Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾನತೆ ಬರಿ ಮಾತಾಗಬಾರದು: ವಿದ್ಯಾಶಂಕರ್

ಸಮಾನತೆ ಬರಿ ಮಾತಾಗಬಾರದು: ವಿದ್ಯಾಶಂಕರ್

ವಾರ್ತಾಭಾರತಿವಾರ್ತಾಭಾರತಿ9 Jan 2018 8:14 PM IST
share
ಸಮಾನತೆ ಬರಿ ಮಾತಾಗಬಾರದು: ವಿದ್ಯಾಶಂಕರ್

ಬೆಂಗಳೂರು, ಜ.9: ಸಂವಿಧಾನದಲ್ಲಿ ಸಮಾನತೆ ಕಲ್ಪನೆ, ವ್ಯಕ್ತಿಗತ ಹಕ್ಕುಗಳ ಬಗ್ಗೆ ಮಾತನಾಡುವ ನಾವು ಕಾರ್ಯಗತಗೊಳಿಸುವುದರಲ್ಲಿ ಸೋತಿದ್ದೇವೆ ಎಂದು ಚಲನಚಿತ್ರ ತಜ್ಞ ವಿದ್ಯಾಶಂಕರ್ ಅಭಿಪ್ರಾಯಪಟ್ಟರು.

ಮಂಗಳವಾರ ಕರ್ನಾಟಕ ಚಲನಚಿತ್ರ ಅಕಾಡೆಮಿ ಮತ್ತು ಸಮಾಜ ಕಲ್ಯಾಣ ಇಲಾಖೆ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಆಯೋಜಿಸಿದ್ದ, ಎಸ್ಸಿ-ಎಸ್ಟಿ ಯುವಕ, ಯುವತಿಯರಿಗೆ ಚಲನಚಿತ್ರ ಮತ್ತು ಸಾಕ್ಷಚಿತ್ರ ನಿರ್ಮಾಣದ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿ ಸಾಮಾಜಿಕ ವಿಭಜನೆಗಳಿಂದ ವಸಾಹತುಶಾಹಿ ಕಾಲಕ್ಕೆ ಮರಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಬೇರೆಯವರು ಆಕ್ರಮಣ ಮಾಡುವ ಮಟ್ಟಕ್ಕೆ ಸೋತಿದ್ದೇವೆ. ನಮ್ಮಲ್ಲಿರುವ ಎಲ್ಲ ಸಂಪತ್ತು, ಮಾನವ ಕೌಶಲಗಳಲ್ಲಿ ಸಮಾನತೆ ಸಾಧಿಸದಿದ್ದಲ್ಲಿ ಸಮಾನತೆ ಕಲ್ಪನೆ ಮಾತಾಗಿಯೆ ಉಳಿಯುತ್ತದೆ ಎಂದರು.
ಮುದ್ರಣ ಮಾಧ್ಯಮದ ನಂತರ ಬಂದ ಚಲನಚಿತ್ರ ಹಾಗೂ ದೃಶ್ಯ ಮಾಧ್ಯಮ ಆಧುನಿಕ ತಂತ್ರಜ್ಞಾನದ ಜಗತ್ತನ್ನು ಆಳುತ್ತಿವೆ. ಕಳೆದ 25 ವರ್ಷಗಳ ಅಂತರದಲ್ಲಿ ಬಂದ ಮೊಬೈಲ್, ಇಂಟರ್‌ನೆಟ್, ಸಾಮಾಜಿಕ ಜಾಲತಾಣಗಳೆಂಬ ಹೊಸಮಾಧ್ಯಮ ಸೃಷ್ಟಿಸುತ್ತಿರುವ ಹೊಸ ಜಗತ್ತು ಎಷ್ಟು ಪರಿಣಾಮಕಾರಿಯಾಗಿದೆ ಎಂಬುದನ್ನು ಗಮನಿಸಬೇಕಿದೆ ಎಂದು ನುಡಿದರು.

