Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರೈಸ್ತ ಸಮುದಾಯದ ಶಿಕ್ಷಣ, ಆರೋಗ್ಯ,...

ಕ್ರೈಸ್ತ ಸಮುದಾಯದ ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಮಾದರಿ: ಗೃಹ ಸಚಿವ ರಾಮಲಿಂಗ ರೆಡ್ಡಿ

ನವೀಕೃತ ಸೈಂಟ್ ಮೇರಿಸ್ ಓರ್ಥೋಡಕ್ಸ್ ಸಿರಿಯನ್ ಚರ್ಚ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ12 Jan 2018 8:25 PM IST
share
ಕ್ರೈಸ್ತ ಸಮುದಾಯದ ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಮಾದರಿ: ಗೃಹ ಸಚಿವ ರಾಮಲಿಂಗ ರೆಡ್ಡಿ

ಬ್ರಹ್ಮಾವರ, ಜ.12: ಕ್ರೈಸ್ತ ಸಮುದಾಯ ದೇಶದ ಶಿಕ್ಷಣ, ಆರೋಗ್ಯ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಶುಕ್ರವಾರ ನಡೆದ ಬ್ರಹ್ಮಾವರ ಸೈಂಟ್ ಮೇರಿಸ್ ಸಿರಿಯನ್ ಓರ್ಥೋಡಕ್ಸ್ ಕ್ಯಾಥೆಡ್ರಲ್ ಇದರ ನವೀಕೃತ ಕಟ್ಟಡದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಕ್ರೈಸ್ತ ಸಮುದಾಯ ಸದಾ ಶಾಂತಿ ಬಯಸುವ ಸಮಾಜವಾಗಿದ್ದು, ಅವರ ಶಿಸ್ತುಭರಿತ ಸೇವಾಜೀವನ ಇಡೀ ದೇಶಕ್ಕೆ ಮಾದರಿಯಾಗಿದೆ. ಈ ಸಮುದಾಯ ದೇಶದ ಮೂಲೆ ಮೂಲೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸುವುದರೊಂದಿಗೆ ತಮ್ಮ ಶಿಸ್ತುಬದ್ದ ಮತ್ತು ಗುಣಮಟ್ಟದ ಶಿಕ್ಷಣದಿಂದ ಮಾತ್ರವಲ್ಲದೇ ನಿಸ್ವಾರ್ಥ ಸೇವೆಯ ಮೂಲಕ ದೇಶದ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದೆ ಎಂದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಮಲಂಕರ ಓರ್ಥೋಡೋಕ್ಸ್ ಸಿರಿಯನ್ ಸಭಾದ ಪರಮಾಧ್ಯಕ್ಷರಾದ ಪರಮಪೂಜ್ಯ ಮೋರಾನ್ ಮೋರ್ ಬಸ್ಸೆಲಿಯೋಸ್ ಮಾರ್ತೋಮಾ ಪೌಲೋಸ್ ದ್ವಿತೀಯ ಮಾತನಾಡಿ, ದೇವಾಲಯ ಎಂಬುದು ದೇವರು ತನ್ನ ಅನುಯಾಯಿಗಳಿಗೆ ಬೆಳಕು ನೀಡುವ ಸ್ಥಳವಾಗಿದೆ. ಯೇಸುಸ್ವಾಮಿ ಹೇಳಿದಂತೆ ದೇವಾಲಯದ ಮೂಲಕ ನಾವು ಬಡವರ, ದೀನದಲಿತರ ಸೇವೆಯೊಂದಿಗೆ ದೇವರ ಪ್ರೀತಿ ಯನ್ನು ಹಂಚಿಕೊಳ್ಳಬೇಕಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕ್ರೈಸ್ತ ಸಮುದಾಯದ ಏಳಿಗೆಗೆ ಸದಾ ಕಟಿಬದ್ದವಾಗಿದೆ. ಬ್ರಹ್ಮಾವರ ಚರ್ಚಿನ ಕಟ್ಟಡಕ್ಕೂ ಸರಕಾರ 50 ಲಕ್ಷರೂ. ಅನುದಾನ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಚರ್ಚಿನ ವಿಕಾರ್ ಜನರಲ್ ವಂ. ಸಿ.ಎ. ಐಸಾಕ್, ಟ್ರಸ್ಟಿ ಅನಿಲ್ ರೊಡ್ರಿಗಸ್, ಕಟ್ಟಡ ಸಮಿತಿಯ ಸಂಚಾಲಕ ಅಲನ್ ರೋಹನ್ ವಾಝ್, ಕಾರ್ಯದರ್ಶಿ ಐವನ್ ಸುವಾರಿಸ್, ವಿಲ್ಸನ್ ಲೂವಿಸ್ ಇವರುಗಳನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಉಡುಪಿ ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ, ಬ್ರಹ್ಮಾವರ ಸೀರಿಯನ್ ಓರ್ಥೊಡಕ್ಸ್ ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ.ಯಾಕೂಬ್ ಮಾರ್ ಏಲಿಯಾಸ್, ಕೊಲ್ಕತ್ತಾ ಧರ್ಮಪ್ರಾಂತದ ಬಿಷಪ್ ಜೋಸೆಫ್ ಮಾರ್ ದಿಯಾನಿಯೊಸ್, ಮುಂಬೈ ಧರ್ಮಪ್ರಾಂತದ ಗೀರ್ ವರ್ಗೀಸ್ ಮಾರ್ ಕೂರಿಲೋಸ್, ಅಹಮದಾಬಾದ್ ಧರ್ಮಪ್ರಾಂತದ ಗೀರ್ ವರ್ಗೀಸ್ ಮಾರ್ ಯೂಲಿ ಯೋಸ್, ಬೆಂಗಳೂರು ಧರ್ಮಪ್ರಾಂತದ ಅಬ್ರಹಾಂ ಮಾರ್ ಸೆರಾಫೀಮ್, ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ನಾಯಕ್, ವಂ.ಡಾ. ಎಂ.ಒ. ಜೋನ್, ಕಿರಿಮಂಜೇಶ್ವರ ಮೊಹ್ಮದೀಯ ಜುಮ್ಮಾ ಮಸೀದಿಯ ಮುಸ್ಲಿಯಾರ್ ಹಾಜಿ ಕೆ ಇಸ್ಮಾಯಿಲ್ ನಾವುಂದ, ಸಹಾಯಕ ಧರ್ಮಗುರುಗಳಾದ ವಂ.ಲೋರೆನ್ಸ್ ಡಿಸೋಜಾ, ವಂ ಡೇವಿಡ್ ಕ್ರಾಸಾತಿ, ವಂ. ಅಬ್ರಾಹಾಂ ಕುರಿಯಾಕೋಸ್, ಹಾಗೂ ಇತರರು ಉಪಸ್ಥಿತರಿದ್ದರು.

