Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಂಡನ್ ನಲ್ಲಿ ದೇಶದ ಮಾನ ಹರಾಜು ಹಾಕಿದ...

ಲಂಡನ್ ನಲ್ಲಿ ದೇಶದ ಮಾನ ಹರಾಜು ಹಾಕಿದ ಪಶ್ಚಿಮ ಬಂಗಾಳದ ಹಿರಿಯ ಪತ್ರಕರ್ತರು

ಮಮತಾ ಜೊತೆ ಔತಣಕೂಟದಲ್ಲಿ ಇವರು ಮಾಡಿದ ಘನಂದಾರಿ ಕೆಲಸ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ9 Jan 2018 11:42 PM IST
share
ಲಂಡನ್ ನಲ್ಲಿ  ದೇಶದ ಮಾನ ಹರಾಜು ಹಾಕಿದ ಪಶ್ಚಿಮ ಬಂಗಾಳದ ಹಿರಿಯ ಪತ್ರಕರ್ತರು

ಕೊಲ್ಕತ್ತಾ, ಜ.9; ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜೊತೆ ಲಂಡನ್‌ಗೆ ತೆರಳಿದ್ದ ಪತ್ರಪರ್ತರ ತಂಡದ ಹಿರಿಯ ಸದಸ್ಯರು ಅಲ್ಲಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ಬೆಳ್ಳಿಪಾತ್ರೆಗಳನ್ನು ಕದ್ದು ಸಿಕ್ಕಿಹಾಕಿಕೊಳ್ಳುವ ಮೂಲಕ ತೀವ್ರ ಮುಜುಗರಕ್ಕೀಡಾದ ಘಟನೆ ನಡೆದಿದೆ.

 ಪತ್ರಕರ್ತರ ಈ ವರ್ತನೆಯು ಹೊಟೇಲ್‌ನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಹೊಟೇಲ್ ಸಿಬ್ಬಂದಿ ಆರಂಭದಲ್ಲಿ ಈ ಬಗ್ಗೆ ಮೌನವಾಗುಳಿಯಲು ನಿರ್ಧರಿಸಿದರೂ ಅದು ಅತಿರೇಕಕ್ಕೆ ತಲುಪಿದಾಗ ಪತ್ರಕರ್ತರಿಗೆ ಎಚ್ಚರಿಕೆ ನೀಡಿದ ಘಟನೆಯೂ ನಡೆದಿದೆ ಎಂದು ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ. ಮಮತಾ ಬ್ಯಾನರ್ಜಿ ಅವರಿಗಾಗಿ ಲಂಡನ್‌ನ ಪ್ರತಿಷ್ಠಿತ ಹೊಟೇಲ್‌ನಲ್ಲಿ ಭೋಜನಕೂಟವನ್ನು ಏರ್ಪಡಿಸಲಾಗಿತ್ತು. ಬ್ಯಾನರ್ಜಿಯವರ ಜೊತೆ ಭೋಜನಕೂಟದಲ್ಲಿ ಭಾರತ ಮತ್ತು ಬ್ರಿಟನ್‌ನ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮತ್ತು ಪತ್ರಕರ್ತರು ಉಪಸ್ಥಿತರಿದ್ದರು. ಮಮತಾ ಅವರ ಜೊತೆ ತೆರಳಿದ್ದ ಪತ್ರಕರ್ತರ ತಂಡದಲ್ಲಿ ಹಿರಿಯ ಪತ್ರಕರ್ತರೇ ಇದ್ದರು. ಮೊದಲಿಗೆ ಒಬ್ಬ ಪತ್ರಕರ್ತರು ಬೆಳ್ಳಿಯ ಚಮಚವನ್ನು ಕಿಸೆಗೆ ಹಾಕಿಕೊಂಡರು. ಇದನ್ನು ಗಮನಿಸಿದ ಇತರ ಕೆಲವು ಪತ್ರಕರ್ತರು ಕೂಡಾ ಬೆಳ್ಳಿಯ ಪಾತ್ರೆಗಳನ್ನು ತಮ್ಮ ಕಿಸೆ ಹಾಗೂ ಚೀಲಗಳಲ್ಲಿ ತುಂಬಲು ಆರಂಭಿಸಿದರು. ಆದರೆ ಈ ಎಲ್ಲಾ ದೃಶ್ಯಗಳನ್ನು ಅಲ್ಲಿಯ ಸಿಸಿ ಕ್ಯಾಮೆರಾಗಳು ಸೆರೆ ಹಿಡಿಯುತ್ತಿರುವುದು ಅವರ ಗಮನಕ್ಕೆ ಬಂದಿರಲಿಲ್ಲ ಎಂದು ತಂಡದಲ್ಲಿದ್ದ ಪತ್ರಕರ್ತರೊಬ್ಬರು ತಿಳಿಸಿದ್ದಾರೆ.