ಮಾಹಿತಿ ತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನ, ಸಿನಿಮಾ ತಂತ್ರಜ್ಞಾನಗಳಲ್ಲಿ ಸಮಾನತೆಯ ಕಲ್ಪನೆ ಅಗತ್ಯವಿದೆ. ಅಸಮಾನತೆ ನಿವಾರಿಸುವ ನಿಟ್ಟಿನಲ್ಲಿ ತರಬೇತಿ ಕೌಶಲದ ಶಿಬಿರಗಳು ಪ್ರಾಮುಖ್ಯತೆ ವಹಿಸುತ್ತವೆ ಎಂದ ಅವರು, ಹಿಂದುಳಿದ ಜನಾಂಗದವರು ಆಧುನಿಕ ತಂತ್ರಜ್ಞಾನವನ್ನು ಕಲಿಯಬೇಕಿದೆ. ಕೌಶಲವನ್ನು ಸಮಾನವಾಗಿ ಹಂಚದಿದ್ದರೆ ಸಮಾನತೆಯ ಕಲ್ಪನೆಗೆ ಅರ್ಥವಿರುವುದಿಲ್ಲ ಎಂದು ಹೇಳಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು ಮಾತನಾಡಿ, ಹಿಂದುಳಿದ ವರ್ಗಗಳ ಮತ್ತು ಸಾಮಾಜಿಕ ನ್ಯಾಯ ಬದ್ಧತೆ ಪ್ರದರ್ಶಿಸುವ ನಿಟ್ಟಿನಲ್ಲಿ ಪ್ರತ್ಯೇಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಸಿನಿಮಾ ಆಸಕ್ತಿ ಇರುವ ಎಸ್ಸಿ-ಎಸ್ಟಿ ಸಮುದಾಯದವರಿಗೆ ಅಗತ್ಯ ಮಾರ್ಗದರ್ಶನ ಕೊರತೆಯಿಂದ ಸಿನಿಮಾ ಕಲಿಕೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಭೆಯನ್ನು ನಟನೆಗಷ್ಟೇ ಕೇಂದ್ರೀಕರಿಸಿಕೊಳ್ಳದೆ ಚಲನಚಿತ್ರ ತಯಾರಿಕೆಯ 22 ವಿಭಾಗಗಳಲ್ಲಿ ಸೃಜನಾತ್ಮಕವಾಗಿ ತೊಡಗಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಸಲಹೆ ಮಾಡಿದರು.

ಲೇಖಕ ರಾಜಪ್ಪ ದಳವಾಯಿ ಮಾತನಾಡಿ, ಸಂಪನ್ಮೂಲ ಕ್ರೋಡೀಕರಿಸಿಕೊಂಡಿರುವ ಉನ್ನತ ಸಮುದಾಯ ಜಾತೀಯತೆ ಮಾಡುತ್ತಿವೆ. ಪ್ರತಿಭೆ ಗುರುತಿಸಿ ಅವಕಾಶ ಕೊಡುವವರ ಸಂಖ್ಯೆ ತುಂಬಾ ವಿರಳ ಎಂದ ಅವರು, ಸಿನಿಮಾ ಇದೆ ಆದರೆ ಸಿನಿಮಾ ಶಿಕ್ಷಣವಿಲ್ಲ. ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯಗಾರ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಸರಕಾರ ಆಯೋಜಿಸಿರುವ ಕಾರ್ಯಾಗಾರವನ್ನು ಸಮರ್ಥವಾಗಿ ಬಳಸಿಕೊಂಡು ಸಿನಿಮಾ ಕ್ಷೇತ್ರದಲ್ಲಿ ಜಾತಿ ಮೀರಿ ಅವಕಾಶ ಕೊಡುವಂತಾಗಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷಣರೆಡ್ಡಿ, ಕವಯಿತ್ರಿ ಸುಕನ್ಯಾ ಮಾರುತಿ ಸೇರಿ ಪ್ರಮುಖರಿದ್ದರು.

‘ಬಹಳಷ್ಟು ಕ್ಷೇತ್ರಗಳಲ್ಲಿ ಕೆಳ ಸಮುದಾಯದವರಿಗೆ ಇಂದಿಗೂ ಪ್ರವೇಶ ಸಿಗುತ್ತಿಲ್ಲ. ಜಾತಿ ಸಾಮಾಜಿಕ ಶಾಪವಾಗಿ ಕಾಡುತ್ತಿದೆ. ಸಮಾಜದಲ್ಲಿ ಎಲ್ಲರನ್ನು ಸಮಾನವಾಗಿ ಕಾಣುವ ಪರಿಪಾಠ ಮೂಡಬೇಕಿದೆ ’
-ರಾಜಪ್ಪ ದಳವಾಯಿ, ಲೇಖಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X