Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ವರದಿಗಾರನನ್ನು ‘ಗೂಂಡಾ’ ಎಂದ...

ತನ್ನ ವರದಿಗಾರನನ್ನು ‘ಗೂಂಡಾ’ ಎಂದ ಅರ್ನಬ್ ರ ರಿಪಬ್ಲಿಕ್ ಟಿವಿಗೆ ಎಬಿಪಿ ನ್ಯೂಸ್ ಚಾಟಿ

ಕ್ಷಮೆಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ10 Jan 2018 7:31 PM IST
share
ತನ್ನ ವರದಿಗಾರನನ್ನು ‘ಗೂಂಡಾ’ ಎಂದ ಅರ್ನಬ್ ರ ರಿಪಬ್ಲಿಕ್ ಟಿವಿಗೆ ಎಬಿಪಿ ನ್ಯೂಸ್ ಚಾಟಿ

ಹೊಸದಿಲ್ಲಿ, ಜ.10: ಸುದ್ದಿ ಪ್ರಸಾರದ ಸಂದರ್ಭ ತನ್ನ ವರದಿಗಾರರೊಬ್ಬರನ್ನು ‘ಗೂಂಡಾ’ ಎಂದು ಬಿಂಬಿಸಿದ 'ರಿಪಬ್ಲಿಕ್ ಟಿವಿ' ಚಾನೆಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಸಿದ್ಧ ಹಿಂದಿ ಚಾನೆಲ್ 'ಎಬಿಪಿ ನ್ಯೂಸ್' ಈ ಬಗ್ಗೆ ಅರ್ನಬ್ ಗೋಸ್ವಾಮಿ 'ಪ್ರೈಮ್ ಟೈಮ್'ನಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಈ ಬಗ್ಗೆ jantakareporter.com ವರದಿ ಮಾಡಿದೆ. ದಿಲ್ಲಿಯಲ್ಲಿ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ನಡೆದ ರ್ಯಾಲಿಯ ಸಂದರ್ಭ ಅಲ್ಲಿದ್ದ ಕೆಲವರು ರಿಪಬ್ಲಿಕ್ ಟಿವಿಯ ವರದಿಗಾರ್ತಿಯನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ್ದ 'ರಿಪಬ್ಲಿಕ್ ಟಿವಿ' ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಕೆಲವರ ಫೋಟೊಗಳನ್ನು ಬಿತ್ತರಿಸಿತ್ತು.

“ನಮ್ಮ ವರದಿಗಾರ್ತಿ ಶಿವಾನಿಯನ್ನು ಬೆದರಿಸಿದ ಅಸಭ್ಯರ ವಿಡಿಯೋಗಳನ್ನು ನಾನು ನಿಮ್ಮ ಮುಂದಿಡುತ್ತೇನೆ” ಎಂದು ಅರ್ನಬ್ ಗೋಸ್ವಾಮಿ ತಮ್ಮ ಎಂದಿನ ಶೈಲಿಯಲ್ಲಿ ಕಿರುಚುತ್ತಾ ವರದಿ ಮಾಡಿದ್ದರು.

ಅಂಕಣಕಾರ್ತಿ ಪ್ರತಿಷ್ಠಾ ಸಿಂಗ್ ರ ಪತಿಯನ್ನು ಹಾಗು ಎಬಿಪಿ ನ್ಯೂಸ್ ನ ವರದಿಗಾರ ಜೈನೇಂದ್ರ ಕುಮಾರ್ ರನ್ನು ವಿಡಿಯೋದಲ್ಲಿ ಕೆಂಪು ವೃತ್ತದಲ್ಲಿ ಕೆಲ ವ್ಯಕ್ತಿಗಳೊಂದಿಗೆ ತೋರಿಸಲಾಗಿತ್ತು. ಈ ಬಗ್ಗೆ ಎಬಿಪಿಯ ಅಭಿಸಾರ್ ಶರ್ಮಾ ಫೇಸ್ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ಕಳೆದ ರಾತ್ರಿ ರಿಪಬ್ಲಿಕ್ ಟಿವಿ ಅಮಾಯಕ ವ್ಯಕ್ತಿಯೊಬ್ಬರನ್ನು ಹಾಗು ಭಾರತದ ಪ್ರಸಿದ್ಧ ವರದಿಗಾರರಾದ ಜೈನೇಂದ್ರ ಕುಮಾರ್ ರನ್ನು ಗೂಂಡಾಗಳೆಂದು ಕರೆದಿತ್ತು. ಈ ಚಾನೆಲ್ ಇರುವುದಾದರೂ ಯಾತಕ್ಕೆ?, ಇವರೆಲ್ಲಾ ಎಲ್ಲಿಂದ ಬಂದವರು?, ಈ ಚಾನೆಲ್ ಅನ್ನು ನಡೆಸುತ್ತಿರುವವರು ಯಾವ ರೀತಿಯ ಮಾನಸಿಕ ರೋಗದವರು?, ಇಲ್ಲಿ ಗೂಂಡಾಗಳು ಯಾರು? ಬಯಸಿದ್ದನ್ನು ಪ್ರಸಾರ ಮಾಡುವವರು ಇವರು, ನಿರ್ದಿಷ್ಟ ರಾಜಕೀಯ ಪಕ್ಷದಿಂದ ಸುಪಾರಿ ಪಡೆದುಕೊಂಡು ಇನ್ನೊಬ್ಬರ ಮಾನಹಾನಿ ಮಾಡುವವರು ಇವರು. ಇನ್ನೊಂದು ಚಾನೆಲ್ ನ ವರದಿಗಾರರನ್ನು ಮತ್ತೊಂದು ಚಾನೆಲ್ ‘ಗೂಂಡಾ’ ಎಂದು ಕರೆದದ್ದು ಇದೇ ಮೊದಲು. ಇವರು ಎಲ್ಲಾ ಮಿತಿಗಳನ್ನು ದಾಟುತ್ತಿದ್ದಾರೆ” ಎಂದು ಅಭಿಸಾರ್ ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದರು. 

ಈ ಬಗ್ಗೆ ಅರ್ನಬ್ ವರದಿಗಾರನ ಕ್ಷಮೆ ಯಾಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ತನ್ನ 'ಪ್ರೈಮ್ ಟೈಮ್' ನಲ್ಲೇ ಲೈವ್ ನಲ್ಲಿ ಅರ್ನಬ್ ಕ್ಷಮೆ ಯಾಚಿಸಬೇಕು ಎಂದಿರುವ ಎಬಿಪಿ ನ್ಯೂಸ್ ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದೆ ಎನ್ನಲಾಗಿದೆ ಎಂದು  jantakareporter.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X