆ ಪಹಣಿ ಪತ್ರ ನೀಡುವುದು ಮತ್ತು ಮದ್ಯವರ್ತಿಗಳ ಹಾವಳಿಗಳಿಂದ ವಿಳಂಬ ಆಗುತ್ತಿರುವುದರ ವಿರುದ್ಧ, ರೈತರಿಗೆ ಸಿಗುವ ಸವಲತ್ತುಗಳ ಮಾಹಿತಿಗಳು ಗ್ರಾಮ ಪಂಚಾಯತ್‌ನಲ್ಲಿ ಸಿಗುವಂತ್ತಾಗಬೇಕು. ಕೃಷಿಗೆ ಸಂಬಂಂಧಪಟ್ಟ ಎಲ್ಲಾ ಇಲಾಖೆಯ ಅರ್ಜಿಗಳು, ಸವಲತ್ತುಗಳು ಗ್ರಾ.ಪಂ. ಮೂಲಕ ಕೊಡುವಂತಾಗಬೇಕು ಎಂಬುದು ಧರಣಿ ನಿರತರ ಪ್ರಮುಖ ಬೇಡಿಕೆಯಾಗಿದೆ.

ಧರಣಿಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮುಖಂಡರಾದ ಗುಣವತಿ ಕೊಲ್ಲಂತಡ್ಕ, ಮೋಹನ್ ಪಿಳ್ಳೆ ಅಡ್ಡಹೊಳೆ, ವಿ.ಟಿ. ಜಾಯ್ಸೆ, ಸತೀಶ್ ಕಲ್ಮಕಾರು, ಚಿದಾನಂದ ಕೊಲ್ಲಮೊಗ್ರು, ದಿನೇಶ್ ಕರ್ಮಲ ಮತ್ತಿತರರು ಉಪಸ್ಥಿತರಿದ್ದರು. ಬೆಳಗ್ಗಿನಿಂದ ಸಂಜೆ ತನಕ ಧರಣಿ ನಡೆಸಿದ ವೇದಿಕೆ ಕಾರ್ಯ ಕರ್ತರು ವಿವಿಧ ಬೇಡಿಕೆಗಳ ಮನವಿಯನ್ನು ಸಹಾಯಕ ಕಮಿಷನರ್‌ಗೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X