Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂಪಲ ನೂರಾನಿ ಯತೀಂ ಖಾನಾದಲ್ಲಿ ವಧು-ವರರ...

ಕುಂಪಲ ನೂರಾನಿ ಯತೀಂ ಖಾನಾದಲ್ಲಿ ವಧು-ವರರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ14 Jan 2018 9:38 PM IST
share

ಉಳ್ಳಾಲ, ಜ. 14: ಬಡವನಾಗಿ ಹುಟ್ಟಿದ ಮಾತ್ರಕ್ಕೆ ಆತ ಬಡವನಾಗಿಯೇ ಸಾಯಬೇಕು ಎಂದೇನೂ ಇಲ್ಲ. ಇಂದು ಬಡತನದ ಕಾರಣಕ್ಕೆ ಯತೀಂ ಖಾನಾದಲ್ಲಿ ಆಶ್ರಯ ಪಡೆದು ಶಿಕ್ಷಣ ಪಡೆದವರು ಮುಂದೊಂದು ದಿನ ಸಮಾಜ, ದೇಶ, ಕುಟುಂಬದ ಆಸ್ತಿಯಾಗಬೇಕು. ಅನಾಥರನ್ನು ಸಲಹುತ್ತಿರುವ ಸಂಸ್ಥೆಯೊಂದು ಸಾಮಾಜಿಕ ಬದ್ಧತೆ ಅರಿತು ಸದ್ದುಗದ್ದವಿಲ್ಲದೆ ಬಡ ಹೆಣ್ಮಕ್ಕಳಿಗೆ ವಿವಾಹ ಭಾಗ್ಯ ಒದಗಿಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಆಹಾರ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

ಕುಂಪಲ ನೂರಾನಿ ಯತೀಂ ಖಾನಾ ಹಾಗೂ ದಾರುಲ್ ಮಸಾಕೀನ್ ಜಂಟಿ ಆಶ್ರಯದಲ್ಲಿ 11 ಜೋಡಿಗಳ ದಾಂಪತ್ಯ ಬೆಳಕು ಕಾರ್ಯಕ್ರಮದಡಿ ಮನೆ ಯಲ್ಲೇ ನಡೆದ ಉಚಿತ ವಿವಾಹ ಸಮಾರಂಭದ ರವಿವಾರ ನಡೆದ ಸಮಾರೋಪ ಹಾಗೂ ವಧು-ವರರ ಸಮಾವೇಶದಲ್ಲಿ ಅವರು ಮಾತನಾಡಿದರು.

ತಾನು ಆಹಾರ ಸಚಿವನಾದ ಬಳಿಕ ರಾಜ್ಯದಲ್ಲಿರುವ ಎಲ್ಲಾ ಅನಾಥಾಲಯಗಳಿಗೆ ಪ್ರತಿ ತಿಂಗಳು 15 ಕೆ.ಜಿಯಂತೆ ಉಚಿತ ಅಕ್ಕಿ ನೀಡಲಾಗುತ್ತಿದ್ದು, ರಾಜ್ಯದ 8 ಸಾವಿರ ಅನಾಥಾಲಯಗಳು ಪ್ರಯೋಜನ ಪಡೆಯುತ್ತಿವೆ ಎಂದು ತಿಳಿಸಿದರು.

ಸಂದೇಶ ಭಾಷಣ ಮಾಡಿದ ಕೋಟೆಕಾರ್ ಮಖ್ದೂಮಿಯಾ ಅರೆಬಿಕ್ ಕಾಲೇಜಿನ ಪ್ರಾಂಶುಪಾಲ ಹಾರೂನ್ ಅಹ್ಸನಿ ಮಾತನಾಡಿ, ಹಣ, ಸಂಪತ್ತು ಇರುವವರು ಸಮಾಜದಲ್ಲಿ ಸಾಕಷ್ಟು ಮಂದಿಯಿದ್ದರೂ ಸಮಾಜಕ್ಕೆ ನೀಡುವವರು ವಿರಳ. ಇಂತಹ ಸಂಪತ್ತಿನಿಂದ ಯಾವುದೇ ಪ್ರಯೋಜನವೂ ಇಲ್ಲ. ಅದರ ಬದಲು ನಮ್ಮಲ್ಲಿರುವ ಹಣ, ಸಂಪತ್ತಿನಲ್ಲಿ ಒಂದು ಭಾಗವನ್ನು ಬಡವರಿಗಾಗಿ ಖರ್ಚು ಮಾಡುವ ವಿಶಾಲ ಮನೋಭಾವನೆ ಅಗತ್ಯ. ನಾವು ಭೂಮಿಯನ್ನು ಬಿಟ್ಟು ಹೋದ ಬಳಿಕವೂ ನಮ್ಮದಾದ ಕುರುಹು ಉಳಿಯಬೇಕಾದರೆ ಸಮಾಜಕ್ಕೆ ನೀಡುವ ಕೊಡುಗೆ ಮುಖ್ಯವಾಗುತ್ತದೆ ಎಂದರು.

ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ.ಮೋನು, ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಉದ್ಯಮಿಗಳಾದ ಎ.ಆರ್.ರಹ್ಮಾನ್, ಆಝಾದ್ ನೌಷಾದ್, ಶೌಕತ್ ಶೌರಿ, ಯು.ಕೆ.ಅಬ್ಬಾಸ್, ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಎಸ್.ಎಂ.ಆರ್.ರಶೀದ್, ಯೇನೆಪೊಯ ವೈದ್ಯಕೀಯ ಕಾಲೇಜಿನ ಸಮಾಜಕಾರ್ಯ ವಿಭಾಗದ ಅಬ್ದುಲ್ ರಝಾಕ್, ಮತ್ತಿತರರು ಉಪಸ್ಥಿತರಿದ್ದರು.

ನೂರಾನಿ ಯತೀಂ ಖಾನಾ ಅಧ್ಯಕ್ಷ ಕೆ.ಎಂ.ಅಬ್ದುಲ್ಲಾ ಸ್ವಾಗತಿಸಿದರು. ವಿವಾಹ ಸಮಿತಿ ಅಧ್ಯಕ್ಷ ಯು.ಎಸ್.ಅಬೂಬಕ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮುಖರಾದ ಎನ್.ಎಸ್.ಉಮರಬ್ಬ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

11 ಜೋಡಿ ದಾಂಪತ್ಯ ಜೀವನಕ್ಕೆ

ಕಳೆದ ನಾಲ್ಕು ವರ್ಷಗಳಿಂದ ಮನೆಯಲ್ಲೇ ಪ್ರಚಾರ ರಹಿತ ವಿವಾಹ ನಡೆಸುತ್ತಾ ಬಂದಿದೆ. ಈ ವರ್ಷ 11 ಹೆಣ್ಮಕ್ಕಳಿಗೆ ಮದುವೆ ಮಾಡಲಾಗಿದೆ. ಜಪ್ಪಿನ ಮೊಗರುವಿನ ಶಾಹಿದ-ಅರ್ಕುಳದ ಫಯಾಝ್, ಉಳ್ಳಾಲ ಮಾರ್ಗತಲೆಯ ಕೌಸರ್-ಮಂಚಿಯ ಅಬ್ದುಲ್ ಶಿಹಾಬ್, ಕುತ್ತಾರ್‌ನ ರುಬೀನಾ-ಇರ್ಷಾದ್, ಮುಕಚ್ಚೇರಿಯ ಸಫ್ನಾರ್-ಹೆಜಮಾಡಿಯ ಕೆ.ನವಾಝ್, ಪಾತೂರಿನ ಸಮಿಯ-ಬಾಕ್ರಬೈಲ್‌ನ ಇಸ್ಮಾಯಿಲ್ ಶರೀಫ್, ಬೋಳಿಯಾರ್‌ನ ಸಫ್ನಾರ್-ಸಜಿಪದ ಅಬ್ದುಲ್ ಜಬ್ಬಾರ್, ಗುರುಪುರದ ರಮೀಝ-ಕುಕ್ಕಾಜೆಯ ಮಹಮ್ಮದ್ ಶಬೀರ್, ಬಂಟ್ವಾಳದ ರಮೀಝ-ಪುತ್ತೂರಿನ ಹಾರಿಸ್, ನೆಕ್ಕಿಲಾಡಿಯ ಸಮೀರ-ಗೇರುಕಟ್ಟೆಯ ಮಹಮ್ಮದ್ ಅಶ್ರಫ್, ಪುತ್ತೂರಿನ ತಸ್ರೀಫ-ಮಹಮ್ಮದ್ ರಫೀಕ್ ಹಾಗೂ ಸುಳ್ಯದ ಆಯಿಶತ್ ಸಾಕೀರ-ಮಡಿಕೇರಿಯ ವಾಸೀಂ ರಫೀವುಲ್ಲಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X