Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಹಾಗೂ ಸಂಘ ಪರಿವಾರದ ಮೇಲೆ...

ಬಿಜೆಪಿ ಹಾಗೂ ಸಂಘ ಪರಿವಾರದ ಮೇಲೆ ಕ್ರಮಕ್ಕೆ ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ12 Jan 2018 5:26 PM IST
share
ಬಿಜೆಪಿ ಹಾಗೂ ಸಂಘ ಪರಿವಾರದ ಮೇಲೆ ಕ್ರಮಕ್ಕೆ ಒತ್ತಾಯಿಸಿ ಧರಣಿ

ಚಿಕ್ಕಮಗಳೂರು, ಜ.12: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಜರಂಗದಳ ಮತ್ತುಸಂಘಪರಿವಾರ ಇತರೆ ಗುಂಪುಗಳು ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿದ್ದು, ಸೂಕ್ತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು  ತಹಸಿಲ್ದಾರ್ ಮೂಲಕ ಗೃಹ ಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ನಗರದ ತಾಲ್ಲೂಕು ಕಛೇರಿಯಿಂದ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ದ ಪ್ರತಿಭಟನೆ ನಡೆಸಿದರು. 

ಮಾಜಿ ವಿಎಂಎಲ್‍ಸಿ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಮುಖ್ಯಮಂತ್ರಿಗಳ ವಿರುದ್ದ ಮಾತನಾಡುವ ಯೋಗ್ಯತೇ ಹರಕುಬಾಯಿ ಶೋಭಾ ಕರದ್ಲಾಜೆ ಹಾಗೂ ಬಚ್ಚಲು ಬಾಯಿ ಸಿ.ಟಿ.ರವಿಗೆ ಇಲ್ಲ. ಇವರ ಯೋಗ್ಯತೆ ಏನೆಂದು ಇಡೀ ರಾಜ್ಯಕ್ಕೆ ತಿಳಿದ ವಿಚಾರ ಎಂದರು.

ಈ ಸಮಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್ ವಿಜಯಕುಮಾರ್ ಮಾತನಾಡಿ, ಸಂಘ ಪರಿವಾರದ ವಿವಿಧ ಗುಂಪುಗಳು ರಾಜ್ಯದಲ್ಲಿ ಶಾಂತಿಭಂಗ ಸೃಷ್ಟಿಸುತ್ತಿದ್ದಾರೆ. ಇತ್ತೀಚೆಗೆ ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಬಿಜೆಪಿ ಯುವ ಮೋರ್ಚಾ ಮತ್ತು ಭಜರಂಗದಳ ಮುಖಂಡರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದೊಂದು ತಿಂಗಳಿನಲ್ಲಿ ಧಾನಮ್ಮ, ದೀಪಕ್ ರಾಜ್, ಬಶೀರ್ ಕೊಲೆ ಪ್ರಕರಣಗಳ ಸಹಿತ ಸುಬ್ರಹ್ಮಣ್ಯದಲ್ಲಿ ನಟ-ನಟಿಯರ ಮೇಲೆ ಹಲ್ಲೆಗಳಂತಹ ಹತ್ತು ಹಲವು ಕೃತ್ಯಗಳಲ್ಲಿ ಸಂಘ ಪರಿವಾರದವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಅರಣ್ಯ ಮತ್ತು ವಸತಿ ವಿಹಾರ ನಿಗಮದ ಅಧ್ಯಕ್ಷ ಎ.ಎನ್ ಮಹೇಶ್ ಮಾತನಾಡಿ, ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ ಸತ್ತುಹೋಗಿರುವಂತೆ ಭಾಸವಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಅಪಚಾರವಾಗುತ್ತಿದೆ. ಎಲ್ಲಾ ವರ್ಗ, ಧರ್ಮದವರು ಸಹಬಾಳ್ವೆಯಿಂದ ಸಾಗಬೇಕೆಂದು ಸಂವಿಧಾನದಲ್ಲಿದ್ದರೂ, ಕೇಂದ್ರದ ಬಿಜೆಪಿ ಸರ್ಕಾರ ಧರ್ಮ ಸಂಘರ್ಷವನ್ನು ಹುಟ್ಟುಹಾಕುತ್ತಿದೆ. ಸಂವಿಧಾನದ ಆಶಯಗಳಿಗೆ ತಿಲಾಂಜಲಿ ಇಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಚಾಯತ್ ರಾಜ್ ರಾಜ್ಯಸಂಚಾಲಕ ಬಿ.ಎಂ.ಸಂದೀಪ್ ಮಾತನಾಡಿ, ಶಾಸಕ ಸಿ.ಟಿ.ರವಿ ದೊಡ್ಡಜನರ ಮೇಲೆ ಮಾತನಾಡಿ ದೊಡ್ಡ ವ್ಯಕ್ತಿಯಾಗಲು ಹೊರಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಪಂ ಕ್ಷೇತ್ರಗಳಲ್ಲೂ ಗೆಲ್ಲಲು ಲಾಯಕ್ಕಿಲ್ಲ ಎಂದಿರುವ ಸಿ.ಟಿ.ರವಿ ಸ್ವತಃ ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸಿ 4ನೇ ಸ್ಥಾನಕ್ಕೆ ಹೋಗಿದ್ದನ್ನು ಮರೆತಿದ್ದಾರೆ. ಚಿಕ್ಕಮಗಳೂರಿನಲ್ಲಿ ಕ್ರಿಕೇಟ್ ಬೆಟ್ಟಿಂಗ್, ಡಿ.ವೈ.ಎಸ್.ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣ, ವೇಶ್ಯವಾಟಿಕೆ ಹಗರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವವರು ಸಿ.ಟಿ ರವಿಯ ಶಿಷ್ಯರೇ ಎಂಬುದು ಅವರಿಗೆ ಮರೆತು ಹೋಗಿದೆ ಎಂದು ಆರೋಪಿಸಿದರು.

ಈ ವೇಳೆ ಸಿ.ಡಿ.ಎ ಅಧ್ಯಕ್ಷ ಹನೀಫ್, ಜಿಲ್ಲಾ ಉಪಾಧ್ಯಕ್ಷ ಶಾಂತೇಗೌಡ, ಬ್ಲಾಕ್ ಅಧ್ಯಕ್ಷ ಮಂಜೇಗೌಡ, ವಕ್ತಾರ ರೂಬೆನ್ ಮೊಸಸ್, ಸೇವಾದಳದ ಅಧ್ಯಕ್ಷ ಸಿಲ್ವರ್ ಸ್ಟರ್, ಐ.ಟಿ.ಸೆಲ್ ಅಧ್ಯಕ್ಷ ಕಾರ್ತಿಕ್ ಜಿ.ಚೆಟ್ಟಿಯಾರ್, ನಗರಸಭಾ ಸದಸ್ಯ ಸುರೇಖ ಸಂಪತ್ ರಾಜ್, ಯುವ ಅಧ್ಯಕ್ಷ ಶಿವಕುಮಾರ್, ಪುಷ್ಪಲತಾ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X