Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯ್ ಶಾ ಕುರಿತ ‘ದಿ ವೈರ್’ ವರದಿ...

ಜಯ್ ಶಾ ಕುರಿತ ‘ದಿ ವೈರ್’ ವರದಿ ಮಾನಹಾನಿಕರ: ಗುಜರಾತ್ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 Jan 2018 10:06 PM IST
share
ಜಯ್ ಶಾ ಕುರಿತ ‘ದಿ ವೈರ್’ ವರದಿ ಮಾನಹಾನಿಕರ: ಗುಜರಾತ್ ಹೈಕೋರ್ಟ್

ಹೊಸದಿಲ್ಲಿ, ಜ. 9: ನರೇಂದ್ರ ಮೋದಿ ಪ್ರಧಾನಿಯಾಗಿ ಒಂದು ವರ್ಷದ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಅವರ ಮಾಲಕತ್ವದ ಕಂಪೆನಿಯ ಆದಾಯದಲ್ಲಿ ತೀವ್ರ ಹೆಚ್ಚಳವಾಗಿರುವ ಬಗ್ಗೆ ದಿ ವೈರ್ ವರದಿ ಪ್ರಕಟಿಸಿರುವುದು ಮಾನಹಾನಿಕರ ಎಂದು ಗುಜರಾತ್ ಉಚ್ಚ ನ್ಯಾಯಾಲಯ ಸೋಮವಾರ ಹೇಳಿದೆ. ತನ್ನ ವಿರುದ್ಧ ಜಯ್ ಶಾ ದಾಖಲಿಸಿದ ಅರ್ಜಿ ತಳ್ಳಿ ಹಾಕುವಂತೆ ಕೋರಿ ‘ದಿ ವೈರ್’ ಸಲ್ಲಿಸಿದ ಮನವಿ ತಿರಸ್ಕರಿಸಿರುವ ನ್ಯಾಯಾಲಯ, ವರದಿ ಮಾಡಿದ ಪತ್ರಕರ್ತೆ ಕ್ರಿಮಿನಲ್ ಮಾನಹಾನಿಕರ ವಿಚಾರಣೆ ಎದುರಿಸಬೇಕಾಗಬಹುದು ಎಂದು ಹೇಳಿದೆ.

 ನರೇಂದ್ರ ಮೋದಿ ಪ್ರಧಾನಿ ಆಗಿರುವುದು ಹಾಗೂ ಕಂಪೆನಿಯ ಆರ್ಥಿಕ ವ್ಯವಹಾರದಲ್ಲಿ ಏರಿಕೆಯಾಗಿರುವುದನ್ನು ಜೋಡಿಸಿರುವುದು ಈ ವರದಿಯ ಕಳವಳಕಾರಿ ಭಾಗ ಎಂದು ನ್ಯಾಯಾಲಯ ತಿಳಿಸಿದೆ.

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಹಾಗೂ ಅಮಿತ್ ಶಾ ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ಜಯ್ ಶಾ ಅವರ ಕಂಪೆನಿಯ ವಹಿವಾಟು 16,000 ಪಟ್ಟು ಏರಿಕೆಯಾಗಿದೆ ಎಂಬ ಪ್ರತಿಪಾದನೆ ವರದಿಯ ಕಳವಳಕಾರಿ ಭಾಗ ಎಂದು ನ್ಯಾಯಮೂರ್ತಿ ಜೆ.ಬಿ. ಪರ್ಡಿವಾಲ ಅವರು ಹೇಳಿದ್ದಾರೆ.

   ಸಾಮಾನ್ಯ ಕಂಪೆನಿಯೊಂದು ತೀರಾ ಕಡಿಮೆ 50,000 ರೂಪಾಯಿ ಆದಾಯದಿಂದ ಒಂದೇ ವರ್ಷದಲ್ಲಿ 80 ಸಾವಿರ ಕೋಟಿ ರೂ. ಆದಾಯಕ್ಕೆ ಏರಿರುವುದು ಜಯ್ ಶಾ ಅವರ ತಂದೆಯ ರಾಜಕೀಯ ಸ್ಥಾನಮಾನವೇ ಕಾರಣ ಎಂದು ‘ದಿ ವೈರ್’ ವರದಿ ಸೂಚಿಸಿತ್ತು.

ಭಾರತದಂತಹ ದೇಶದಲ್ಲಿ ಜನತೆ ಪಿರ್ಯಾದಿದಾರನು ರಾಜಕೀಯ ಸಂಪರ್ಕದ ಕಾರಣದಿಂದಲೇ ವ್ಯವಹಾರದಲ್ಲಿ ಪ್ರಗತಿ ಸಾಧಿಸಿದ್ದಾನೆ ಎಂದು ಯೋಜಿಸತೊಡಗುತ್ತಾರೆ ಎಂದು ಪರ್ಡಿವಾಲ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X