Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಪಿಎಲ್ ಕುಟುಂಬಗಳಿಗೆ ಕುರಿ, ಮೇಕೆ,...

ಬಿಪಿಎಲ್ ಕುಟುಂಬಗಳಿಗೆ ಕುರಿ, ಮೇಕೆ, ಕೋಳಿ ಒದಗಿಸಲು ಚಿಂತನೆ: ಎ.ಮಂಜು

ವಾರ್ತಾಭಾರತಿವಾರ್ತಾಭಾರತಿ9 Jan 2018 10:14 PM IST
share
ಬಿಪಿಎಲ್ ಕುಟುಂಬಗಳಿಗೆ ಕುರಿ, ಮೇಕೆ, ಕೋಳಿ ಒದಗಿಸಲು ಚಿಂತನೆ: ಎ.ಮಂಜು

ಬೆಂಗಳೂರು, ಜ.9: ಪಶುಭಾಗ್ಯ ಯೋಜನೆಯಡಿ ಹಲವರಿಗೆ ಕುರಿ, ಮೇಕೆಗಳನ್ನು ಒದಗಿಸಲಾಗುತ್ತಿದೆ. ಇದರ ಉಪಯೋಗವನ್ನು ಬಿಪಿಎಲ್ ಕುಟುಂಬಗಳಿಗೂ ವಿಸ್ತರಿಸಲು ರಾಜ್ಯ ಸರಕಾರ ಉದ್ದೇಶಿಸಿದೆ ಎಂದು ಪಶುಸಂಗೋಪನಾ ಸಚಿವ ಎ.ಮಂಜು ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕುಟುಂಬಗಳಿಗೆ ಕುರಿ, ಮೇಕೆ, ಕೋಳಿ ಒದಗಿಸಲು ಸರಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಇಳಿಮುಖವಾಗಿರುವ ಮಾಂಸದ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಕುರಿ, ಮೇಕೆ, ಕೋಳಿಗಳನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದರು.

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಆಸಕ್ತ ಕುಟುಂಬಗಳಿಗೆ ಕುರಿ, ಮೇಕೆ ಹಾಗೂ ಕೋಳಿ ಸಾಕಲು ಒದಗಿಸುವ ಸಂಬಂಧ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಎ.ಮಂಜು ಹೇಳಿದರು.

ವ್ಯಕ್ತಿಯೋರ್ವ ವರ್ಷಕ್ಕೆ ಸರಾಸರಿ 11 ಕೆ.ಜಿ.ಯಷ್ಟು ಮಾಂಸ ಸೇವಿಸುತ್ತಾನೆ. ಆದರೆ, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಮಾಂಸದ ಪ್ರಮಾಣವು ತಲಾ 3 ಕೆ.ಜಿ.ಯಷ್ಟು ಮಾತ್ರವಿದೆ. ಮನುಷ್ಯನ ಬೇಡಿಕೆಯ ಪ್ರಮಾಣಕ್ಕಿಂತಲೂ ತಲಾ 8 ಕೆ.ಜಿ.ಯಷ್ಟು ಮಾಂಸದ ಕೊರತೆಯಿದೆ. ಹೀಗಾಗಿ, ಬೇರೆ ರಾಜ್ಯಗಳಿಂದ ಕುರಿ, ಮೇಕೆ, ಕೋಳಿಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ವಿವರಿಸಿದರು.

ಬಿಪಿಎಲ್ ಕುಟುಂಬಗಳಿಗೆ ತಲಾ ಎರಡು ಕುರಿ, ಮೇಕೆ ಮತ್ತು ಹಲವು ಕೋಳಿಗಳನ್ನು ಒದಗಿಸಿದರೆ ಅವುಗಳ ಪಾಲನೆಯಿಂದ ವಾರ್ಷಿಕವಾಗಿ 35 ರಿಂದ 40 ಸಾವಿರ ರೂ.ಗಳಷ್ಟು ಆದಾಯವನ್ನುಗಳಿಸಲು ಸಾಧ್ಯವಿದೆ ಎಂದು ಮಂಜು ಹೇಳಿದರು.

ರಾಜ್ಯದಲ್ಲಿ ಪಶು ಆಹಾರದ ಬೆಲೆಯನ್ನು ಪ್ರತಿ ಟನ್‌ಗೆ 2 ಸಾವಿರ ರೂ.ಗಳಷ್ಟು ಕಡಿಮೆ ಮಾಡಲು ಆದೇಶಿಸಲಾಗಿದೆ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಕೆಎಂಎಫ್ ತಯಾರಿಸುತ್ತಿರುವ ಹಾಲಿನ ಪುಡಿಯು ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿದ್ದು, ಫೆಬ್ರವರಿ ವೇಳೆಗೆ ದಾಸ್ತಾನಿರುವ ಎಲ್ಲ ಪುಡಿಯು ಮಾರಾಟವಾಗುತ್ತದೆ ಎಂದು ಅವರು ತಿಳಿಸಿದರು.

ಸದ್ಯಕ್ಕೆ ಪ್ರತಿ ದಿನ 77 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಪ್ರಮಾಣವು ಒಂದು ಕೋಟಿ ಲೀಟರ್‌ಗೆ ಏರಿಕೆಯಾಗಲಿದೆ ಎಂದು ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದರು.

ಜ.4-6 ರವರೆಗೆ ನಡೆದ ರಾಜ್ಯಮಟ್ಟದ ಪಶುಮೇಳ ಯಶಸ್ವಿಯಾಗಿದ್ದು, ಯಾವ ತಳಿಯನ್ನು ಪಡೆದರೆ ಹೆಚ್ಚಿನ ಹಾಲು ಉತ್ಪಾದನೆ ಮಾಡಬಹುದು, ಮಾಂಸ ಉತ್ಪಾದಿಸಬಹುದು ಎಂಬ ಅಂಶವನ್ನು ಬಹುಪಾಲು ರೈತರು ಕಂಡುಕೊಂಡಿದ್ದಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X