Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.11ರಿಂದ ತುಂಬೆ ಡ್ಯಾಂನಲ್ಲಿ 6 ಮೀಟರ್...

ಜ.11ರಿಂದ ತುಂಬೆ ಡ್ಯಾಂನಲ್ಲಿ 6 ಮೀಟರ್ ನೀರು ನಿಲುಗಡೆ: ಮೇಯರ್ ಕವಿತಾ ಸನಿಲ್

ವಾರ್ತಾಭಾರತಿವಾರ್ತಾಭಾರತಿ10 Jan 2018 11:17 PM IST
share

ಮಂಗಳೂರು, ಜ.10: ಮನಪಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಜ.11ರಿಂದ 6 ಮೀಟರ್ ನೀರು ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ಹೇಳಿದರು.

ಬುಧವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು 10 ತಿಂಗಳ ಹಿಂದೆ ನಾನು ಮೇಯರ್ ಆಗಿ ಅಧಿಕಾರ ವಹಿಸಿಕೊಂಡಾಗ ಮಂಗಳೂರಿಗೆ ನೀರು ಪೂರೈಕೆ ಮಾಡುವುದೇ ದೊಡ್ಡ ಸವಾಲಾಗಿತ್ತು. ಆವಾಗ ತುಂಬೆಯಲ್ಲಿ ಕೇವಲ 3.38 ಮೀಟರ್ ಮಾತ್ರ ನೀರು ನಿಲುಗಡೆಯಾಗುತ್ತಿತ್ತು. ಬಳಿಕ ಅದನ್ನು 5 ಮೀಟರ್‌ಗೆ ಏರಿಸಲಾಯಿತು. ಆವಾಗ ಸುಮಾರು 26 ಮಂದಿಯ ಹಲವು ಎಕರೆ ಜಮೀನು ಮುಳುಗಡೆಯಾಗಿತ್ತು. ಸಂತ್ರಸ್ತರಿಗೆ 7 ಕೋ.ರೂ. ಪರಿಹಾರವು ಸರಕಾರ ಬಿಡುಗಡೆಗೊಳಿಸಿದ್ದು, ಹೆಚ್ಚಿನವರಿಗೆ ಬಿಡುಗಡೆ ಮಾಡಲಾಗಿದೆ. ದಾಖಲೆಪತ್ರ ಸರಿ ಇಲ್ಲದವರಿಗೆ ಪರಿಹಾರ ನೀಡಲು ಸ್ವಲ್ಪ ವಿಳಂಬವಾಗಿದೆ ಎಂದರು.

ಮೇಯರ್ ಆದಾಗಲೇ ಈ ನೀರಿನ ಮಟ್ಟವನ್ನು 6 ಮೀಟರ್‌ಗೆ ಏರಿಸಲು ಉದ್ದೇಶಿಸಿದ್ದೆ. ಇದೀಗ ಆ ಕನಸು ನನಸಾಗುತ್ತಿದೆ. ಜ.10ರಿಂದ 6 ಮೀಟರ್ ನೀರು ನಿಲುಗಡೆಯಾಗಲಿದ್ದು, ಇದಕ್ಕಾಗಿ ಬಿ. ಮೂಡಾ, ಸಜಿಪ ಮುನ್ನೂರು, ಪಾಣೆಮಂಗಳೂರು ಗ್ರಾಮಗಳ 37 ಕುಟುಂಬಗಳ 50.88 ಎಕರೆ ಜಮೀನು ಮುಳುಗಡೆಯಾಗಲಿದೆ. ಈ ಸಂತ್ರಸ್ತರಿಗೆ ಪರಿಹಾರ ಕೊಡಲು ಸುಮಾರು 40 ಕೋ.ರೂ. ಬೇಕಾಗಬಹುದು. ಅದಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು. ಸದ್ಯ ವಾರ್ಷಿಕ 19 ಲಕ್ಷ ರೂ. ನೆಲೆ ಬಾಡಿಗೆ ನೀಡಲಾಗುವುದು ಎಂದು ಕವಿತಾ ಸನಿಲ್ ಹೇಳಿದರು.

