Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 115 ‘ಮಹತ್ವಾಕಾಂಕ್ಷೆಯ ಜಿಲ್ಲೆ’ಗಳ ಪಟ್ಟಿ...

115 ‘ಮಹತ್ವಾಕಾಂಕ್ಷೆಯ ಜಿಲ್ಲೆ’ಗಳ ಪಟ್ಟಿ ಅಂತಿಮಗೊಳಿಸಲಿರುವ ನೀತಿ ಆಯೋಗ

ವಾರ್ತಾಭಾರತಿವಾರ್ತಾಭಾರತಿ12 Jan 2018 7:24 PM IST
share
115 ‘ಮಹತ್ವಾಕಾಂಕ್ಷೆಯ ಜಿಲ್ಲೆ’ಗಳ ಪಟ್ಟಿ ಅಂತಿಮಗೊಳಿಸಲಿರುವ ನೀತಿ ಆಯೋಗ

ಹೊಸದಿಲ್ಲಿ, ಜ.12: ಈ ವರ್ಷದ ಎಪ್ರಿಲ್ ತಿಂಗಳೊಳಗೆ 115 ‘ಮಹತ್ವಾಕಾಂಕ್ಷೆಯ ಜಿಲ್ಲೆ’ಗಳ ಶ್ರೇಯಾಂಕವನ್ನು ನೀತಿ ಆಯೋಗ ಅಂತಿಮಗೊಳಿಸಲಿದೆ. 115 ಹಿಂದುಳಿದ ಜಿಲ್ಲೆಗಳನ್ನು 10 ಮಾನದಂಡದ ಆಧಾರದಲ್ಲಿ ಪಟ್ಟಿ ಮಾಡಲಾಗುವುದು ಎಂದು ‘ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿವರ್ತನೆ’ಯ ಕುರಿತು ನಡೆದ ಸಮಾವೇಶದಲ್ಲಿ ನೀತಿ ಆಯೋಗ ತಿಳಿಸಿದೆ. ಪೌಷ್ಟಿಕ ಆಹಾರ, ಶಿಕ್ಷಣ, ಆರೋಗ್ಯ ಸೇವೆ ಮುಂತಾದ 10 ಮಾನದಂಡಗಳನ್ನು ಆಧಾರವಾಗಿಟ್ಟುಕೊಂಡು ಈ ಪಟ್ಟಿಯನ್ನು ರಚಿಸಲಾಗುವುದು. ಈ ಜಿಲ್ಲೆಗಳನ್ನು ಕ್ಷಿಪ್ರವಾಗಿ ಪರಿವರ್ತನೆಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇಂದ್ರ ಸರಕಾರ ಹೊಂದಿದೆ.

ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ವಾಸ್ತವಿಕ ಮೇಲ್ವಿಚಾರಣೆಗೆ ಸೂಕ್ತ ವ್ಯವಸ್ಥೆಯೊಂದನ್ನು ಎಪ್ರಿಲ್ ತಿಂಗಳೊಳಗೆ ರಚಿಸಲಾಗುವುದು ಎಂದು ನೀತಿ ಆಯೋಗದ ವೆಬ್‌ಸೈಟ್‌ನಲ್ಲಿ ಗುರುವಾರ ತಿಳಿಸಲಾಗಿದೆ.

 ಕಳೆದ ವಾರ ನಡೆದಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಉದ್ದೇಶಿತ ಗುರಿ ತಲುಪಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಸಲಹೆ, ಪ್ರಸ್ತಾವನೆಗಳನ್ನು ಅಂಬೇಡ್ಕರ್ ಜನ್ಮದಿನಾಚರಣೆಯ ದಿನವಾದ ಎಪ್ರಿಲ್ 14ರ ಮೊದಲು ಸಲ್ಲಿಸುವಂತೆ 115 ಅಪೇಕ್ಷಣೀಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಅಧಿಕಾರಿಗಳಿಗೆ ಸೂಚಿಸಿದ್ದರು. ಕನಿಷ್ಠ ಪ್ರಯತ್ನದಲ್ಲಿ ಗರಿಷ್ಠ ಫಲ ನೀಡುವ ಯೋಜನೆ ರೂಪಿಸುವಂತೆ ಹಾಗೂ ಆಶಾವಾದ ಮತ್ತು ಸಕಾರಾತ್ಮಕತೆಯ ವಾತಾವರಣ ರೂಪಿಸುವಂತೆ ಪ್ರಧಾನಿ ಕರೆ ನೀಡಿದ್ದರು.

ಉಳಿದ ಮೂರು ತಿಂಗಳಲ್ಲಿ ಗೋಚರಕ್ಕೆ ಬರುವಂತಹ ಫಲಿತಾಂಶ ಸಾಧಿಸಲು ಸಂಘಟಿತ ಪ್ರಯತ್ನ ನಡೆಸಲು ಕರೆ ನೀಡಿದ್ದ ಪ್ರಧಾನಿಯವರು, ಈ 115 ಜಿಲ್ಲೆಗಳು ನವಭಾರತ ನಿರ್ಮಾಣ ಕಾರ್ಯದಲ್ಲಿ ಬುನಾದಿಯಾಗಿರಬೇಕು ಎಂದು ಹೇಳಿದ್ದರು.

ನಿರ್ದಿಷ್ಟ ಅಭಿವೃದ್ಧಿ ಮಾನದಂಡಕ್ಕಿಂತ ಬಹಳಷ್ಟು ಹಿಂದುಳಿದಿರುವ ಜಿಲ್ಲೆಗಳ ತ್ವರಿತ ಮಾರ್ಪಾಡು ಪ್ರಕ್ರಿಯೆಗೆ ಪ್ರಮುಖ ಕಾರ್ಯನೀತಿಯನ್ನು ಕೇಂದ್ರ ಸರಕಾರ ಅನುಷ್ಟಾನಗೊಳಿಸಿದೆ.ಈ ಜಿಲ್ಲೆಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೈಗೊಳ್ಳುವ ಪ್ರಯತ್ನಗಳನ್ನು ಸಂಘಟಿಸಲು ಹೆಚ್ಚುವರಿ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಶ್ರೇಣಿಯ ಹಿರಿಯ ಸರಕಾರಿ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X