Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣದೊಂದಿಗೆ ಪರಮಾಣು ಅಸ್ತ್ರಗಳ ಬಗ್ಗೆ...

ದಕ್ಷಿಣದೊಂದಿಗೆ ಪರಮಾಣು ಅಸ್ತ್ರಗಳ ಬಗ್ಗೆ ಚರ್ಚೆಯಿಲ್ಲ: ಉತ್ತರ ಕೊರಿಯ

ವಾರ್ತಾಭಾರತಿವಾರ್ತಾಭಾರತಿ10 Jan 2018 11:05 PM IST
share
ದಕ್ಷಿಣದೊಂದಿಗೆ ಪರಮಾಣು ಅಸ್ತ್ರಗಳ ಬಗ್ಗೆ ಚರ್ಚೆಯಿಲ್ಲ: ಉತ್ತರ ಕೊರಿಯ

ಸಿಯೋಲ್ (ದಕ್ಷಿಣ ಕೊರಿಯ), ಜ. 10: ದಕ್ಷಿಣ ಕೊರಿಯದ ಜೊತೆಗಿನ ಮಾತುಕತೆಯಲ್ಲಿ ತಾನು ಪರಮಾಣು ಅಸ್ತ್ರಗಳ ವಿಷಯವನ್ನು ಮಾತನಾಡುವುದಿಲ್ಲ, ಯಾಕೆಂದರೆ, ಪರಮಾಣು ಅಸ್ತ್ರಗಳು ಇರುವುದು ಅಮೆರಿಕವನ್ನು ಎದುರಿಸಲು ಮಾತ್ರ, ತನ್ನ ‘ಸಹೋದರ’ ದಕ್ಷಿಣ ಕೊರಿಯವನ್ನಲ್ಲ ಎಂದು ಉತ್ತರ ಕೊರಿಯ ಹೇಳಿದೆ.

ದಕ್ಷಿಣ ಕೊರಿಯದೊಂದಿಗೆ ಮಂಗಳವಾರ 11 ಗಂಟೆಗಳ ಕಾಲ ಶಾಂತಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಕೊರಿಯದ ಪ್ರಮುಖ ಸಂಧಾನಕಾರ ರಿ ಸೊನ್ ಗ್ವೊನ್ ಈ ರೀತಿ ಹೇಳಿದರು.

ಮಾತುಕತೆಯ ವೇಳೆ, ಕೊರಿಯ ಪರ್ಯಾಯ ದ್ವೀಪವನ್ನು ಪರಮಾಣುಮುಕ್ತಗೊಳಿಸಬೇಕು ಎಂಬ ಪ್ರಸ್ತಾಪವನ್ನು ದಕ್ಷಿಣ ಕೊರಿಯ ಮುಂದಿಟ್ಟಿತಾದರೂ, ಉತ್ತರ ಕೊರಿಯ ಅದಕ್ಕೆ ‘ಬಲವಾದ ಆಕ್ಷೇಪ’ ವ್ಯಕ್ತಪಡಿಸಿತು.

ಉಭಯ ದೇಶಗಳ ನಡುವಿನ ವಿವಾದಗಳ ಬಗ್ಗೆ ಮಾತನಾಡಲು ಹಾಗೂ ಆಕಸ್ಮಿಕ ಸಂಘರ್ಷವನ್ನು ತಡೆಯುವ ಬಗ್ಗೆ ಚರ್ಚಿಸಲು ಮತ್ತೊಮ್ಮೆ ಸಭೆ ಸೇರಲು ಉಭಯ ದೇಶಗಳು ಒಪ್ಪಿವೆಯಾದರೂ, ಆ ಸಭೆಯಲ್ಲಿ ನಿಶ್ಶಸ್ತ್ರೀಕರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಉತ್ತರ ಕೊರಿಯ ಹೇಳಿದೆ.

ಪರಮಾಣುಮುಕ್ತತೆ ಶಾಂತಿಗೆ ರಹದಾರಿ: ದ. ಕೊರಿಯ

ಕೊರಿಯ ಪರ್ಯಾಯ ದ್ವೀಪವನ್ನು ಪರಮಾಣುಮುಕ್ತಗೊಳಿಸುವುದು ‘ಶಾಂತಿಗೆ ರಹದಾರಿಯಾಗಿದೆ ಹಾಗೂ ನಮ್ಮ ಗುರಿಯಾಗಿದೆ’ ಎಂದು ದಕ್ಷಿಣ ಕೊರಿಯದ ಅಧ್ಯಕ್ಷ ಮೂನ್ ಜೇ ಇನ್ ಬುಧವಾರ ಹೇಳಿದ್ದಾರೆ.

‘‘ಶಾಂತಿಯುತ ಒಲಿಂಪಿಕ್ಸ್ ನಡೆಸುವ ನಮ್ಮ ಪ್ರಯತ್ನಗಳನ್ನು ನಾವು ಮುಂದುವರಿಸಬೇಕಾಗಿದೆ’’ ಎಂದು ಉತ್ತರ ಮತ್ತು ದಕ್ಷಿಣ ಕೊರಿಯಗಳ ನಡುವಿನ ಮಾತುಕತೆಯ ಒಂದು ದಿನದ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮತನಾಡಿದ ಅವರು ನುಡಿದರು.

‘‘ಉತ್ತರ ಕೊರಿಯದ ಪರಮಾಣು ಸಮಸ್ಯೆಯನ್ನು ನಾವು ಶಾಂತಿಯುತವಾಗಿ ಇತ್ಯರ್ಥಪಡಿಸಬೇಕಾಗಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X