Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜ.13ರಿಂದ ಅಂಡರ್-19 ವಿಶ್ವಕಪ್

ಜ.13ರಿಂದ ಅಂಡರ್-19 ವಿಶ್ವಕಪ್

ಭಾರತಕ್ಕೆ ಆಸ್ಟ್ರೇಲಿಯ ಮೊದಲ ಎದುರಾಳಿ

ವಾರ್ತಾಭಾರತಿವಾರ್ತಾಭಾರತಿ12 Jan 2018 11:39 PM IST
share
ಜ.13ರಿಂದ ಅಂಡರ್-19 ವಿಶ್ವಕಪ್

ಕ್ರೈಸ್ಟ್‌ಚರ್ಚ್(ನ್ಯೂಝಿಲೆಂಡ್), ಜ.12: ಐಸಿಸಿ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿ ಶನಿವಾರ ನ್ಯೂಝಿಲೆಂಡ್‌ನಲ್ಲಿ ಆರಂಭವಾಗಲಿದೆ. ಮೂರು ಬಾರಿಯ ಚಾಂಪಿಯನ್ ಭಾರತ ಸೇರಿದಂತೆ ಒಟ್ಟು 16 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.

 ಯುವ ಆಟಗಾರರಿಗೆ ಅತ್ಯಂತ ಪ್ರಮುಖವಾಗಿರುವ ಈ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ಸ್ಟೀವನ್ ಸ್ಮಿತ್‌ರಂತಹ ಪ್ರತಿಭಾವಂತರು ಬೆಳಕಿಗೆ ಬಂದಿದ್ದಾರೆ. ಹೀಗಾಗಿ ಪ್ರತಿ ಆವೃತ್ತಿಯ ಟೂರ್ನಿಯು ಹೆಚ್ಚು ಮಹತ್ವ ಪಡೆಯುತ್ತಾ ಬಂದಿದೆ.

ಶನಿವಾರ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ತಂಡವನ್ನು ಎದುರಿಸುವ ಮೂಲಕ ಟೂರ್ನಿ ಆರಂಭವಾಗಲಿದೆ. ಮೊದಲ ದಿನ ಆತಿಥೇಯ ನ್ಯೂಝಿಲೆಂಡ್ ತಂಡ ಹಾಲಿ ಚಾಂಪಿಯನ್ ವೆಸ್ಟ್‌ಇಂಡೀಸ್‌ನ್ನು ಎದುರಿಸಲಿದೆ.

 ಏಷ್ಯಾಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಭಾರತ ತಂಡ ರವಿವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಮುಖಾಮುಖಿಯಾಗಲಿದೆ. ‘‘ನಾವು ಈ ಟೂರ್ನಮೆಂಟ್‌ನ್ನು ಆಡಿರಲಿಲ್ಲ. 1988ರ ಬಳಿಕ 10 ವರ್ಷಗಳ ಕಾಲ ಕಿರಿಯರ ವಿಶ್ವಕಪ್ ಆಯೋಜಿಸಿರಲಿಲ್ಲ. ಹಾಗಾಗಿ ಈ ಟೂರ್ನಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ನಿಮಗೆ ಈ ಟೂರ್ನಿಯಲ್ಲಿ ಭಾಗವಹಿಸುವ ಉತ್ತಮ ಅವಕಾಶ ಲಭಿಸಿದೆ ಎಂದು ಆಟಗಾರರಿಗೆ ಹೇಳಿದ್ದೇನೆ’’ ಎಂದು ಭಾರತದ ಅಂಡರ್-19 ತಂಡದ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಅಂಡರ್-19 ವಿಶ್ವಕಪ್‌ನ ಪ್ರತಿ ಆವೃತ್ತಿಯಲ್ಲೂ ಉತ್ತಮ ಆಟಗಾರರು ಬೆಳಕಿಗೆ ಬಂದಿದ್ದಾರೆ. 2016ರ ಆವೃತ್ತಿಯಲ್ಲಿ ರಿಷಬ್ ಪಂತ್ ಹಾಗೂ ಅಲ್ಝಾರಿ ಜೋಸೆಫ್ ಉತ್ತಮ ಪ್ರದರ್ಶನದಿಂದ ಗಮನ ಸೆಳೆದಿದ್ದರು. ಮೂರು ಬಾರಿಯ ಚಾಂಪಿಯನ್ ಭಾರತ ಫೈನಲ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಸೋತಿತ್ತು.

ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಆಟಗಾರರು ಈಗಾಗಲೇ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದು, ಭಾರೀ ನಿರೀಕ್ಷೆ ಮೂಡಿಸಿದ್ದಾರೆ.

ಭಾರತದ ನಾಯಕ ಪೃಥ್ವಿ ಶಾ, ಸಹ ಆಟಗಾರ ಶುಭಂ ಗಿಲ್, ಆಸ್ಟ್ರೇಲಿಯದ ನಾಯಕ ಜೇಸನ್ ಸಂಘ, ಪಾಕಿಸ್ತಾನದ ವೇಗಿ ಶಾಹೀನ್ ಅಫ್ರಿದಿ, ಅಫ್ಘಾನಿಸ್ತಾನದ ಉದಯೋನ್ಮುಖ ಆಟಗಾರ ಬಶೀರ್ ಶಾ ಭರವಸೆ ಮೂಡಿಸಿದ್ದಾರೆ.

