Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನ ಮಗುವಿನ ಜೊತೆ ಈ ನಿರೂಪಕಿ ಸುದ್ದಿ...

ತನ್ನ ಮಗುವಿನ ಜೊತೆ ಈ ನಿರೂಪಕಿ ಸುದ್ದಿ ಓದಿದ್ದೇಕೆ?

ವಾರ್ತಾಭಾರತಿವಾರ್ತಾಭಾರತಿ11 Jan 2018 10:26 PM IST
share
ತನ್ನ ಮಗುವಿನ ಜೊತೆ ಈ ನಿರೂಪಕಿ ಸುದ್ದಿ ಓದಿದ್ದೇಕೆ?

ಇಸ್ಲಾಮಾಬಾದ್, ಜ. 11: ಪಾಕಿಸ್ತಾನದ ಕಸೂರ್ ಎಂಬ ನಗರದಲ್ಲಿ ನಡೆದ 8 ವರ್ಷದ ಬಾಲಕಿಯೊಬ್ಬಳ ಬರ್ಬರ ಅತ್ಯಾಚಾರ ಮತ್ತು ಕೊಲೆಯಿಂದ ದೇಶ ತಲ್ಲಣಿಸಿರುವಂತೆಯೇ, ಟಿವಿ ಚಾನೆಲೊಂದರ ನಿರೂಪಕಿಯೊಬ್ಬರು ಬುಧವಾರ ತನ್ನ ಮಗಳೊಂದಿಗೆ ಸುದ್ದಿಯನ್ನು ಓದುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

‘ಸಮಾ ಟಿವಿ’ಯ ಸುದ್ದಿ ನಿರೂಪಕಿ ಕಿರಣ್ ನಾಝ್ ತನ್ನ ಮಗುವನ್ನು ತನ್ನ ಮಡಿಲಲ್ಲಿ ಕುಳ್ಳಿರಿಸಿ, ‘‘ಇಂದು ನಾನು ಕಿರಣ್ ನಾಝ್ ಅಲ್ಲ. ಇಂದು ನಾನೊಬ್ಬ ತಾಯಿ. ಅದಕ್ಕಾಗಿ ನಾನಿಲ್ಲಿ ನನ್ನ ಮಗಳೊಂದಿಗೆ ಇಲ್ಲಿ ಕುಳಿತಿದ್ದೇನೆ’’ ಎಂದು ಹೇಳುತ್ತಾ ಕಾರ್ಯಕ್ರಮವನ್ನು ಆರಂಭಿಸಿದರು.

ಒಂದೂವರೆ ನಿಮಿಷ ಭಾವನಾತ್ಮಕವಾಗಿ ಮಾತನಾಡಿದ ನಾಝ್, ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರಗಳು ಮತ್ತು ಕೊಲೆಗಳನ್ನು ಖಂಡಿಸಿದರು. ‘‘ಅತ್ಯಂತ ಸಣ್ಣ ಶವಪೆಟ್ಟಿಗೆಗಳು ಅತ್ಯಂತ ಭಾರವಾಗಿರುತ್ತವೆ ಎಂಬ ಮಾತು ಸತ್ಯ. ಮೃತ ಮಗುವಿನ ಶವಪೆಟ್ಟಿಗೆಯ ಹೊರೆ ಇಡೀ ಪಾಕಿಸ್ತಾನದ ಮೇಲಿದೆ’’ ಎಂದರು.

8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಪಂಜಾಬ್ ಪ್ರಾಂತದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಬುಧವಾರ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ದೇವರೇ ನ್ಯಾಯ ಕೊಡುತ್ತಾರೆ

ಭಾರತದ ಗಡಿಯಿಂದ ಸ್ವಲ್ಪವೇ ದೂರದಲ್ಲಿರುವ ಕಸೂರ್ ಪಟ್ಟಣದಲ್ಲಿ ಜನವರಿ 4ರಂದು ಟ್ಯೂಶನ್ ತರಗತಿಯಿಂದ ಮನೆಗೆ ಮರಳುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿಯ ಹೆತ್ತವರು ಸೌದಿ ಅರೇಬಿಯಕ್ಕೆ ಯಾತ್ರೆಗೆ ತೆರಳಿದ್ದರು.

ಬಾಲಕಿಯು ಅಪರಿಚಿತ ವ್ಯಕ್ತಿಯೊಂದಿಗೆ ಇರುವ ಸಿಸಿಟಿವಿ ಚಿತ್ರವೊಂದನ್ನು ಬಾಲಕಿಯ ಕುಟುಂಬ ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಯು ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ವರದಿಗಳು ಹೇಳಿವೆ.

‘‘ಬಾಲಕಿಯ ಅಮಾನುಷ ಅತ್ಯಾಚಾರ ಮತ್ತು ಕೊಲೆಗೆ ಶೋಕ ವ್ಯಕ್ತವಾಗುತ್ತದೆ, ತನಿಖೆ ನಡೆಯುತ್ತದೆ, ಆಯೋಗಗಳ ರಚನೆಯಾಗುತ್ತದೆ, ಸ್ವಯಂಪ್ರೇರಿತ ಕ್ರಮಗಳು ಜರಗುತ್ತವೆ. ಆದರೆ, ಬಾಲಕಿಗೆ ನಿಮ್ಮ ನ್ಯಾಯ ಬೇಕಾಗಿಲ್ಲ. ನ್ಯಾಯ ನಿರ್ಣಯದ ದಿನದಂದು ಆಕೆ ದೇವರಲ್ಲಿ ತನ್ನ ಸಾವನ್ನು ಪ್ರಶ್ನಿಸುತ್ತಾಳೆ ಮತ್ತು ತನ್ನ ತಪ್ಪೇನೆಂದು ಕೇಳುತ್ತಾಳೆ. ಆಗ ದೇವರೇ ಅವಳಿಗೆ ನ್ಯಾಯ ಕೊಡುತ್ತಾರೆ’’ ಎಂದು ನಾಝ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X