Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಪಬ್ಲಿಕ್ ಟಿವಿಗೆ ರಾಜೀನಾಮೆ ನೀಡಿ ಶಶಿ...

ರಿಪಬ್ಲಿಕ್ ಟಿವಿಗೆ ರಾಜೀನಾಮೆ ನೀಡಿ ಶಶಿ ತರೂರ್ ಕ್ಷಮೆ ಕೋರಿದ ಪತ್ರಕರ್ತ

ವಾರ್ತಾಭಾರತಿವಾರ್ತಾಭಾರತಿ12 Jan 2018 6:20 PM IST
share
ರಿಪಬ್ಲಿಕ್ ಟಿವಿಗೆ ರಾಜೀನಾಮೆ ನೀಡಿ ಶಶಿ ತರೂರ್ ಕ್ಷಮೆ ಕೋರಿದ ಪತ್ರಕರ್ತ

ಹೊಸದಿಲ್ಲಿ,ಜ.12 : ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಟ್ವಿಟ್ಟರ್ ನಲ್ಲಿ ತಾವು ಹಾಗೂ ರಿಪಬ್ಲಿಕ್ ಟಿವಿಯ ಮಾಜಿ ಪತ್ರಕರ್ತರೊಬ್ಬರು ಜತೆಯಾಗಿರುವ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಈ ಪತ್ರಕರ್ತ ಕ್ಷಮೆ ಕೋರಲು ತಮ್ಮ ಬಳಿ ಬಂದಿದ್ದಾಗಿ ತರೂರ್ ಹೇಳಿಕೊಂಡಿದ್ದಾರೆ.

ತಮಗೆ ಕಿರುಕುಳ ನೀಡಲೆಂದು ಅರ್ನಬ್ ಗೋಸ್ವಾಮಿಯ  ರಿಪಬ್ಲಿಕ್ ಟಿವಿ ವಾಹಿನಿ ಆದೇಶ ನೀಡಿದ್ದನ್ನು ಧಿಕ್ಕರಿಸಿ  ದೀಪು ಅಬಿ ವರ್ಗೀಸ್ ಎಂಬ ಹೆಸರಿನ ಈ ಪತ್ರಕರ್ತ ತಮ್ಮ ಉದ್ಯೋಗಕ್ಕೆ  ರಾಜೀನಾಮೆ ನೀಡಿದ್ದಾಗಿ ಹಾಗೂ ಪ್ರೆಸ್ ಕ್ಲಬ್ ನಲ್ಲಿ ತಮ್ಮನ್ನು ಭೇಟಿಯಾಗಿ ಕ್ಷಮೆ ಕೋರಿದ್ದಾರೆಂದು ತರೂರ್ ಟ್ವೀಟ್ ಮಾಡಿದ್ದಾರೆ.

“ಟಿವಿಎಂ ಪ್ರೆಸ್ ಕ್ಲಬ್ ನಲ್ಲಿ ನನಗೆ ಕಿರುಕುಳ ನೀಡುವಂತೆ ಆದೇಶವನ್ನು ರಿಪಬ್ಲಿಕ್ ಟಿವಿಯಿಂದ ಪಡೆದ ನಂತರ ರಾಜೀನಾಮೆ ನೀಡಿದ ಪತ್ರಕರ್ತ ದೀಪು ಅಬಿ ವರ್ಗೀಸ್ ಅವರ ನೈತಿಕ ಸ್ಥೈರ್ಯ ನನ್ನ ಮನ ಮುಟ್ಟಿದೆ.  ಟೈಮ್ಸ್ ನೌ ವಾಹಿನಿಯ ಕೆಲ ಮಾಜಿ ಉದ್ಯೋಗಿಗಳಂತೆ ಅವರು ತಮ್ಮ ನಡವಳಿಕೆಗೆ ಕ್ಷಮೆ ಕೋರಿದ್ದಾರೆ,'' ಎಂದು ತರೂರು ಟ್ವೀಟ್ ಹೇಳುತ್ತದೆ.

ವರ್ಗೀಸ್ ಕೂಡ ತರೂರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ ಹಾಗೂ 'ಐ ಜಸ್ಟ್ ವಾಂಟೆಡ್ ಟು ಸ್ಪೀಕ್ ಅಪ್ ಶಶಿ ತರೂರ್' ಎಂದು ಟ್ವೀಟ್ ಮಾಡಿದ್ದಾರೆ. ತಮ್ಮ ಈ ಕ್ರಮಕ್ಕೆ ವರ್ಗೀಸ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಲವರಿಂದ ಪ್ರಶಂಸೆಗೊಳಗಾಗಿದ್ದಾರೆ.

ಶಶಿ ತರೂರ್ ಅವರ ಪತ್ನಿ ಸುನಂದಾ ತರೂರ್ ಹತ್ಯೆಗೆ ಸಂಬಂಧಿಸಿದಂತೆ ಗೋಸ್ವಾಮಿ ಮತ್ತವರ ಟಿವಿ ವಾಹಿನಿ ತರೂರ್ ಅವರ ವಿರುದ್ಧ  ಒಂದು ಅಭಿಯಾನವನ್ನೇ ನಡೆಸುತ್ತಿದ್ದು ಈಗಾಗಲೇ ಈ ಕಾಂಗ್ರೆಸ್ ಸಂಸದ ರಿಪಬ್ಲಿಕ್ ವಾಹಿನಿಯ ವಿರುದ್ಧ ರೂ 2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಈ ಹಿಂದೆ ಶ್ವೇತಾ ತಿವಾರಿ ಎಂಬ ಹಿರಿಯ ಪತ್ರಕರ್ತೆ ಕೂಡ ರಿಪಬ್ಲಿಕ್ ಚಾನೆಲ್ ನಿಂದ ಹೊರ ಬಂದಿದ್ದು ತನ್ನನ್ನು ತರೂರ್ ಅವರು ಉದ್ದೇಶಪೂರ್ವಕವಾಗಿ  ವಾಹಿನಿಯಲ್ಲಿ ಉದ್ಯೋಗ ಹೊಂದುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಚಾನೆಲ್ ಆಡಳಿತ ತನಗೆ ನಿರಂತರ ಕಿರುಕುಳ ನೀಡಿತ್ತು ಎಂದು ಆಕೆ ದೂರಿದ್ದರು.

Touched by the moral courage of journalist Deepu Aby Varghese who resigned from @republic TV after being ordered to harass me at the Tvm Press Club. He approached me to apologise for his behaviour, as have some former employees of @TimesNow. Decency appreciated. @seegerblues pic.twitter.com/K4CFsPPUNP

— Shashi Tharoor (@ShashiTharoor) January 12, 2018

I just wanted to speak up @ShashiTharoor. Thank you. https://t.co/Opk6hlk33F

— Deepu Aby Varghese (@seegerblues) January 12, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X