ಶಾ, ಗಿಲ್, ಸಂಘ ಹಾಗೂ ಶಾ ಈಗಾಗಲೇ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿದ್ದಾರೆ. ಎಡಗೈ ವೇಗದ ಬೌಲರ್ ಅಫ್ರಿದಿ ಖ್ವಾದ್-ಇ-ಆಝಂ ಟ್ರೋಫಿಯಲ್ಲಿ 39 ರನ್‌ಗೆ 8 ವಿಕೆಟ್‌ಗಳನ್ನು ಕಬಳಿಸಿದ್ದರು. ಅಫ್ಘಾನ್‌ನ 17ರ ಹರೆಯದ ಬಶೀರ್ ಶಾ ಏಳು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 121.77ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿ ಆಸ್ಟ್ರೇಲಿಯದ ಬ್ಯಾಟಿಂಗ್ ದಂತಕತೆ ಡೊನಾಲ್ಡ್ ಬ್ರಾಡ್ಮನ್(95.14) ಬ್ಯಾಟಿಂಗ್ ಸರಾಸರಿಯನ್ನು ಮುರಿದಿದ್ದರು.

ಭಾರತದ ನಾಯಕ ಶಾ ಜೂನಿಯರ್ ಮಟ್ಟದ ಕ್ರಿಕೆಟ್‌ನಲ್ಲಿ ಮಿಂಚಿದ್ದಲ್ಲದೆ ರಣಜಿ ಟ್ರೋಫಿಯ ತನ್ನ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ಟೂರ್ನಿಯಲ್ಲಿ ಸ್ಟೀವ್ ವಾ ಹಾಗೂ ಮಖಾಯ ಎನ್‌ಟಿನಿ ಪುತ್ರರಾದ ಆಸ್ಟಿನ್ ಹಾಗೂ ಥಂಡೊ ಭಾಗವಹಿಸುತ್ತಿದ್ದಾರೆ. ಈ ಇಬ್ಬರು ಕ್ರಮವಾಗಿ ಆಸ್ಟ್ರೇಲಿಯ ಹಾಗೂ ದಕ್ಷಿಣ ಆಫ್ರಿಕವನ್ನು ಪ್ರತಿನಿಧಿಸಲಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯದ ಸಿಇಒ ಜೇಮ್ಸ್ ಸೌಥರ್‌ಲ್ಯಾಂಡ್ ಪುತ್ರ ಕೂಡ ಟೂರ್ನಿಯಲ್ಲಿ ಆಡುತ್ತಿದ್ದಾರೆ.

ಐಪಿಎಲ್ ಆಟಗಾರರ ಹರಾಜು ಈ ತಿಂಗಳಾಂತ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ರಾಂಚೈಸಿಗಳು ಅಂಡರ್-19 ವಿಶ್ವಕಪ್‌ನ ಮೇಲೆ ಕಣ್ಣಿಟ್ಟಿದ್ದಾರೆ. ಪಂತ್ 2016ರಲ್ಲಿ ಬಾಂಗ್ಲಾದೇಶದಲ್ಲಿ ಉತ್ತಮ ಪ್ರದರ್ಶನ ನೀಡಿದಾಗ ಡೆಲ್ಲಿ ತಂಡ ಅವರನ್ನು 1.9 ಕೋ.ರೂ.ಗೆ ಖರೀದಿಸಿತ್ತು.

ಜ.13 ರಿಂದ ಫೆ.5ರ ತನಕ 22 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 16 ತಂಡಗಳು ಏಳು ತಾಣಗಳಲ್ಲಿ ಆಡಲಿದ್ದು, 20 ಪಂದ್ಯಗಳು ನಡೆಯುತ್ತವೆ.

ಭಾರತ ಕ್ರಿಕೆಟ್ ತಂಡ

ಪೃಥ್ವಿ ಶಾ(ನಾಯಕ), ಶುಭಂ ಗಿಲ್, ಆರ್ಯನ್, ಅಭಿಷೇಕ್ ಶರ್ಮ, ಅರ್ಶದೀಪ್ ಸಿಂಗ್, ಹಾರ್ವಿಕ್ ದೇಸಾಯಿ, ಮನ್ಜೋ ತ್ ಕಾರ್ಲ, ಕಮಲೇಶ್ ನಗರ್‌ಕೋಟಿ, ಪಂಕಜ್ ಯಾದವ್, ರಿಯಾನ್ ಪರಾಗ್, ಇಶಾಂತ್ ಪೊರೆಲ್, ಹಿಮಾಂಶು ರಾಣಾ, ಅನುಕೂಲ್ ರಾಯ್, ಶಿವಂ ಮಾವಿ ಹಾಗೂ ಶಿವ ಸಿಂಗ್.

ಭಾರತದ ವೇಳಾಪಟ್ಟಿ

►ಜನವರಿ 14, ರವಿವಾರ

  ಆಸ್ಟ್ರೇಲಿಯ ವಿರುದ್ಧ

►ಜನವರಿ 16, ಮಂಗಳವಾರ

  ಪಪುವಾ ನ್ಯೂ ಗಿನಿ ವಿರುದ್ಧ

►ಜನವರಿ 19, ಶುಕ್ರವಾರ

  ಝಿಂಬಾಬ್ವೆ ವಿರುದ್ಧ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X