Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾರದಲ್ಲಿ ಎರಡು ದಿನ ಬಿಸಿಯೂಟಕ್ಕೆ...

ವಾರದಲ್ಲಿ ಎರಡು ದಿನ ಬಿಸಿಯೂಟಕ್ಕೆ ಸಿರಿಧಾನ್ಯ: ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ12 Jan 2018 8:01 PM IST
share
ವಾರದಲ್ಲಿ ಎರಡು ದಿನ ಬಿಸಿಯೂಟಕ್ಕೆ ಸಿರಿಧಾನ್ಯ: ಕೃಷ್ಣಬೈರೇಗೌಡ

ಬೆಂಗಳೂರು, ಜ.12: ರಾಜ್ಯಾದ್ಯಂತ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆ ಮಾಡುವ ಸಲುವಾಗಿ ಎಲ್ಲ ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದಲ್ಲಿ ಎರಡು ದಿನಗಳ ಕಾಲ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ನೀಡಲಾಗುತ್ತದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕೃಷಿ ಇಲಾಖೆಯು ಅಕ್ಷಯ ಪಾತ್ರ ಸಂಸ್ಥೆಯ ಸಹಯೋಗದಲ್ಲಿ ಇಂಟರ್ ನ್ಯಾಷನಲ್ ಕ್ರಾಪ್ಸ್ ರೀಸರ್ಚ್ ಇನ್ಸ್‌ಟಿಟ್ಯೂಟ್ ಫಾರ್ ದಿ ಸೆಮಿ ಆರಿಡ್ ಟ್ರಾಫಿಕ್ಸ್ ಸಂಸ್ಥೆಯ ಮಾರ್ಗದರ್ಶನದಲ್ಲಿ ನಗರದ ಹಲವು ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾರಂಭಿಕ ಹಂತವಾಗಿ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಒಂದು ಸರಕಾರಿ ಶಾಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಉಳಿದಂತೆ ನಗರದ ವಿವಿಧ 10 ಸರಕಾರಿ ಮತ್ತು ಅನುದಾನಿತ ಶಾಲೆಗಳ 1,622 ಮಕ್ಕಳಿಗೆ ಸಿರಿಧ್ಯಾನ್ಯಯುಕ್ತ ಆಹಾರ ತಲುಪಿಸುವ ಯೋಜನೆ ಇದಾಗಿದೆ. ಈ ಶೈಕ್ಷಣಿಕ ವರ್ಷ ಇದು ಮುಂದುವರೆಯಲಿದೆ. ನಂತರ ಅದಕ್ಕೆ ಸಂಬಂಧಿಸಿದ ತಜ್ಞರ ಸಮಿತಿ ಈ ಆಹಾರ ಪದ್ಧತಿಯಿಂದ ಮಕ್ಕಳ ಆರೋಗ್ಯದ ಮೇಲೆ ಆಗಿರುವ ಪರಿಣಾಮ ಕುರಿತು ವರದಿ ಸಲ್ಲಿಸಲಿದ್ದಾರೆ. ಅದರ ಸಾಧಕ-ಬಾಧಕ ಪರಿಶೀಲಿಸಿ, ರಾಜ್ಯಾದ್ಯಂತ ಈ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದರು.

ಸಿರಿಧಾನ್ಯಗಳಾದ ರಾಗಿ, ಸಾಮೆ, ಸಜ್ಜೆ, ನವಣೆ, ಬುರುಗು, ಊದಲು, ಜೋಳದಿಂದ ತಯಾರಿಸಿದ ಬಿಸಿಬೇಳೆ ಬಾತ್, ಕೊಬ್ಬರಿ ರೈಸ್, ಪೊಂಗಲ್, ಕಿಚಡಿ, ಪಲಾವ್‌ನ್ನು ಬಿಸಿಯೂಟದ ಜತೆಗೆ ವಾರಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ಮೂಲಕ ಮಕ್ಕಳಿಗೆ ಸ್ವಾಭಾವಿಕವಾಗಿ ಪೌಷ್ಠಿಕಾಂಶಭರಿತ ಆಹಾರ ನೀಡಲಾಗುವುದು. ಈ ಸಿರಿಧಾನ್ಯಗಳಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಪೌಷ್ಠಿಕಾಂಶ ಭದ್ರತೆಗೆ ದೇಶಕ್ಕೆ ಇದು ಮಾದರಿಯಾಗಿದೆ ಎಂದರು.

ಇತ್ತೀಚೆಗೆ ಮಕ್ಕಳಲ್ಲಿ ಮಧುಮೇಹ ಪ್ರಕರಣ ಹೆಚ್ಚು ಕಂಡುಬರುತ್ತಿದೆ. ಇದರಿಂದ ಕೇವಲ ಮಕ್ಕಳ ಮೇಲೆ ಮಾತ್ರವಲ್ಲದೆ ಸಮಾಜ ಹಾಗೂ ದೇಶಕ್ಕೆ ಹಾನಿ. ಹಾಗಾಗಿ ಅಗತ್ಯ ಪೌಷ್ಠಿಕಾಂಶ ಪೂರೈಕೆಗೆ ಹೆಚ್ಚು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅಕ್ಷಯ ಪಾತ್ರೆ ಫೌಂಡೇಷನ್ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಮಾತನಾಡಿ, ಸರಕಾರಿ ಶಾಲಾ ಮಕ್ಕಳಿನಲ್ಲಿನ ಅಪೌಷ್ಠಿಕತೆ ಹೋಗಲಾಡಿಸಲು ರಾಜ್ಯ ಸರಕಾರ ಮತ್ತು ಇಕ್ರಿಸ್ಯಾಟ್ ಜತೆಗೂಡಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಪ್ರಾಯೋಗಿಕ ಅವಧಿ ಮುಗಿದ ನಂತರ ಅದರಿಂದ ಹೊರಬರುವ ವರದಿ ಆಧರಿಸಿ ರಾಜ್ಯಾದ್ಯಂತ ಶೀಘ್ರದಲ್ಲೇ ವಿಸ್ತರಿಸಲಾಗುವುದು ಎಂದು ಹೇಳಿದರು.

ಶೇ.10 ಹೆಚ್ಚಳ
ರಾಜ್ಯದಲ್ಲಿ ಸಿರಿಧಾನ್ಯಗಳನ್ನು ಸೇವನೆ ಮಾಡುವವರ ಸಂಖ್ಯೆ ಹೆಚ್ಚಾದಂತೆ, ಅದನ್ನು ಬೆಳೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೂ ರಾಗಿ, ಜೋಳ, ಸಜ್ಜೆಯಂತಹ ಸಿರಿಧಾನ್ಯಗಳನ್ನು 18 ಲಕ್ಷ ಹೆಕ್ಟೇರ್‌ನಲ್ಲಿ ಹಾಗೂ ಇತರೆ ಸಿರಿಧ್ಯಾನಗಳನ್ನು 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದೆ. ಆದರೆ, ಈ ಬಾರಿ ಬೆಳೆ ಪ್ರಮಾಣ ಶೇ.10ರಷ್ಟು ಹೆಚ್ಚಿದೆ.
-ಕೃಷ್ಣ ಬೈರೇಗೌಡ, ಕೃಷಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X