ಆರಂಭದಲ್ಲಿ ಭಾರತದಿಂದ ಬಂದ ಗಣ್ಯರಿಗೆ ಮುಜುಗರ ಉಂಟುಮಾಡಬಾರದು ಎಂಬ ಕಾರಣಕ್ಕೆ ಹೊಟೇಲ್ ಸಿಬ್ಬಂದಿ ಎಲ್ಲ ತಿಳಿದಿದ್ದರೂ ಮೌನವಾಗಿರಲು ನಿರ್ಧರಿಸಿದ್ದರು. ಆದರೆ ಪರಿಸ್ಥಿತಿ ಮಿತಿಮೀರಿದಾಗ ಈ ಬಗ್ಗೆ ಪತ್ರಕರ್ತರಿಗೆ ಸೂಚನೆ ನೀಡಿದ ಸಿಬ್ಬಂದಿ ಸಿಸಿ ಕ್ಯಾಮೆರಾವು ಎಲ್ಲವನ್ನೂ ಸೆರೆ ಹಿಡಿದಿರುವುದಾಗಿ ತಿಳಿಸಿದಾಗ ಬಹುತೇಕ ಪತ್ರಕರ್ತರಿಗೆ ಮುಜುಗರವಾಗಿತ್ತು. ಅವರೆಲ್ಲ ತಮ್ಮ ಬಳಿಯಿದ್ದ ಬೆಳ್ಳಿಯ ಪಾತ್ರೆಗಳನ್ನು ಟೇಬಲ್ ಮೇಲೆ ಇಟ್ಟಿದ್ದರು ಎಂದು ಅಲ್ಲಿನ ಸಿಬ್ಬಂದಿ ತಿಳಿಸಿರುವುದಾಗಿ ಪತ್ರಿಕೆಗಳು ವರದಿ ಮಾಡಿವೆ.

ಆದರೆ ಒಬ್ಬ ಹಿರಿಯ ಪತ್ರಕರ್ತರು ಮಾತ್ರ ತಾನೇನೂ ತಪ್ಪು ಮಾಡಿಲ್ಲ ಎಂದು ವಾದಿಸಲು ಆರಂಭಿಸಿ ಬೇಕಾದರೆ ತನ್ನ ತಪಾಸಣೆ ನಡೆಸುವಂತೆ ಹೇಳಿದ್ದರು. ಆದರೆ ಅವರು ಅದಕ್ಕೂ ಮೊದಲು ತಮ್ಮ ಬಳಿಯಿದ್ದ ಬೆಳ್ಳಿಯ ಸಾಮಾಗ್ರಿಗಳನ್ನು ಮತ್ತೊಬ್ಬ ಪತ್ರಕರ್ತರ ಚೀಲದೊಳಗೆ ಹಾಕಿರುವುದು ಕೂಡಾ ಕ್ಯಾಮೆರಾದಲ್ಲಿ ದಾಖಲಾಗಿರುವುದು ಅವರಿಗೆ ತಿಳಿದಿರಲಿಲ್ಲ. ಕೋಪಗೊಂಡ ಹೊಟೇಲ್ ಸಿಬ್ಬಂದಿ ಅವರಿಗೆ 50 ಪೌಂಡ್ ದಂಡ ಕಟ್ಟುವ ಸೂಚಿಸಿತು. ಕೊನೆಯಲ್ಲಿ ದಂಡ ಕಟ್ಟಿದ ಆ ಪತ್ರಕರ್ತ ಹೊಟೇಲ್‌ನಿಂದ ಹೊರನಡೆದರು ಎಂದು ಪತ್ರಿಕೆಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X