Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟಾದ್ವೈತ

ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟಾದ್ವೈತ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ15 Jan 2018 12:02 AM IST
share
ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟಾದ್ವೈತ

ಕನ್ನಡ ಸಾಹಿತ್ಯದಲ್ಲಿ ವೈದಿಕ ಪರಂಪರೆಯ ಎರಡು ಶಾಖೆಗಳಾದ ಅದ್ವೈತ ಮತ್ತು ದೈತ ತತ್ವಗಳು ಹಾಸು ಹೊಕ್ಕಾಗಿ ಬಳಕೆಯಾಗಿವೆ. ಈ ಎರಡು ತತ್ವಗಳನ್ನಾಧರಿಸಿದ ಅನೇಕ ಕೃತಿಗಳು ಸಾಹಿತ್ಯ ಚರಿತ್ರೆಯಲ್ಲಿ ಕಾಣ ಸಿಗುತ್ತವೆ. ಆದರೆ ಇನ್ನೊಂದು ವೈದಿಕ ಶಾಖೆಯಾದ ವಿಶಿಷ್ಟಾದ್ವೈತ ತತ್ವದಲ್ಲಿ ಸಾಹಿತ್ಯ ಕೃತಿಗಳು ಕನ್ನಡದಲ್ಲಿ ರಚನೆಯಾಗಿಲ್ಲ ಎನ್ನುವುದು ಈವರೆಗಿನ ತಿಳುವಳಿಕೆಯಾಗಿತ್ತು. ಆದರೆ 16ನೇ ಶತಮಾನದಿಂದಲೇ ವಿಶಿಷ್ಟಾದ್ವೈತದಲ್ಲೂ ಕನ್ನಡದಲ್ಲಿ ಸಾಹಿತ್ಯ ರಚನೆಯಾಗಿರುವುದನ್ನು ‘ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟಾದ್ವೈತ’ ಕೃತಿ ಗುರುತಿಸುತ್ತದೆ. ವಿಶಿಷ್ಟಾದೈತದ ಪ್ರಭಾವವನ್ನು ಗುರುತಿಸಿ ಹಲವು ಹಿರಿಯ ವಿದ್ವಾಂಸರು ಬರೆದಿರುವ ಲೇಖನಗಳನ್ನು ಡಾ. ನಾ. ಗೀತಾಚಾರ್ಯ ಅವರು ಸಂಪಾದಿಸಿದ್ದಾರೆ. ವಿಚಾರಗೋಷ್ಠಿಯೊಂದರಲ್ಲಿ ಮಂಡಿಸಿದ ಪ್ರಬಂಧಗಳನ್ನು ಇಲ್ಲಿ ಒಟ್ಟು ಸೇರಿಸಲಾಗಿದೆ. ಬಿ. ಎಂ. ಶ್ರೀ ಸ್ಮಾರಕ ಪ್ರತಿಷ್ಠಾನ ಬೆಂಗಳೂರು ಈ ಕೃತಿಯನ್ನು ಹೊರತಂದಿದೆ.

ವೈದಿಕ ಪರಂಪರೆಯಲ್ಲಿ ರಾಮಾನುಜಾಚಾರ್ಯರ ಕೊಡುಗೆ ಮಹತ್ವವಾದುದು. ಇಂದು ‘ಶೂದ್ರರೆಲ್ಲ ಶಾಶ್ವತ ನರಕವಾಸಿಗಳು’ ಎಂದು ಪ್ರತಿಪಾದಿಸಿದ ಮಧ್ವಾಚಾರ್ಯರಿಗೆ ಸಿಕ್ಕಿದ ಮಹತ್ವ, ತಮ್ಮ ಮಿತಿಯಲ್ಲಿ ಜಾತಿಯನ್ನು ನಿವಾರಿಸಲು ಪ್ರಯತ್ನಿಸಿದ ರಾಮಾನುಜಾಚಾರ್ಯರಿಗೆ ಸಿಕ್ಕಿಲ್ಲ. ಈ ನೆಲೆಯಲ್ಲಿ ವಿಶಿಷ್ಟಾದ್ವೈತದ ಪ್ರಭಾವದಲ್ಲಿ ರೂಪುಗೊಂಡು ಕನ್ನಡ ಸಾಹಿತ್ಯವನ್ನು ಗುರುತಿಸುವ ಕೆಲಸವನ್ನು ಮಾಡಲಾಗಿದೆ. ಹರಿದಾಸ ಸಾಹಿತ್ಯದಿಂದ ಹಿಡಿದು ಕನಕದಾಸ, ಲಕ್ಷ್ಮೀಶ ಮೊದಲಾದವರು ವಿಶಿಷ್ಟಾದ್ವೈತ ಅನುಯಾಯಿಗಳೇ ಆಗಿದ್ದಾರೆ ಎಂದು ಈ ಕೃತಿ ಹೇಳುತ್ತದೆ. 2000ಕ್ಕೂ ಅಧಿಕ ಕೀರ್ತನೆಗಳು ಸಂಗ್ರಹವಾಗಿವೆ. ಕೀರ್ತನ ಸಾಹಿತ್ಯವಷ್ಟೇ ಅಲ್ಲದೆ ಕಂದ, ವೃತ್ತದ ಪದ್ಯ ಗ್ರಂಥಗಳು, ಷಟ್ಪದಿ ಕಾವ್ಯಗಳು, ಗದ್ಯ ಕೃತಿಗಳನ್ನೂ ರಚಿಸಿದ್ದಾರೆ ಎನ್ನುವುದನ್ನು ಕೃತಿ ಹೇಳುತ್ತದೆ. ಡಾ. ಪಿ.ವಿ ನಾರಾಯಣ ಅವರು ‘ಧರ್ಮ ಮತ್ತು ಸಾಹಿತ್ಯ’ವನ್ನು ಅವಲೋಕಿಸಿದ್ದಾರೆ. ನೀಲತ್ತ ಹಳ್ಳಿ ಕಸ್ತೂರಿ ಅವರು ‘ಕನ್ನಡ ವಿಶಿಷ್ಟಾದ್ವೈತ ಧರ್ಮ ಮತ್ತು ಸಂಸ್ಕೃತಿ’ಯನ್ನು ಇಟ್ಟು ಬರೆದಿದ್ದಾರೆ. ಪ್ರೊ. ಜಿ. ಅಶ್ವತ್ಧನಾರಾಯಣ ವಿಶಿಷ್ಟಾದ್ವೈತ ಸಾಹಿತ್ಯ ಕೃತಿಗಳನ್ನು ಪರಿಚಯಿಸಿದ್ದಾರೆ. ರಾಮಶೇಷನ್ ಅವರು ಹರಿದಾಸ ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲಿದ್ದಾರೆ. ವಿಶಿಷ್ಟಾದ್ವೈತದಲ್ಲಿ ಹರಿದಾಸ ಚಳವಳಿ ಮತ್ತು ದೇಸೀ ಸಂಸ್ಕೃತದ ಕುರಿತು ಗೀತಾಚಾರ್ಯರು ಬರೆದಿದ್ದಾರೆ.
148 ಪುಟಗಳ ಈ ಕೃತಿಯ ಮುಖಬೆಲೆ 100 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X