Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಂಕ ಪ್ರಕರಣ: ಸಿಬಿಐ ನ್ಯಾಯಾಲಯದ ಮುಂದೆ...

ಸುಂಕ ಪ್ರಕರಣ: ಸಿಬಿಐ ನ್ಯಾಯಾಲಯದ ಮುಂದೆ ಶಶಿಕಲಾ ಪತಿ ಶರಣಾಗತಿ

ವಾರ್ತಾಭಾರತಿವಾರ್ತಾಭಾರತಿ11 Jan 2018 8:41 PM IST
share
ಸುಂಕ ಪ್ರಕರಣ: ಸಿಬಿಐ ನ್ಯಾಯಾಲಯದ ಮುಂದೆ ಶಶಿಕಲಾ ಪತಿ ಶರಣಾಗತಿ

ಚೆನ್ನೈ, ಜ.11: ಸುಂಕ ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ.ಕೆ ಶಶಿಕಲಾ ಅವರ ಪತಿ ಎಂ. ನಟರಾಜನ್ ಅವರು ಗುರುವಾರದಂದು ಚೆನ್ನೈಯಲ್ಲಿರುವ ಸಿಬಿಐ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

1994ರಲ್ಲಿ ನಟರಾಜನ್ ಅವರು ಬ್ರಿಟನ್‌ನಿಂದ ವೈಭವೋಪೇತ ಕಾರನ್ನು ಆಮದು ಮಾಡಿಕೊಂಡ ಸಂದರ್ಭದಲ್ಲಿ ಕಸ್ಟಮ್ಸ್ ಸುಂಕ ಪಾವತಿ ಮಾಡದೆ ತಪ್ಪಿಸಿಕೊಂಡಿದ್ದರು. ಉಪಯೋಗಿಸಲ್ಪಟ್ಟಿರುವ ಹಳೆಯ ಕಾರನ್ನು ತಾನು ಖರೀದಿಸಿರುವುದಾಗಿ ನಟರಾಜನ್ ಹೇಳುವ ಮೂಲಕ 1.06 ಕೋಟಿ ರೂ. ತೆರಿಗೆಯನ್ನು ವಂಚಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ ಸರ್ವೋಚ್ಛ ನ್ಯಾಯಾಲಯವು ನಟರಾಜನ್ ಹಾಗೂ ಇತರ ಮೂವರು ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಅವರು ತಲಾ 25 ಲಕ್ಷ ರೂ. ರಿಜಿಸ್ಟ್ರಿಗೆ ಪಾವತಿಸುವಂತೆ ಸೂಚಿಸಿತ್ತು. ಟೊಯೊಟಾ ಲೆಕ್ಸಸ್ ಕಾರನ್ನು ಆಮದು ಮಾಡಿಕೊಂಡು ಸುಂಕ ಪಾವತಿ ತಪ್ಪಿಸಿಕೊಂಡ ಕಾರಣಕ್ಕಾಗಿ ಕೆಳನ್ಯಾಯಾಲಯವು ನಟರಾಜನ್ ಹಾಗೂ ಅವರ ಸಂಬಂಧಿಗಳಾದ ವಿ. ಬಾಲಕೃಷ್ಣನ್, ಯೋಗೀಶ್ ಬಾಲಕೃಷ್ಣನ್ ಮತ್ತು ಸುಜರಿತ ಸುಂದರರಾಜನ್ ಅವರಿಗೆ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ನವೆಂಬರ್‌ನಲ್ಲಿ ಮದ್ರಾಸ್ ಉಚ್ಛ ನ್ಯಾಯಾಲಯ ಎತ್ತಿಹಿಡಿದಿತ್ತು.

ಆರೋಪಿಗಳು ನೀಡಿರುವ ದಾಖಲೆಗಳು ನಕಲಿ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ನಟರಾಜನ್ ಹಾಗೂ ಇತರ ಆರೋಪಿಗಳ ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿತ್ತು. ಕಾರು ಖರೀದಿಸಿದ್ದ ನಿಜವಾದ ದಾಖಲೆಯನ್ನು ಬದಲು ಮಾಡಿ ಅದರ ಪ್ರತಿಯಾಗಿ ಕಾರನ್ನು 1993ರಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಮೂದಿಸಿರುವ ನಕಲಿ ದಾಖಲೆಯನ್ನು ನೀಡಲಾಗಿದೆ ಎಂದು ಸಿಬಿಐ ಆರೋಪಿಸಿತ್ತು.

ಜಾರಿ ನಿರ್ದೇಶನಾಲಯವು ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ (ಫೆರ) 1973 ಮತ್ತು ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ, 1999ರ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ಅನಾರೋಗ್ಯ ಕಾರಣವನ್ನು ನೀಡಿ ನಟರಾಜನ್ ಪ್ರತಿ ಬಾರಿಯೂ ನ್ಯಾಯಾಲಯದಲ್ಲಿ ಹಾಜರಾಗುವುದನ್ನು ತಪ್ಪಿಸಿಕೊಂಡಿದ್ದರು. ಅಕ್ಟೋಬರ್‌ನಲ್ಲಿ ಚೆನ್ನೈನ ಆಸ್ಪತ್ರೆಯಲ್ಲಿ ಅವರು ಕರುಳು ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X