Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಿರುಗೇಟು ನೀಡಲು ಕೊಹ್ಲಿ ಪಡೆ ಸಂಕಲ್ಪ

ತಿರುಗೇಟು ನೀಡಲು ಕೊಹ್ಲಿ ಪಡೆ ಸಂಕಲ್ಪ

ಜ.13ರಂದು ದಕ್ಷಿಣ ಆಫ್ರಿಕ ವಿರುದ್ಧ ಸೆಂಚೂರಿಯನ್ನಲ್ಲಿ ಎರಡನೇ ಕ್ರಿಕೆಟ್ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ12 Jan 2018 11:27 PM IST
share
ತಿರುಗೇಟು ನೀಡಲು ಕೊಹ್ಲಿ ಪಡೆ ಸಂಕಲ್ಪ

ಸೆಂಚೂರಿಯನ್,ಜ.12: ದಕ್ಷಿಣ ಆಫ್ರಿಕ ವಿರುದ್ಧ ಮೊದಲ ಕ್ರಿಕೆಟ್ ಟೆಸ್ಟ್‌ನಲ್ಲಿ ಸೋಲು ಅನುಭವಿಸಿದ ಟೀಮ್ ಇಂಡಿಯಾ ಶನಿವಾರ ಇಲ್ಲಿ ಆರಂಭವಾಗಲಿರುವ ಎರಡನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಗೆಲ್ಲುವ ಸಂಕಲ್ಪ ಮಾಡಿದೆ.

ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ದಕ್ಷಿಣ ಆಫ್ರಿಕ ತಂಡ ಇನ್ನೊಂದು ಪಂದ್ಯದಲ್ಲಿ ಜಯ ಗಳಿಸಿದರೆ 3 ಪಂದ್ಯಗಳ ಸರಣಿಯನ್ನು 2-0 ಮುನ್ನಡೆಯೊಂದಿಗೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

 ಭಾರತಕ್ಕೆ ಎರಡನೇ ಟೆಸ್ಟ್ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ. ಒಂದು ವೇಳೆ ಭಾರತ ಸೋತರೆ ಸತತ 9 ಸರಣಿಗಳಲ್ಲಿ ಗೆಲುವಿನ ಅಭಿಯಾನ ಕೊನೆಗೊಳ್ಳಲಿದೆ. ಮೊದಲ ಟೆಸ್ಟ್‌ನಲ್ಲಿ 72 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದ ಟೀಮ್ ಇಂಡಿಯಾಕ್ಕೆ ಹೊಸ ಸವಾಲು ಎದುರಾಗಲಿದೆ. ಸೆಂಚೂರಿಯನ್ ಟೆಸ್ಟ್‌ನ ಅಂತಿಮ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಲೋಕೇಶ್ ರಾಹುಲ್, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ ಎದುರು ನೋಡುತ್ತಿದ್ದಾರೆ.

    ಭಾರತ ತಂಡ 2018ರಲ್ಲಿ ಟೆಸ್ಟ್‌ನಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದೆ.2018-19ರಲ್ಲಿ ಭಾರತ ವಿದೇಶದಲ್ಲಿ 12 ಟೆಸ್ಟ್‌ಗಳನ್ನು ಆಡಲಿದೆ. ಭಾರತದ ವಿರುದ್ಧ ಆಫ್ರಿಕ 2-0 ಅಂತರದಲ್ಲಿ ಜಯ ಗಳಿಸಿದರೂ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆಯಲು ಸಾಧ್ಯವಿಲ್ಲ. ಸೆಂಚೂರಿಯನ್‌ನಲ್ಲಿ ರನ್ ಹೊಳೆ ಹರಿಯುವ ಸಾಧ್ಯತೆ ಇದೆ. ಇಲ್ಲಿ ದಕ್ಷಿಣ ಆಫ್ರಿಕ ಹೆಚ್ಚು ಬಲಿಷ್ಠವಾಗಿದೆ. ಭಾರತ ಸೇರಿದಂತೆ ವಿಶ್ವದ ನಾನಾ ತಂಡಗಳು ಇಲ್ಲಿ ಈ ಹಿಂದೆ ಟೆಸ್ಟ್ ಆಡಿ ಹೀನಾಯ ಸೋಲಿನೊಂದಿಗೆ ವಾಪಸಾಗಿದ್ದವು. ಇಲ್ಲಿ 22 ಟೆಸ್ಟ್‌ಗಳನ್ನು ಆಡಲಾಗಿತ್ತು. ಎರಡು ದ್ವಿಶತಕಗಳು ಸೇರಿದಂತೆ 39 ಶತಕಗಳು ದಾಖಲಾಗಿವೆ. ಈ ಕಾರಣದಿಂದಾಗಿ ದಕ್ಷಿಣ ಆಫ್ರಿಕ ಎರಡನೇ ಟೆಸ್ಟ್‌ನಲ್ಲಿ ಗೆಲುವಿನೊಂದಿಗೆ ಸರಣಿ ಗೆಲುವಿನ ಕನಸು ಕಾಣುತ್ತಿದೆ.