6 ಮೀಟರ್ ನೀರು ನಿಲುಗಡೆಯಾಗುವುದರೊಂದಿಗೆ ಬೇಸಿಗೆಯ ಅಂತ್ಯಕ್ಕೆ ಎದುರಾಗುವ ನೀರಿನ ಸಮಸ್ಯೆಗೆ ಪರಿಹಾರ ನೀಡಲು ಸಾಧ್ಯವಿದ್ದು, ಆ ಮೂಲಕ ತನ್ನ ಅವಧಿಯಲ್ಲಿ ಮಾಡಿದ ಈ ಸಾಧನೆಯ ಬಗ್ಗೆ ತನಗೆ ತೃಪ್ತಿ ಇದೆ ಎಂದು ಕವಿತಾ ಸನಿಲ್ ನುಡಿದರು.

ಸುದ್ದಿಗೋಷ್ಠಿಯಲ್ಲಿ ಮನಪಾ ಸಚೇತಕ ಶಶಿಧರ ಹೆಗ್ಡೆ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಸಬಿತಾ ಮಿಸ್ಕಿತ್ ಉಪಸ್ಥಿತರಿದ್ದರು.

ವಾಣಿಜ್ಯ ಪರವಾನಿಗೆ ನವೀಕರಿಸದವರಿಗೆ ಬಿಸಿ

ನಗರದ ಹಲವು ಕಡೆ ವ್ಯಾಪಾರಿಗಳು ವಾಣಿಜ್ಯ ಪರವಾನಿಗೆ ನವೀಕರಿಸಿಲ್ಲ. ಅದರಲ್ಲೂ ಮದುವೆ ಹಾಲ್‌ಗಳಿಗೆ ಸಂಬಂಧಪಟ್ಟವರು ಹಲವು ವರ್ಷದಿಂದ ಇದನ್ನು ನವೀಕರಿಸದ ಕಾರಣ ಮನಪಾಕ್ಕೆ ಭಾರೀ ಹೊಡೆತ ಬಿದ್ದಿದೆ. ಇವೆಲ್ಲದರ ಪಟ್ಟಿಯನ್ನು ತರಿಸಿ 10 ದಿನದ ಹಿಂದೆ ನೋಟಿಸ್ ಜಾರಿಗೊಳಿಸಿತ್ತು. ಅದರಂತೆ ನಗರದ ಬೃಹತ್ ಹಾಲ್‌ಗೆ ಸಂಬಂಧಪಟ್ಟವರು 7 ಲಕ್ಷ ರೂ. ಒಂದೇ ಕಂತಿನಲ್ಲಿ ಪಾವತಿಸಿದ್ದಾರೆ. ಇನ್ನೂ ಕೆಲವರು ಹಣ ಪಾವತಿಸಿದ್ದು, ಸುಮಾರು 20 ಲಕ್ಷ ರೂ. ಜಮೆಯಾಗಿದೆ. ವಾರದೊಳಗೆ ಪರವಾನಿಗೆ ನವೀಕರಿಸದ ಎಲ್ಲ ಮದುವೆ ಹಾಲ್‌ಗಳಿಗೂ ದಾಳಿ ಮಾಡಲಾಗುವುದು ಎಂದು ಮೇಯರ್ ಕವಿತಾ ಸನಿಲ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಕ್ರಮವಾಗಿ ನಳ್ಳಿ ನೀರಿನ ಸಂಪರ್ಕ ಪಡೆದವರ ಮೇಲೂ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು. ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ. ಮೊದಲು ನೋಟಿಸ್ ಜಾರಿಗೊಳಿಸಿ ದಂಡದೊಂದಿಗೆ ಸಕ್ರಮವಾಗಿಸಲು ಸೂಚಿಸಲಾಗುವುದು. ಅದಕ್ಕೂ ಸ್ಪಂದಿಸದಿದ್ದರೆ ಕಠಿಣ ಕ್ರಮ ಜರಗಿಸುವುದು ಅನಿವಾರ್ಯ ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X