Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌಹಾರ್ದ ಸಂದೇಶ ಸಾರುವ ಅಕ್ಷರೊತ್ಸವಗಳು...

ಸೌಹಾರ್ದ ಸಂದೇಶ ಸಾರುವ ಅಕ್ಷರೊತ್ಸವಗಳು ನಿರಂತರವಾಗಿ ನಡೆಯಲಿ: ಶಾಸಕ ಅಭಯಚಂದ್ರ ಜೈನ್

ವಾರ್ತಾಭಾರತಿವಾರ್ತಾಭಾರತಿ8 Jan 2018 10:16 PM IST
share

ಮೂಡುಬಿದಿರೆ, ಜ.8: ಜಿಲ್ಲೆಯಲ್ಲಿ ಎರಡೂವರೆ ದಶಕಗಳಿಂದ ಸಾಕ್ಷರತಾ ಅಭಿಯಾನದಡಿ ಅಕ್ಷರ ಅರಿವು, ಅಭಿವೃದ್ಧಿಯೊಂದಿಗೆ ಎಲ್ಲ ವರ್ಗವನ್ನು ಸಂಘಟಿಸುವ ಮತ್ತು ಎಲ್ಲರ ಸಬಲೀಕರಣಕ್ಕೆ ಪೂರಕವಾಗಿ ನಡೆಯುತ್ತಿರುವ ಸೌಹಾರ್ದದ ಸಂದೇಶ ಸಾರುವ ವಾರ್ಷಿಕ ಅಕ್ಷರೋತ್ಸವಗಳು ನಿರಂತರವಾಗಿ ನಡೆಯಲಿ ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು.

ನೆಲ್ಲಿಕಾರು ಗ್ರಾಪಂ ವ್ಯಾಪ್ತಿಯ ಬೋರುಗುಡ್ಡೆ ಅಂಗನವಾಡಿ ವಠಾರದಲ್ಲಿ ಸುಗ್ರಾಮ ಸಂಘ, ಜಾಗೃತಿ ವೇದಿಕೆ, ಗ್ರಾಮ ವಿಕಾಸ ಕೇಂದ್ರ, ಗ್ರಾಪಂ, ಜನ ಶಿಕ್ಷಣ ಟ್ರಸ್ಟ್‌ನ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಡೆದ ಅಕ್ಷರೋತ್ಸವವನ್ನು ಸೋಲಾರ್ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತಾನಾಡಿದರು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ನುಡಿದಂತೆ ಅನಕ್ಷರತೆ ಒಂದು ಶಾಪ. ಅದನ್ನು ತೊಡೆದು ಹಾಕುವುದು ನಮ್ಮೆಲ್ಲರ ಕರ್ತವ್ಯ ಆಗಬೇಕು. ಸಾಕ್ಷರತೆಯಿಂದಾಗಿ ಜಿಲ್ಲೆಯ ಕಟ್ಟಕಡೆಯ ಜನರು ಅಕ್ಷರದ ಅರಿವು ಮತ್ತು ಮೌನ ಮುರಿದು ಮಾತಾನಾಡುವ ಶಕ್ತಿ ಪಡೆದು ಸರಕಾರಿ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳನ್ನು ತಾವೇ ಮಾಡಿಕೊಳ್ಳುವ ಹಂತಕ್ಕೆ ತಲುಪಿರುವುದು ಶ್ಲಾಘನೀಯ ವಿಷಯ ಎಂದು ಅಭಯಚಂದ್ರ ಜೈನ್ ನುಡಿದರು

ಬೋರುಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಐ-ಪ್ಯಾಡ್ ಅಳವಡಿಸಲು ವೈಯಕ್ತಿಕ 10,000 ರೂ. ದೇಣಿಗೆಯನ್ನು ಅಂಗನವಾಡಿ ಕಾರ್ಯಕರ್ತೆ ಗುಣವತಿ, ಜಾಗೃತಿ ವೇದಿಕೆಯ ಕಮಲ ಅವರಿಗೆ ಹಸ್ತಾಂತರಿಸಿದರು. ನೆಲ್ಲಿಕಾರು ಗ್ರಾಪಂ ವ್ಯಾಪ್ತಿಯ 6 ಅಂಗನವಾಡಿಗಳಿಗೆ ಐ-ಪ್ಯಾಡ್ ಅಳವಡಿಸುವ ಯೋಜನೆಗೆ ಗ್ರಾಪಂ ವತಿಯಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ಗ್ರಾಪಂ ಅಧ್ಯಕ್ಷ ಜಯಂತ್ ತಿಳಿಸಿದರು. ಗ್ರಾಪಂ ಉಪಾಧ್ಯಕ್ಷ ಕುಶಲ, ತಾಪಂ ಸದಸ್ಯೆ ರೇಖಾ ಸಾಲ್ಯಾನ್, ಸದಸ್ಯರಾದ ಭಾರತೀ, ಸುನಂದ, ಶಶಿಧರ್, ಉದಯ ಕುಮಾರ್, ಜಿಲ್ಲಾ ನೆರವು ಘಟಕದ ಸಂಯೋಜಕಿ ಮಂಜುಳಾ, ಮಹಿಳಾ ಪೊಲೀಸ್ ಜ್ಯೋತಿ, ಪಿಡಿಒ ಪ್ರಶಾಂತ್ ಶೆಟ್ಟಿ, ಶಿಕ್ಷಣ ಸಂಯೋಜಕ ದಿನೇಶ್, ವಾಲ್ಪಾಡಿ ಗ್ರಾಪಂ ಸದಸ್ಯೆ ಸುಶೀಲಾ ಬೋರುಗುಡ್ಡೆ, ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಸಬಲೀಕರಣದ ಯಶೋಗಾಥೆ ಬಗ್ಗೆ ನಿರೂಪಿಸಿದರು. ಕಮಲ, ಸುನೀತಾ, ಗುಣವತಿ, ಚಂಚಲಾ ಕಾರ್ಯಕ್ರಮ ಸಂಯೋಜಿಸಿದ್ದರು. ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X