Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದರ ಸಂಬಳ ಏರಿಕೆ ಪ್ರಸ್ತಾಪದ...

ಸಂಸದರ ಸಂಬಳ ಏರಿಕೆ ಪ್ರಸ್ತಾಪದ ಚರ್ಚೆಗಾಗಿ ಜ.12ರಂದು ಸಭೆ

ವಾರ್ತಾಭಾರತಿವಾರ್ತಾಭಾರತಿ10 Jan 2018 7:11 PM IST
share
ಸಂಸದರ ಸಂಬಳ ಏರಿಕೆ ಪ್ರಸ್ತಾಪದ ಚರ್ಚೆಗಾಗಿ ಜ.12ರಂದು ಸಭೆ

ಹೊಸದಿಲ್ಲಿ,ಜ.10: ವೇತನ ಮತ್ತು ಭತ್ಯೆಗಳ ಕುರಿತ ಲೋಕಸಭಾ ಸಮಿತಿಯು ಜ.12ರಂದು ಸಭೆ ಸೇರಲಿದ್ದು, ಸಂಸದರ ವೇತನವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲು ಹಳೆಯ ಪ್ರಸ್ತಾಪವೊಂದನ್ನು ಚರ್ಚಿಸುವ ಸಾಧ್ಯತೆಯಿದೆ.

ಸಂಸದರು ಹಾಲಿ ಮಾಸಿಕ 50,000 ರೂ.ಮೂಲವೇತನ ಮತ್ತು 45,000 ರೂ. ಕ್ಷೇತ್ರಭತ್ಯೆಯನ್ನು ಪಡೆಯುತ್ತಿದ್ದಾರೆ. ಸಂಸತ್ತು ಮತ್ತು ಸಂಬಂಧಿತ ಸಭೆಗಳಿಗೆ ಹಾಜರಾತಿ ಭತ್ಯೆಯಾಗಿ ದೈನಿಕ 2,000 ರೂ.ಗಳ ಭತ್ಯೆಗೂ ಅವರು ಅರ್ಹರಾಗಿದ್ದಾರೆ. ಸಂಸದರ ವೇತನವನ್ನು ಹೆಚ್ಚಿಸುವ ಪ್ರಸ್ತಾಪಕ್ಕೆ ಎನ್‌ಡಿಎ ಸರಕಾರವು ಈವರೆಗೂ ಬೆಂಬಲವನ್ನು ವ್ಯಕ್ತಪಡಿಸಿಲ್ಲ.

ಸರ್ವೋಚ್ಚ ಮತ್ತು ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ವೇತನಗಳನ್ನು ಹೆಚ್ಚಿಸುವ ಶಾಸನವೊಂದನ್ನು ಲೋಕಸಭೆಯು ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಸಮಿತಿಯು ಸಭೆಯನ್ನು ಕರೆದಿರುವುದು ಮಹತ್ವವನ್ನು ಪಡೆದುಕೊಂಡಿದೆ. ಕೇಂದ್ರ ಸರಕಾರಿ ನೌಕರರ ವೇತನಗಳನ್ನು ಹೆಚ್ಚಿಸಲು ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಸರಕಾರವು ಈ ಹಿಂದೆಯೇ ಒಪ್ಪಿಕೊಂಡಿದೆ.

ಸದನ ಸಮಿತಿಯ ಸಲಹೆಗಳನ್ನು ಸರಕಾರವು ಒಪ್ಪಿಕೊಂಡರೆ ಸಂಸದರ ವೇತನ ಹೆಚ್ಚಳಕ್ಕಾಗಿ ಹೊಸ ಮಸೂದೆಯೊಂದನ್ನು ಸಂಸತ್ತು ಅಂಗೀಕರಿಸಬೇಕಾಗುತ್ತದೆ.

2015,ಡಿಸೆಂಬರ್‌ನಲ್ಲಿ ಆದಿತ್ಯನಾಥ್ ನೇತೃತ್ವದ ಆಗಿನ ವೇತನಗಳು ಮತ್ತು ಭತ್ಯೆಗಳ ಕುರಿತ ಸದನ ಸಮಿತಿಯು ಸಂಸದರ ವೇತನಗಳಲ್ಲಿ ಶೇ.100ರಷ್ಟು ಏರಿಕೆಯನ್ನು ಶಿಫಾರಸು ಮಾಡಿತ್ತು. ಆದರೆ ಈ ಪ್ರಸ್ತಾಪವು ಹಾಗೆಯೇ ಉಳಿದುಕೊಂಡಿದೆ.

ಸಂಸದರು ತಮ್ಮ ಅಧಿಕಾರಾವಧಿಯಲ್ಲಿ ಸೀಮಿತ ಸಂಖ್ಯೆಯ ಉಚಿತ ವಿಮಾನ ಪ್ರಯಾಣ ಟಿಕೆಟ್‌ಗಳು, ಉಚಿತ ವಸತಿ ಮತ್ತು ಸಿಬ್ಬಂದಿ ಭತ್ಯೆಗಳಿಗೂ ಅರ್ಹರಾಗಿ ರುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X