ಚರ್ಚಿನ ವಿಕಾರ್ ಜನರಲ್ ವಂ.ಸಿ.ಎ.ಐಸಾಕ್ ಸ್ವಾಗತಿಸಿ, ಟ್ರಸ್ಟಿ ಅನಿಲ್ ರೊಡ್ರಿಗಸ್ ವಂದಿಸಿದರು. ಅನಿಲ್ ಲೋಬೊ ಮತ್ತು ಅರೂರು ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಲೋಕಾರ್ಪಣೆ: ಇಂದು ಬೆಳಗಿನ ಜಾವ 6:30ರಿಂದ ಕೆಥೆಡ್ರಲ್ ಕಟ್ಟಡದ ಲೋಕಾರ್ಪಣೆ, ಆಶೀರ್ವಚನ ಹಾಗೂ ಶುದ್ದಿಕರಣ ಕಾರ್ಯಕ್ರಮ ಜರುಗಿತು. ಮಲಂಕರ ಓರ್ಥೋಡೋಕ್ಸ್ ಸಿರಿಯನ್ ಸಭಾದ ಪರಮಾಧ್ಯಕ್ಷರಾದ ಪರಮಪೂಜ್ಯ ಮೋರಾನ್ ಮೋರ್ ಬಸ್ಸೆಲಿಯೋಸ್ ಮಾರ್ತೋಮಾ ಪೌಲೋಸ್ ದ್ವಿತೀಯರು ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ರಾತ್ರಿ ಪ್ರಾರ್ಥನೆ, ಪ್ರಭಾತ ಪ್ರಾರ್ಥನೆ ಬಳಿಕ ಪವಿತ್ರ ಶುದ್ದಿಕರಣದ ಎರಡನೇ ಭಾಗ ಪ್ರಾರಂಭವಾಯಿತು. ದೇವಳದ ಎಲ್ಲಾ ಕಡೆ ಪವಿತ್ರ ಗಂಧವನ್ನ ಹಚ್ಚುವ ಮೂಲಕ ಶುದ್ಧಿಕರಿಸಿ, ಪವಿತ್ರ ಶಿಲುಬೆಯನ್ನ ಪ್ರತಿಷ್ಟೆ ಮಾಡಲಾಯಿತು. ನಂತರ ಪವಿತ್ರ ಬಲಿಪೂಜೆಯನ್ನ ನೆರವೇರಿಸಲಾಯಿತು.

ಪವಿತ್ರ ತೀರ್ಥಕ್ಷೇತ್ರವಾಗಿ ಘೋಷಣೆ

ಬ್ರಹ್ಮಾವರದ ಸೈಂಟ್ ಮೇರಿಸ್ ಓರ್ಥೋಡಾಕ್ಸ್ ಸಿರಿಯನ್ ಚರ್ಚ್‌ನ್ನು ಪವಿತ್ರ ತೀರ್ಥ ಕ್ಷೇತ್ರವನ್ನಾಗಿ ಪರಮಾಧ್ಯಕ್ಷ ಪ.ಪೂ. ಮಾರ್ತೋಮಾ ಪೌಲೋಸ್ ದ್ವಿತೀಯ ಇದೇ ಸಂದರ್ಭ ಘೋಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X