ಸ್ಪಾಟ್‌ಲೈಟ್: ದಕ್ಷಿಣ ಆಫ್ರಿಕ ತಂಡದಲ್ಲಿ ಡೇಲ್ ಸ್ಟೇಯ್ನಿ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ.ಮೊರ್ನೆ ಮೊರ್ಕೆಲ್ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವರು. ಅವರಿಗೆ ಈ ಕ್ರೀಡಾಂಗಣದಲ್ಲಿ ಆಡಿರುವ ಸಾಕಷ್ಟು ಅನುಭವ ಇದೆ. ವೇಗಿ ವೆರ್ನಾನ್ ಫಿಲ್ಯಾಂಡರ್ ಕಳೆದ ಟೆಸ್ಟ್‌ನಲ್ಲಿ ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದರು. ರಬಾಡ ಅವರು ಟೆಸ್ಟ್ ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ನಂ. 1 ಸ್ಥಾನ ಗಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಎರಡೂವರೆ ಗಂಟೆಗಳ ಕಾಲ ಬ್ಯಾಟಿಂಗ್ ನಡೆಸಿದ್ದರು. ಆದರೆ ಅವರಿಗೆ 26 ರನ್ ಗಳಿಸಲಷ್ಟೇ ಸಾಧ್ಯವಾಗಿತ್ತು.

ತಂಡದ ಸಮಾಚಾರ: ದಕ್ಷಿಣ ಆಫ್ರಿಕ ತಂಡ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಸ್ಟೇಯ್ನಿ ಜಾಗಕ್ಕೆ ಕ್ರಿಸ್ ಮೋರಿಸ್, ಲುಂಗಿ ನೆಗಿಡಿ ಮತ್ತು ಆ್ಯಂಡ್ಲೆ ಫೆಹ್ಲುಕಾವ್ ಮತ್ತು ದುವನ ಆಲಿವರ್ ಕಣ್ಣಿಟ್ಟಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ನಲ್ಲಿ ತಂಡದಲ್ಲಿ ಬದಲಾವಣೆಯ ಬಗ್ಗೆ ಸುಳಿವು ನೀಡಿಲ್ಲ. ಹಾರ್ದಿಕ್ ಪಾಂಡ್ಯ ಎರಡನೇ ಟೆಸ್ಟ್‌ನಲ್ಲೂ ತನ್ನ ಅಪೂರ್ವ ಫಾರ್ಮ್ ನ್ನು ಮುಂದುವರಿಸುವುದನ್ನು ನಿರೀಕ್ಷಿಸಲಾಗಿದೆ.

ಸಂಭಾವ್ಯ ತಂಡ

►ಭಾರತ:ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ ಪೂಜಾರ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್,ಮುಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ.

►ದಕ್ಷಿಣ ಆಫ್ರಿಕ: ಎಫ್ ಡು ಪ್ಲೆಸಿಸ್(ನಾಯಕ), ಡೀನ್ ಎಲ್ಗರ್, ಏಡೆನ್ ಮಾರ್ಕರಮ್, ಹಾಶಿಮ್ ಅಮ್ಲ, ಎಬಿ ಡಿವಿಲಿಯರ್ಸ್‌, ಕ್ವಿಂಟನ್ ಡೆ ಕಾಕ್, ವೆರ್ನಾನ್ ಫಿಲ್ಯಾಂಡರ್, ಕ್ರಿಸ್ ಮೋರಿಸ್, /ಲುಂಗಿ ನೆಗಡಿ,ಕೇಶವ್ ಮಹಾರಾಜ್,ಕಾಗಿಸೊ ರಬಾಡ, ಮೊರ್ನೆ ಮೊರ್ಕೆಲ್.

ಪಂದ್ಯದ ಸಮಯ: ಮಧ್ಯಾಹ್ನ 2:00 ಗಂಟೆಗೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X