Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಶೂರು ವಿದ್ಯಾರ್ಥಿ ಅಸಹಜ ಸಾವಿನ...

ತ್ರಿಶೂರು ವಿದ್ಯಾರ್ಥಿ ಅಸಹಜ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ12 Jan 2018 7:52 PM IST
share
ತ್ರಿಶೂರು ವಿದ್ಯಾರ್ಥಿ ಅಸಹಜ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ

ತಿರುವನಂತಪುರಂ, ಜ.12: ಕಳೆದ ವರ್ಷದ ಜನವರಿಯಲ್ಲಿ ತ್ರಿಶೂರು ಜಿಲ್ಲೆಯ ಕಾಲೇಜ್ ವಿದ್ಯಾರ್ಥಿಯೊಬ್ಬನ ಅಸಹಜ ಸಾವಿನ ಪ್ರಕರಣದ ತನಿಖೆ ಕೇರಳ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲ್ಪಟ್ಟಿದೆ.

ಕೇರಳದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ ಈ ಪ್ರಕರಣದ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಡಿಸೆಂಬರ್ 5ರಂದು ಸಿಬಿಐಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐನ ತಿರುವನಂತಪುರಂ ಘಟಕವು, ಗುರುವಾರ ಎರ್ನಾಕುಲಂನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ನ್ಯಾಯಾಲಯದ ಮುಂದೆ ಎಫ್‌ಐಆರ್ ಮರು ದಾಖಲಿಸಿತ್ತು. ಆದರೆ ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಯಾರನ್ನೂ ಕೂಡಾ ಆರೋಪಿ ಗಳನ್ನಾಗಿ ಹೆಸರಿಸಿಲ್ಲ.

ತ್ರಿಶೂರಿನ ಪಂಬಾಡಿಯಲ್ಲಿರುವ ನೆಹರೂ ಎಂಜಿನಿಯರಿಂಗ್ ಹಾಗೂ ಸಂಶೋಧನಾ ಕೇಂದ್ರ ಕಾಲೇಜ್‌ನ ಪ್ರಥಮ ವರ್ಷದ ವಿದ್ಯಾರ್ಥಿ ಜಿಶ್ನು ಪ್ರಣಯ್‌ನ ಶವ ಕಳೆದ ವರ್ಷದ ಜನವರಿಯಲ್ಲಿ ತಾನಿದ್ದ ಹಾಸ್ಟೆಲ್ ಕೊಠಡಿಯಲ್ಲಿ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

 ಜಿಶ್ನು, ಕಾಲೇಜ್ ಆಡಳಿತವರ್ಗದ ದೈಹಿಕ ಹಾಗೂ ಮಾನಸಿಕ ಕಿರುಕುಳ ಕ್ಕೊಳಗಾಗಿದ್ದನೆಂದು ಆತನ ಹೆತ್ತವರು ಆರೋಪಿಸಿದ್ದರು. ಜಿಶ್ನು ಸಹಪಾಠಿ ಅಮಲ್ ನೀಡಿದ ಹೇಳಿಕೆಯ ಆಧಾರದಲ್ಲಿ ಪಳಯನ್ನೂರು ಪೊಲೀಸರು ಜನವರಿ ಆರರಂದು ಪ್ರಕರಣ ದಾಖಲಿಸಿಕೊಂಡಿದ್ದರು.

2017ರ ಜನವರಿ 6ರಂದು ಕಾಲೇಜ್‌ನಲ್ಲಿ ಪರೀಕ್ಷೆ ನಡೆಯುತ್ತಿದ್ದಾಗ ಜಿಶ್ನು ನಕಲು ಮಾಡುತ್ತಿದ್ದಾಗ, ಆತ ಪರೀಕ್ಷಕರ ಕೈಗೆ ಸಿಕ್ಕಿಬಿದ್ದಿದ್ದ. ಘಟನೆಯಿಂದ ಮಾನಸಿಕ ಒತ್ತಡಕ್ಕೊಳಗಾದ ಆತ ಹಾಸ್ಟೆಲ್‌ನ ಸ್ನಾನಗೃಹದಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಿಶ್ನುವಿನ ಸ್ನೇಹಿತರು ಆತನನ್ನು ರಕ್ಷಿಸಿ, ಒಟ್ಟಪಾಲಂನ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ವಿಫಲವಾಗಿ ಆತ ಕೊನೆಯುಸಿರೆಳೆದಿದ್ದ.

   ಜಿಶ್ನು ಆತ್ಮಹತ್ಯೆ ಮಾಡಿಕೊಂಡಿದ್ದನೆಂಬ ಪೊಲೀಸರ ಹೇಳಿಕೆಯನ್ನು ಪಾಲಕರು ಹಾಗೂ ಸ್ನೇಹಿತರು ನಿರಾಕರಿಸಿದ್ದರು. ಪ್ರಕರಣದ ಕೂಲಂಕುಶ ತನಿಖೆಗೆ ಆಗ್ರಹಿಸಿ ಅವರು ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೆಂಬಲ ದೊಂದಿಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X