Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಮಲಾ ಮಿಲ್ಸ್ ಅಗ್ನಿ ದುರಂತ:...

ಕಮಲಾ ಮಿಲ್ಸ್ ಅಗ್ನಿ ದುರಂತ: ರೆಸ್ಟೋರೆಂಟ್‌ನ ಮೂವರು ಮಾಲಕರ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Jan 2018 8:35 PM IST
share
ಕಮಲಾ ಮಿಲ್ಸ್ ಅಗ್ನಿ ದುರಂತ: ರೆಸ್ಟೋರೆಂಟ್‌ನ ಮೂವರು ಮಾಲಕರ ಬಂಧನ

ಮುಂಬೈ, ಜ.11: ಕಮಲಾ ಮಿಲ್ಸ್ ಕಂಪೌಂಡ್‌ನಲ್ಲಿ ನಡೆದ ಅಗ್ನಿದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ವನ್ ಎಬೌ ರೆಸ್ಟೋರೆಂಟ್‌ನ ತಲೆಮರೆಸಿಕೊಂಡಿದ್ದ ಮಾಲಕರಾದ ಕೃಪೇಶ್ ಸಾಂಘ್ವಿ ಮತ್ತು ಅವರ ಸಹೋದರ ಜಿಗರ್‌ನನ್ನು ಉಪನಗರಿ ಬಾಂಡ್ರಾದಲ್ಲಿ ಬುಧವಾರ ಬಂಧಿಸಿದ್ದಾರೆ. ರೆಸ್ಟೋರೆಂಟ್‌ನ ಪಾಲುದಾರರಾದ ಅಭಿಜಿತ್ ಮಂಕರ್‌ನನ್ನು ಕೂಡಾ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರದಂದು ದೃಢಪಡಿಸಿದ್ದಾರೆ ಎಂದು ಆಂಗ್ಲ ಪತ್ರಿಕೆ ವರದಿ ಮಾಡಿದೆ.

ಡಿಸೆಂಬರ್ 29ರಂದು 14 ಜನರನ್ನು ಬಲಿಪಡೆದುಕೊಂಡ ಅಗ್ನಿದುರಂತ ಪ್ರಕರಣದಲ್ಲಿ ಪೊಲಿಸರು ವನ್ ಎಬೌ ರೆಸ್ಟೋರೆಂಟ್‌ನ ಮಾಲಕರ ವಿರುದ್ಧ ದೋಷಪೂರಿತ ಹತ್ಯೆ ಪ್ರಕರಣವನ್ನು ದಾಖಲಿಸಿದ್ದರು. ಈ ಘಟನೆಯ ನಂತರ ಆರೋಪಿಗಳಾದ ಸಾಂಘ್ವಿ ಸಹೋದರರು ಮತ್ತು ಅಭಿಜಿತ್ ಮಂಕರ್ ತಲೆಮರೆಸಿಕೊಂಡಿದ್ದರು. ಅಗ್ನಿದುರಂತದಲ್ಲಿ ವನ್ ಎಬೌ ಮತ್ತು ಮೊಜೊ ಬ್ಟಿಸ್ಟೊ ರೆಸ್ಟೋರೆಂಟ್‌ ಸಂಪೂರ್ಣವಾಗಿ ಭಸ್ಮವಾಗಿದ್ದವು.

ಪೊಲೀಸರು ಆರಂಭದಲ್ಲಿ ಸಾಂಘ್ವಿ ಸಹೋದರರ ಆಪ್ತ ಸ್ನೇಹಿತ ವಿಶಾಲ್ ಕಾರಿಯ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು. ಆತನ ವಿಚಾರಣೆಯ ವೇಳೆ ಸಾಂಘ್ವಿ ಸಹೋದರರು ಅಡಗಿರುವ ಸ್ಥಳದ ಮಾಹಿತಿಯನ್ನು ಆತ ಪೊಲೀಸರಿಗೆ ನೀಡಿದ್ದ. ಆರೋಪಿಗಳು ವಕೀಲರೊರ್ವರನ್ನು ಭೇಟಿಯಾಗಲು ಬಾಂಡ್ರಾದ ಹೊಟೇಲೊಂದಕ್ಕೆ ಆಗಮಿಸುತ್ತಿರುವುದಾಗಿ ಅವರಿಗೆ ಆಶ್ರಯ ನೀಡಿದ್ದ ಕಾರಿಯ ಪೊಲೀಸರಿಗೆ ತಿಳಿಸಿದ್ದ. ಕೂಡಲೇ ಪೊಲೀಸರು ತಂಡವನ್ನು ರಚಿಸಿ ಬಾಂಡಾಕ್ಕೆ ತೆರಳಿ ಆರೋಪಿಗಳು ಬರುವ ಸಮಯ ಕಾದು ಅವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಈ ಪ್ರಕರಣದಲ್ಲಿ ಪೊಲೀಸರ ಪ್ರತ್ಯೇಕ ಏಳು ತಂಡಗಳನ್ನು ರಚಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಸದ್ಯ ಪೊಲೀಸರು ಮೊಜೊ ಬ್ರಿಸ್ಟೊ ರೆಸ್ಟೋರೆಂಟ್‌ನ ಮಾಲಕ ಯುಗ್ ಟುಲಿಯ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಟುಲಿಯನ್ನು ಮಂಗಳವಾರದಂದು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ನೋಡಲಾಗಿತ್ತಾದರೂ ಅವರಿಗೆ ವಿಮಾನದಲ್ಲಿ ತೆರಳಲು ಸಾಧ್ಯವಾಗಿರಲಿಲ್ಲ. ನಂತರ ಅವರು ಆ ಸ್ಥಳದಿಂದ ನಾಪತ್ತೆಯಾಗಿದ್ದರು. ಕಳೆದ ವಾರ ನಿವೃತ್ತ ಪೊಲೀಸ್ ಪ್ರಧಾನ ನಿರ್ದೇಶಕರು ಮತ್ತು ಪುಣೆಯ ನಿವೃತ್ತ ಪೊಲೀಸ್ ಆಯುಕ್ತರ ಮಗ ಹಾಗೂ ಮೊಜೊ ಬ್ರಿಸ್ಟೊದಾ ಪಾಲುದಾರರಾದ ಯುಗ್ ಪಾಠಕ್ ಅವರನ್ನು ಪೊಲೀಸರು ಬಂಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X